ತಾಲ್ಲೂಕಿನ ಗಂಜಿಗುಂಟೆ ಸರ್ಕಾರಿ ಪ್ರೌಢಶಾಲೆಯಲ್ಲಿ ಭಾನುವಾರ ಗಾಂಧಿಜಯಂತಿಯ ಪ್ರಯುಕ್ತ ವಿಶೇಷ ಕಾರ್ಯಕ್ರಮವನ್ನು ಶಾಲೆಯ 2005–2006ನೇ ಸಾಲಿನ ಹಳೆಯ ವಿದ್ಯಾರ್ಥಿಗಳು ಆಯೋಜಿಸಿದ್ದರು.
ಗಾಂಧೀಜಿ ಹಾಗೂ ಲಾಲ್ಬಹದ್ದೂರ್ ಶಾಸ್ತ್ರಿ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಶ್ರಮದಾನ ಹಾಗೂ ಸರ್ವಧರ್ಮ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮವನ್ನು ಪ್ರಾರಂಭಿಸಲಾಯಿತು.
ನಿವೃತ್ತ ಶಿಕ್ಷಕರಾದ ಸಿ.ಬಿ.ಹನುಮಂತಪ್ಪ, ಎಸ್.ವಿಜಯಕುಮಾರ್, ಜಿ.ಸುಂದರೇಶ್, ಮುನಿಶಾಮಿರೆಡ್ಡಿ, ಬಿ.ಕೃಷ್ಣಮೂರ್ತಿ, ಮುನಿಕೃಷ್ಣಪ್ಪ ಅವರನ್ನು ಸನ್ಮಾನಿಸಲಾಯಿತು.
2005–2006ನೇ ಸಾಲಿನ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳು ಶಾಲೆಯ ಪ್ರತಿಯೊಂದು ತರಗತಿಗೂ ಒಂದೊಂದು ಪೋಡಿಯಂ ಉಡುಗೊರೆಯಾಗಿ ನೀಡಿದರು. 2015–2016ನೇ ಸಾಲಿನಲ್ಲಿ ಕನ್ನಡ ವಿಷಯದಲ್ಲಿ 125 ಅಂಕಗಳನ್ನು ಗಳಿಸಿದ ಹಾಗೂ ಗರಿಷ್ಠ ಅಂಕಗಳನ್ನು ಗಳಿಸಿದ ವೈ.ಎನ್.ಮನೋಜ್, ಎಲ್.ಎನ್.ನರೇಂದ್ರಬಾಬು ಅವರನ್ನುಗೌರವಿಸಲಾಯಿತು.
ಮಮತಾ, ಆನಂದ್, ಶಿವಪ್ಪ, ಡಿ.ಪಿ.ನಾಗೇಂದ್ರ ಮತ್ತಿತರರು ಹಾಜರಿದ್ದರು.
- Advertisement -
- Advertisement -
For Daily Updates
WhatsApp 'HI' to 7406303366
- Advertisement -
- Advertisement -







