ಶಿಡ್ಲಘಟ್ಟ ತಾಲ್ಲೂಕಿನ ಜಂಗಮಕೋಟೆಯಲ್ಲಿ ಗುರುವಾರ ಕ್ಷೇತ್ರ ಶಿಕ್ಷಣಾಧಿಕಾರಿ ರಘುನಾಥರೆಡ್ಡಿ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳ ಮನೆಗಳಿಗೆ ಭೇಟಿ ನೀಡಿ ಮಾನಸಿಕ ಸ್ಥೈರ್ಯ ತುಂಬಿದರು. ಪೋಷಕರೊಂದಿಗೆ ಮಾತನಾಡಿ ಮಕ್ಕಳಿಗೆ ಮನೆ ಕೆಲಸದ ಹೊರೆ ಕಡಿಮೆ ಮಾಡಿ, ಟೀವಿ ಹಾಕಬೇಡಿ, ಮುಂಜಾನೆ ಎಬ್ಬಿಸಿ ಓದಲು ಹೇಳಿ ಎಂದು ತಿಳಿಸಿದರು. ಶಿಕ್ಷಕರಾದ ಎಂ.ಎಸ್.ಈರಯ್ಯ, ಬೈರಾರೆಡ್ಡಿ, ನಾರಾಯಣಸ್ವಾಮಿ, ಮಂಜುನಾಥ, ಲೋಕೇಶ ಹಾಜರಿದ್ದರು.
- Advertisement -