18.2 C
Sidlaghatta
Sunday, March 1, 2026

ಗುರುಗಳು, ತಂದೆ ತಾಯಿಯರ ಋಣ ತೀರಿಸಲಾಗದು

- Advertisement -
- Advertisement -

ಜೀವನದಲ್ಲಿ ಗುರಿ, ಛಲ, ಗುರುವಿನ ಆಶೀರ್ವಾದ ಇದ್ದರೆ ಮಾತ್ರವೇ ವಿದ್ಯೆ ಕಲಿತು ಸಮಾಜದಲ್ಲಿ ಉನ್ನತ ಸ್ಥಾನ ಗಳಿಸಲು ಸಾಧ್ಯ. ಅಕ್ಷರ ಕಲಿಸಿದ ಗುರುಗಳು, ಜನ್ಮ ಕೊಟ್ಟ ಹೆತ್ತವರು, ಆಡಿ ಬೆಳೆದ ಭೂಮಿಯ ಋಣ ಎಂದಿಗೂ ಮರೆಯಬಾರದು ಎಂದು ಎಸ್.ಎನ್. ಕ್ರಿಯಾ ಟ್ರಸ್ಟ್ ನ ಅಧ್ಯಕ್ಷ ಆಂಜಿನಪ್ಪ ತಿಳಿಸಿದರು.
ತಾಲ್ಲೂಕಿನ ವರದನಾಯಕನಹಳ್ಳಿ ಗೇಟಿನ ಬಾಲಾಜಿ ಕಲ್ಯಾಣ ಮಂಟಪದಲ್ಲಿ ಭಾನುವಾರ ಎಸ್.ಎನ್ ಕ್ರಿಯಾ ಟ್ರಸ್ಟ್ನ ವತಿಯಿಂದ ಹಮ್ಮಿಕೊಂಡಿದ್ದ ಗುರುವಂದನೆ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಜೀವನದಲ್ಲಿ ಎಷ್ಟೇ ಉನ್ನತ ಮಟ್ಟಕ್ಕೆ ಹೋದರೂ ತಾವು ನಡೆದ ಬಂದ ದಾರಿಯನ್ನು ಎಂದಿಗೂ ಮರೆಯಬಾರದು. ನಮ್ಮನ್ನು ಬೆಳೆಸಿದ ಸಮಾಜಕ್ಕೆ ನಾವು ಋಣಿಗಳಾಗಿರಬೇಕು. ಸಾಧ್ಯವಾದಷ್ಟೂ ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ಹುಟ್ಟಿದ ಊರು, ತಂದೆ ತಾಯಿ ಮತ್ತು ಗುರುಗಳಿಗೆ ಗೌರವ ತರುವ ಕೆಲಸ ಮಾಡಬೇಕೆಂದು ಹೇಳಿದರು.
ರೈತ ಹಿತರಕ್ಷಣಾ ವೇದಿಕೆಯ ಜಿಲ್ಲಾದ್ಯಕ್ಷ ಮಳ್ಳೂರು ಶಿವಣ್ಣ ಮಾತನಾಡಿ, ಪೋಷಕರು ತಮ್ಮ ಮಕ್ಕಳು ವಿದ್ಯಾವಂತರಾಗಬೇಕು, ಮುಪ್ಪಿನ ವಯಸ್ಸಿನಲ್ಲಿ ತಮಗೆ ಆಶ್ರಯ ನೀಡಬೇಕು ಎಂಬ ಆಶಾಭಾವನೆಯನ್ನು ಹೊಂದಿರುತ್ತಾರೆ. ತಮ್ಮ ವ್ಯಕ್ತತ್ವವನ್ನು ರೂಪಿಸಿದ ಗುರುಗಳಿಗೆ ಗೌರವ ಸರ್ಮಪಣೆಯನ್ನು ಮಾಡುವುದು ನಿಜಕ್ಕೂ ಶ್ಞಾಘನೀಯ ಎಂದು ತಿಳಿಸಿದರು.
ಸರಸ್ವತಿ ವಿದ್ಯಾಸಂಸ್ಥೆಯಲ್ಲಿ 19೯೦ ರಿಂದ 19೯೫ ರಲ್ಲಿ ಶಿಕ್ಷಕರಾಗಿದ್ದವರಿಗೆ ಸನ್ಮಾನವನ್ನು ಮತ್ತು ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕಗಳನ್ನು ಪಡೆದಿರುವ ತಾಲ್ಲೂಕಿನ ೫೦೦ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರವನ್ನು ಮಾಡಲಾಯಿತು. ಮುಗಲಡಪಿ ಗ್ರಾಮದ ಅಂಗವಿಕಲೆ ವಿದ್ಯಾರ್ಥಿ ಗೌತಮಿಗೆ ವೀಲ್ ಚೇರ್ ನೀಡಲಾಯಿತು.
ರಾಜ್ಯ ರೈತ ಸಂಘದ ಜಿಲ್ಲಾದ್ಯಕ್ಷರಾದ ಬೈರೇಗೌಡ, ಎಸ್.ಎನ್. ಕ್ರಿಯಾ ಟ್ರಸ್ಟ್ನ ಅಧ್ಯಕ್ಷ ಆಂಜಿನಪ್ಪ, ಸುರೇಶ್, ಬೆಳ್ಳೂಟಿ ಸಂತೋಷ್, ಸರ್ಕಾರಿ ನೌಕರರ ತಾಲ್ಲೂಕು ಅಧ್ಯಕ್ಷ ಗುರುರಾಜ್ರಾವ್, ಬೆಳ್ಳೂಟಿ ರಮೇಶ್, ತಾದೂರು ಮಂಜುನಾಥ್, ವಕೀಲರಾದ ಯೋಗನಾಂದ, ನಾರಾಯಣಸ್ವಾಮಿ, ಸುರೇಶ್, ರಮೇಶ್, ರವಿಪ್ರಕಾಶ್, ಶ್ರೀನಿವಾಸ್, ಮಂಜುನಾಥ್, ಎಸ್.ಎಂ.ನಾರಾಯಣಸ್ವಾಮಿ, ಮುನಿಕೃಷ್ಣಪ್ಪ, ನಟರಾಜ್, ಮುನಿಕೃಷ್ಣ ಮತ್ತಿತರು ಕಾರ್ಯಕ್ರಮದಲ್ಲಿ ಹಾಜರಿದ್ದರು.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!