ಕ್ವಿಟ್ ಇಂಡಿಯಾ ಚಳುವಳಿ ನೆನಪಿಗಾಗಿ ಪ್ರಭಾತ್ ಭೇರಿ

- Advertisement -
- Advertisement -

ತ್ರಿವರ್ಣ ಪತಾಕೆಯಡಿ ಎಲ್ಲಾ ಚಳವಳಿಕಾರರೂ ಒಗ್ಗೂಡಿ, ದೇಶದಿಂದ ಪರಕೀಯರನ್ನು ಹೊರದೂಡಲು ಸಿದ್ಧರಾದ ಮಹತ್ವದ ದಿನವಿದು. ಜಾತಿ, ಧರ್ಮ, ಮೇಲು, ಕೀಳು ಎಂಬುದನ್ನು ಬದಿಗೊತ್ತಿ ಒಗ್ಗೂಡಿದಾಗ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ ಎಂದು ಬಿ.ಜೆ.ಪಿ ತಾಲ್ಲೂಕು ಅಧ್ಯಕ್ಷ ಬಿ.ಸಿ.ನಂದೀಶ್ ತಿಳಿಸಿದರು.
ನಗರದಲ್ಲಿ ಮಂಗಳವಾರ ಕ್ವಿಟ್ ಇಂಡಿಯಾ ಚಳುವಳಿ ನೆನಪಿಗಾಗಿ ಬಿ.ಜೆ.ಪಿ ತಾಲ್ಲೂಕು ಘಟಕ ಅರಳೇಪೇಟೆಯ ಬಸವೇಶ್ವರಸ್ವಾಮಿ ದೇವಾಲಯದ ಆವರಣದಲ್ಲಿ ಆಯೋಜಿಸಿದ್ದ ಪ್ರಭಾತ್ಭೇರಿಗೆ ಚಾಲನೆ ನೀಡಿ ಅವರು ಮಾತನಾಡಿದರು.
ಭಾರತದ ಸ್ವಾತಂತ್ರ್ಯ ಸಂಗ್ರಾಮದ ಇತಿಹಾಸದಲ್ಲಿ ಎರಡು ಪ್ರಮುಖ ಹೆಜ್ಜೆ ಗುರುತುಗಳಿವೆ. ಮೊದಲನೆಯದು 1857ರ ಸಿಪಾಯಿ ದಂಗೆ. ಎರಡನೆಯದು 1942ರ ಕ್ವಿಟ್ ಇಂಡಿಯಾ (ಭಾರತ ಬಿಟ್ಟು ತೊಲಗಿ) ಆಂದೋಲನ. ದೇಶದ ಸ್ವಾತಂತ್ರ್ಯ ವೀರರು ‘ಬ್ರಿಟಿಷರೇ ಭಾರತ ಬಿಟ್ಟು ತೊಲಗಿ’ (ಕ್ವಿಟ್ ಇಂಡಿಯಾ) ಎಂಬುದಾಗಿ ಅಂತಿಮ ತಾಕೀತು ನೀಡಿದ ಐತಿಹಾಸಿಕ ದಿನ 1942ರ ಆಗಸ್ಟ್ 9. ಮುಂಬೈಯ ಗೊವಾಲಿಯ ಮೈದಾನದಲ್ಲಿ ಅಂದು ಚಾಲನೆ ನೀಡಿದ ಈ ಹೋರಾಟಕ್ಕೆ ‘ಮಾಡು ಇಲ್ಲವೇ ಮಡಿ’ ಎಂಬ ಘೋಷಣಾ ವಾಕ್ಯವನ್ನು ನೀಡಿದರು.

