ಗಂಗಾದೇವಿ ದೇವಾಲಯದಲ್ಲಿ ವಿಮಾನಗೋಪುರದ ಕುಂಭಾಭಿಷೇಕ ಪೂಜಾ ಮಹೋತ್ಸವ

- Advertisement -
- Advertisement -

ತಾಲ್ಲೂಕಿನ ಮೇಲೂರು ಗ್ರಾಮದ ಪುರಾಣ ಪ್ರಸಿದ್ಧ ಗಂಗಾದೇವಿ ದೇವಾಲಯದಲ್ಲಿ ಬುಧವಾರ ವಿಮಾನಗೋಪುರದ ಕುಂಭಾಭಿಷೇಕ ಪೂಜಾ ಮಹೋತ್ಸವವನ್ನು ಬುಧವಾರ ವಿಜೃಂಭಣೆಯಿಂದ ನೆರವೇರಿಸಲಾಯಿತು.
ತಾಲ್ಲೂಕಿನ ಮೇಲೂರು ಗ್ರಾಮದ ಗಂಗಾದೇವಿ ದೇವಾಲಯದಲ್ಲಿ ನೂತನವಾಗಿ 25 ಲಕ್ಷ ರೂಪಾಯಿಗಳ ವೆಚ್ಚದಲ್ಲಿ ನಿರ್ಮಾಣ ಮಾಡಿರುವ ವಿಮಾನಗೋಪುರದ ಕುಂಭಾಭಿಷೇಕ ಪೂಜಾ ಮಹೋತ್ಸವ ಅಂಗವಾಗಿ ದೇವಾಲಯದಲ್ಲಿ ಬೆಳಗ್ಗೆ ೪ ಗಂಟೆಯಿಂದಲೇ ವಿಶೇಷ ಕಾರ್ಯಗಳನ್ನು ಆಯೋಜಿಸಲಾಗಿತ್ತು.

