ಗ್ರಾಮಗಳಲ್ಲಿ ನಡೆಸುವ ಕಾಮಗಾರಿಯ ಗುಣಮಟ್ಟದಲ್ಲಿ ಯಾವುದೇ ಕಾರಣಕ್ಕೂ ರಾಜಿಯಾಗಕೂಡದು ಎಂದು ಶಾಸಕ ಎಂ.ರಾಜಣ್ಣ ತಿಳಿಸಿದರು.
ತಾಲ್ಲೂಕಿನ ಮೇಲೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಚೌಡಸಂದ್ರ ಗ್ರಾಮದಲ್ಲಿ ಗುರುವಾರ ಎಸ್.ಸಿ.ಪಿ ಯೋಜನೆಯಡಿಯಲ್ಲಿ ಸುಮಾರು ೫ ಲಕ್ಷ ೬೫ ಸಾವಿರ ರೂಗಳ ವೆಚ್ಚದಲ್ಲಿ ೮೧ ಮೀಟರ್ ಸಿಸಿ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.
ಗ್ರಾಮಗಳಲ್ಲಿ ಕಾಮಗಾರಿ ನಡೆಯುವಾಗ ಪಕ್ಷಾತೀತವಾಗಿ ಜನರು ಕಾಮಗಾರಿಯ ಗುಣಮಟ್ಟವನ್ನು ಪರಿಶೀಲಿಸಿ ಗ್ರಾಮದ ಒಳಿತಿಗೆ ಸಹಕರಿಸಬೇಕು. ಗ್ರಾಮಗಳಲ್ಲಿ ಸ್ವಚ್ಚತೆ ಕಾಪಾಡಿಕೊಳ್ಳಬೇಕು. ಇದರಿಂದ ಆರೋಗ್ಯವೂ ಸುಧಾರಿಸುತ್ತದೆ ಎಂದು ಹೇಳಿದರು.
ಮೇಲೂರು ಗ್ರಾಮ ಪಂಚಾಯ್ತಿ ಉಪಾಧ್ಯಕ್ಷ ಆಂಜನೇಯರೆಡ್ಡಿ, ಸದಸ್ಯರಾದ ಮಮತಾ, ಶ್ರೀನಿವಾಸ್, ಎಂ.ಪಿ.ಸಿ.ಎಸ್.ಅಧ್ಯಕ್ಷ ಆನಂದ್, ಲೋಕೋಪಯೋಗಿ ಇಲಾಖೆಯ ಬೈರಾರೆಡ್ಡಿ, ಶಿವಕುಮಾರ್, ಗ್ರಾಮಸ್ಥರಾದ ಎಂ.ಜೆ.ಶ್ರೀನಿವಾಸ್, ರಾಮಚಂದ್ರ, ನಾರಾಯಣಸ್ವಾಮಿ, ಕೃಷ್ಣಪ್ಪ, ರವಿ, ರಾಮಾಂಜಿ, ಲಕ್ಷ್ಮಿನಾರಾಯಣ, ಗುತ್ತಿಗೆದಾರ ಚಂದ್ರಶೇಖರ್, ಮಾರೇಗೌಡ, ಮಹೇಶ್ ಈ ಸಂದರ್ಭದಲ್ಲಿ ಹಾಜರಿದ್ದರು.
- Advertisement -
- Advertisement -
For Daily Updates
WhatsApp 'HI' to 7406303366
- Advertisement -
- Advertisement -