ರಾಷ್ಟ್ರಧ್ವಜ ಹಿಡಿದು ಸಾಗಿದ ಜನರು
ರಾಷ್ಟ್ರಧ್ವಜ ಹಿಡಿದು ಸಾಗಿದ ಜನರು

ಚಳುವಳಿಯ ತೀಕ್ಷ್ಣತೆಯನ್ನು ಅರಿತ ಬ್ರಿಟಿಷರು, ಬಹುತೇಕ ಪ್ರಮುಖ ನಾಯಕರನ್ನು ಸೆರೆಮನೆಗೆ ಹಾಕಿದ್ದರಿಂದಾಗಿ ನಾಯಕರಿಲ್ಲದೆಯೇ ಚಳುವಳಿ ಉಗ್ರ ಸ್ವರೂಪವನ್ನು ಕಂಡದ್ದು ಈ ಚಳುವಳಿಯ ಹೆಗ್ಗಳಿಕೆ. ಕ್ವಿಟ್ ಇಂಡಿಯ ಚಳುವಳಿಗೆ ಭಾರಿ ಸಂಖ್ಯೆಯ ಬೆಂಬಲ ವ್ಯಕ್ತವಾಗಿ ಸಹಸ್ರಾರು ಸಂಖ್ಯೆಯಲ್ಲಿ ಜನಸ್ತೋಮ ನೆರೆಯಲಾರಂಭಿಸಿ ಹೊಸ ತಿರುವನ್ನು ಕಂಡಿತು. ದೇಶದ ಮೂಲೆ ಮೂಲೆಯಲ್ಲೂ ಈ ಘೋಷಣೆಯು ಜನರನ್ನುಬಡಿದೆಬ್ಬಿಸಿತು. ಕೃಷಿಕರು ಬಹು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದು ಈ ಚಳವಳಿಯ ಬಹು ಮುಖ್ಯ ಅಂಶವಾಗಿತ್ತು. ಬ್ರಿಟಿಷರ ದಬ್ಬಾಳಿಕೆಯು ದೇಶದ ಜನರ ಕಣಕಣದಲ್ಲೂ ರಕ್ತ ಕುದಿಯುವಂತೆ ಮಾಡಿತ್ತು ಎಂಬುದಕ್ಕೆ ಸಾಕ್ಷಿಯಾದ ಘಟನೆ ಕ್ವಿಟ್ ಇಂಡಿಯಾ ಆಂದೋಲನ. ಅದರ ಕಾವಿನ ಪರಿಣಾಮವೇ ಐದು ವರ್ಷದ ಬಳಿಕ ನಾವು 1947ರ ಆಗಸ್ಟ್ 15ರಂದು ಗಳಿಸಿದ ಸ್ವಾತಂತ್ರ್ಯ.
ನಮ್ಮ ದೇಶದ ಸ್ವಾತಂತ್ರ್ಯಕ್ಕೆ ಮೂಲವಾದ ಕ್ವಿಟ್ ಇಂಡಿಯಾ ಆಂದೋಲನದ ದಿನವನ್ನು ತ್ರಿವರ್ಣಧ್ವಜದ ಅಡಿಯಲ್ಲಿ ಹೆಮ್ಮೆಯಿಂದ ಆಚರಿಸುವ ಮೂಲಕ ಈಗಲೂ ಎಲ್ಲರೂ ದೇಶದ ಧ್ವಜದ ಅಡಿಯಲ್ಲಿ ಒಗ್ಗಟ್ಟನ್ನು ಪ್ರದರ್ಶಿಸೋಣ ಎಂದು ಹೇಳಿದರು.
ವಾದ್ಯವೃಂದದೊಡನೆ ರಾಷ್ಟ್ರಧ್ವಜವನ್ನು ಹಿಡಿದ ಬಿ.ಜೆ.ಪಿ ಕಾರ್ಯಕರ್ತರು ನಗರದ ಅರಳೇಪೇಟೆಯ ಬಸವೇಶ್ವರಸ್ವಾಮಿ ದೇವಾಲಯದ ಆವರಣದಿಂದ ವಾಸವಿ ರಸ್ತೆ, ಬಸ್ನಿಲ್ದಾಣ, ಕೋಟೆ ವೃತ್ತ, ಓ.ಟಿ.ವೃತ್ತ ಮತ್ತು ಅಶೋಕ ರಸ್ತೆಯಲ್ಲಿ ಹಾದುಬಂದರು.
ಬಿ.ಜೆ.ಪಿ ತಾಲ್ಲೂಕು ಪ್ರಧಾನ ಕಾರ್ಯದರ್ಶಿ ಮುನಿರಾಜು, ಸುರೇಂದ್ರಗೌಡ, ಸುರೇಶ್, ದೊಣ್ಣಹಳ್ಳಿ ರಾಮಣ್ಣ, ದಾಮೋದರ್, ಸುಜಾತಮ್ಮ, ಮಂಜುಳಮ್ಮ, ಶಿವಮ್ಮ, ರತ್ನಮ್ಮ, ಮುನಿವೆಂಕಟಪ್ಪ, ಕೆಂಪರೆಡ್ಡಿ, ಶ್ರೀನಿವಾಸ್ ಮತ್ತಿತರರು ಹಾಜರಿದ್ದರು.
Sidlaghatta News Desk
Sidlaghatta News Deskhttp://www.sidlaghatta.com
The editorial desk of Sidlaghatta.com (Namma Shidlaghatta), covering civic affairs, agriculture, silk trade, and local government news for Sidlaghatta taluk, Karnataka.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
This site is protected by reCAPTCHA and the Google Privacy Policy and Terms of Service apply.

The reCAPTCHA verification period has expired. Please reload the page.
Captcha verification failed!
CAPTCHA user score failed. Please contact us!