ಶಿಡ್ಲಘಟ್ಟ ತಾಲ್ಲೂಕಿನ ಮೇಲೂರು ಗ್ರಾಮದ ಪುರಾಣಪ್ರಸಿದ್ಧ ಗಂಗಾದೇವಿ ದೇವಾಲಯದಲ್ಲಿ ವಿಮಾನಗೋಪುರ ಕುಂಭಾಭಿಷೇಕದ ಅಂಗವಾಗಿ ದೇವಾಲಯದಲ್ಲಿ ವಿಶೇಷ ಅಲಂಕಾರ ಮಾಡಿದ್ದು ಮಹಾ ಚಂಡಿ ಯಾಗವನ್ನು ನಡೆಸಲಾಯಿತು.
ಶಿಡ್ಲಘಟ್ಟ ತಾಲ್ಲೂಕಿನ ಮೇಲೂರು ಗ್ರಾಮದ ಪುರಾಣಪ್ರಸಿದ್ಧ ಗಂಗಾದೇವಿ ದೇವಾಲಯದಲ್ಲಿ ವಿಮಾನಗೋಪುರ ಕುಂಭಾಭಿಷೇಕದ ಅಂಗವಾಗಿ ದೇವಾಲಯದಲ್ಲಿ ವಿಶೇಷ ಅಲಂಕಾರ ಮಾಡಿದ್ದು ಮಹಾ ಚಂಡಿ ಯಾಗವನ್ನು ನಡೆಸಲಾಯಿತು.
ಸ್ವಸ್ತಿವಾಚನ, ಪಂಚಾಮೃತ ಅಭಿಷೇಕ, ಕುಂಭ ಪ್ರದಕ್ಷಿಣೆ, ಕುಂಭಾಭಿಷೇಕ, ಪುಪ್ಪಾಂಲಕಾರ, ಸಹಸ್ರನಾಮ ಪಾರಾಯಣ, ಧೇನುದರ್ಶನ, ಕೂಷಾಂಡ ಬಲಿ, ನಾರಿಕೇಳ ಬಲಿಹರಣ, ಮಹಾನೈವೇಧ್ಯ, ಮಹಾಮಂಗಳಾರತಿ ತೀರ್ಥಪ್ರಸಾದ ವಿನಿಯೋಗ ಕಾರ್ಯಕ್ರಮಗಳು ನೆರವೇರಿದವು. ಅಮ್ಮನವರ ಸನ್ನಿಧಿಯಲ್ಲಿ ದೇವಾಲಯ ನವೀಕರಣ ಸಂಪ್ರೋಕ್ಷಣೆ ಹಾಗೂ ಸುವರ್ಣ ಲೇಪಿತ ಕಳಶ ಸ್ಥಾಪನೆ ಹಾಗೂ ಮಹಾ ಚಂಡಿ ಯಾಗವನ್ನು ನಡೆಸಲಾಯಿತು. ದೇವಾಲಯಕ್ಕೆ ಬಂದಿದ್ದ ಭಕ್ತಾಧಿಗಳಿಗೆ ಅನ್ನ ಸಂತರ್ಪಣೆಯನ್ನು ಆಯೋಜನೆ ಮಾಡಲಾಯಿತು.
ಮೇಲೂರು, ಮಳ್ಳೂರು, ಚೌಡಸಂದ್ರ, ಗಂಗನಹಳ್ಳಿ, ಕಂಬದಹಳ್ಳಿ, ಭಕ್ತರಹಳ್ಳಿ, ಮುತ್ತೂರು, ಕೊಂಡೇನಹಳ್ಳಿ, ಅಪ್ಪೇಗೌಡನಹಳ್ಳಿ, ಕೇಶವಪುರ ಸೇರಿದಂತೆ ಸುತ್ತಲಿನ ಗ್ರಾಮಗಳಿಂದ ಭಕ್ತಾದಿಗಳು ಪೂಜಾ ಕಾರ್ಯಗಳಲ್ಲಿ ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ಗ್ರಾಮವನ್ನೆಲ್ಲಾ ವಿಶೇಷವಾಗಿ ಅಲಂಕರಿಸಲಾಗಿತ್ತು. ಪ್ರಮುಖ ಬೀದಿಗಳನ್ನು ಹಾಗೂ ದೇವಾಲಯದ ಸುತ್ತಮುತ್ತ ವಿದ್ಯುತ್‌ ದೀಪಗಳಿಂದ ಮತ್ತು ವಿವಿಧ ಹೂಗಳಿಂದ ಅಲಂಕರಿಸಲಾಗಿತ್ತು. ಮಹಿಳೆಯರು ಕಳಶ ಹೊತ್ತು ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿ ದೇವರಿಗೆ ಪೂಜೆ ಸಲ್ಲಿಸಿದರು.
ಚಿಕ್ಕಬಳ್ಳಾಪುರದ ಆದಿಚುಂಚನಗಿರಿ ಮಠದ ಮಂಗಳಾನಂದ ಸ್ವಾಮೀಜಿ, ವಿಜಯಪುರದ ಬಸವಕಲ್ಯಾಣ ಮಠದ ಮಹದೇವಸ್ವಾಮಿ, ಶಾಸಕ ಎಂ.ರಾಜಣ್ಣ, ತಹಶೀಲ್ದಾರ್‌ ಜಿ.ಎ.ನಾರಾಯಣಸ್ವಾಮಿ, ರಾಜ್ಯ ಒಕ್ಕಲಿಗ ಸಂಘದ ನಿರ್ದೇಶಕ ಯಲುವಳ್ಳಿ ರಮೇಶ್‌, ಮಾಜಿ ನಿರ್ದೇಶಕ ಸದಾಶಿವರೆಡ್ಡಿ, ಜಿಲ್ಲಾ ಪಂಚಾಯತಿ ಸದಸ್ಯೆ ಶಿವಲೀಲಾ ರಾಜಣ್ಣ, ದೇವಾಲಯದ ಧರ್ಮದರ್ಶಿ ಜೆ.ಜೆ.ಗೌಡ, ರಾಮಕೃಷ್ಣಪ್ಪ, ಅಶ್ವತ್ಥಪ್ಪ, ಶ್ರೀನಿವಾಸರೆಡ್ಡಿ, ಭೀಮಣ್ಣನವರ ನಾರಾಯಣಸ್ವಾಮಿ, ಸೂರ್ಯನಾರಾಯಣಗೌಡ, ಕೆ.ಮಂಜುನಾಥ್‌, ರವಿಕುಮಾರ್‌, ಉಮೇಶ್‌, ಕೆ.ಎಸ್‌.ಮಂಜುನಾಥ್‌, ಎಚ್‌.ಟಿ.ನಾರಾಯಣಸ್ವಾಮಿ, ಎಂ.ಜೆ.ಶ್ರೀನಿವಾಸ್‌, ಆಗಮೀಕ ನಾಗಪ್ರಸಾದಶರ್ಮ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.
Sidlaghatta News Desk
Sidlaghatta News Deskhttp://www.sidlaghatta.com
The editorial desk of Sidlaghatta.com (Namma Shidlaghatta), covering civic affairs, agriculture, silk trade, and local government news for Sidlaghatta taluk, Karnataka.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!