21.5 C
Sidlaghatta
Wednesday, July 30, 2025

ಗುಣಮಟ್ಟದ ಬಗ್ಗೆ ಗ್ರಾಮಸ್ಥರು ಪರಿಶೀಲಿಸಿ

- Advertisement -
- Advertisement -

ಗ್ರಾಮೀಣ ಪ್ರದೇಶಗಳಲ್ಲಿ ಕಾಮಗಾರಿಗಳು ನಡೆಯುವಾಗ ಗುಣಮಟ್ಟದ ಬಗ್ಗೆ ಗ್ರಾಮಸ್ಥರು ಪರಿಶೀಲಿಸುತ್ತಿರಬೇಕು. ಪಕ್ಷಬೇಧ ಮರೆತು ಅಭಿವೃದ್ಧಿಯತ್ತ ಗಮನವಿಡಬೇಕು ಎಂದು ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಲಕ್ಷ್ಮೀನಾರಾಯಣರೆಡ್ಡಿ ತಿಳಿಸಿದರು.
ತಾಲ್ಲೂಕಿನ ಕೊತ್ತನೂರು ಗ್ರಾಮ ಪಂಚಾಯಿತಿಯ ಪಿಂಡಿಪಾಪನಹಳ್ಳಿ ಗ್ರಾಮದಲ್ಲಿ ೫ ಲಕ್ಷ ರೂಗಳ ಸಿಸಿ ರಸ್ತೆ ಕಾಮಗಾರಿಗಳಿಗೆ ಸೋಮವಾರ ಗುದ್ದಲಿಪೂಜೆ ನೆರವೇರಿಸಿ ಅವರು ಮಾತನಾಡಿದರು.
ಸಾರ್ವಜನಿಕರ ಸಹಭಾಗಿತ್ವ ಸಂಪೂರ್ಣವಾಗಿ ಇದ್ದಾಗ ಮಾತ್ರವೇ ಸರ್ಕಾರದ ಯಾವುದೆ ಯೋಜನೆ ಯಶಸ್ಸಾಗಲು ಸಾಧ್ಯ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನರ ಪಾಲ್ಗೊಳ್ಳುವಿಕೆ ಇಲ್ಲದೆ ಯಾವುದೆ ಯೋಜನೆಯಾಗಲಿ ಯಶಸ್ಸು ಸಾಧ್ಯವಿಲ್ಲ ಎಂದರು.
ಅಭಿವೃದ್ದಿಯ ವಿಚಾರದಲ್ಲಿ ರಾಜಕೀಯ ಬೆರಸದೇ ಗ್ರಾಮಗಳಲ್ಲಿ ನಡೆಯುವ ಕಾಮಗಾರಿಯ ಗುಣಮಟ್ಟದ ಬಗ್ಗೆ ಎಚ್ಚರವಹಿಸಬೇಕು ಎಂದರು.
ಜಿಲ್ಲಾ ಪಂಚಾಯಿತಿ ಸದಸ್ಯರಾದ ಬಂಕ್ ಮುನಿಯಪ್ಪ, ತನುಜಾರಘು, ತಾಲ್ಲೂಕು ಪಂಚಾಯಿತಿ ಸದಸ್ಯ ರಾಜಶೇಖರ್, ಗ್ರಾಮ ಪಂಚಾಯಿತಿ ಸದಸ್ಯೆ ಸರಳಾ ಗೋವಿಂದಪ್ಪ, ಮುಖಂಡರಾದ ಕೃಷ್ಣಪ್ಪ, ನರೇಂದ್ರ, ಮೂರ್ತಿ, ಚಂದ್ರಶೇಖರ್‌, ಕುಮಾರ್‌ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!