19.1 C
Sidlaghatta
Wednesday, January 28, 2026

ಗ್ರಾಮದಲ್ಲಿ ಉತ್ತಮ ಸೇವೆ ಒದಗಿಸಿ

- Advertisement -
- Advertisement -

ಸರ್ಕಾರದ ಅನುದಾನಗಳನ್ನು ಸಮರ್ಪಕವಾಗಿ ಬಳಸಿ ಗುಣಮಟ್ಟದ ಕಾಮಗಾರಿಗಳನ್ನು ಮಾಡುವ ಮೂಲಕ ನಾಗರಿಕರಿಗೆ ಉತ್ತಮ ಸೇವೆ ಒದಗಿಸಲು ಗ್ರಾಮ ಪಂಚಾಯತಿ ಅಧಿಕಾರಿಗಳು ಸೇರಿದಂತೆ ಸ್ಥಳೀಯ ಮುಖಂಡರು ಹೆಚ್ಚಿನ ಆಸಕ್ತಿವಹಿಸಬೇಕು ಎಂದು ಶಾಸಕ ಎಂ.ರಾಜಣ್ಣ ಹೇಳಿದರು.
ತಾಲ್ಲೂಕಿನ ತುಮ್ಮನಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಚಿಂತಡಿಪಿ ಗ್ರಾಮದ ಜನತೆಗೆ ಕುಡಿಯುವ ನೀರು ಸೌಲಭ್ಯ ಕಲ್ಪಿಸುವ ಉದ್ದೇಶದಿಂದ ನಿರ್ಮಿಸಲಾಗಿದ್ದ ಓವರ್ ಹೆಡ್ ಟ್ಯಾಂಕ್ ಉದ್ಘಾಟನೆಯನ್ನು ಭಾನುವಾರ ನೆರವೇರಿಸಿ ಅವರು ಮಾತನಾಡಿದರು.
ಬಿ.ಎಸ್.ಯಡಿಯೂರಪ್ಪ ಸರ್ಕಾರದ ಅವಧಿಯಲ್ಲಿ ನಿರ್ಮಿಸಲಾಗಿದ್ದ ಓವರ್ಹೆಡ್ ಟ್ಯಾಂಕ್ಗೆ ನೀರೊದಿಗಿಸುವ ಸಲುವಾಗಿ ಶಾಸಕರ ಅನುದಾನದಿಂದ ಸುಮಾರು ೨.೪ ಲಕ್ಷದಲ್ಲಿ ಮರು ಕೊಳವೆಬಾವಿ ಕೊರೆಸಲಾಗಿದೆ. ಗ್ರಾಮದಲ್ಲಿ ಪೈಪ್ ಲೈನ್ ಅಳವಡಿಸಿದ್ದು ಗ್ರಾಮದ ಜನತೆ ಇದರ ಸದುಪಯೋಗ ಪಡೆದುಕೊಳ್ಳಬೇಕು. ನೀರನ್ನು ಪೋಲು ಮಾಡದೆ ಮಿತವಾಗಿ ಬಳಸಬೇಕು ಎಂದರು.
ಜಿಲ್ಲಾ ಪಂಚಾಯತಿ ಸದಸ್ಯರಾದ ಬಂಕ್ಮುನಿಯಪ್ಪ, ತನುಜಾರಘು, ಗ್ರಾಮ ಪಂಚಾಯತಿ ಅಧ್ಯಕ್ಷೆ ವಿಜಯಮ್ಮ, ಉಪಾಧ್ಯಕ್ಷ ಸುರೇಂದ್ರ, ಚಿಂತಡಿಪಿ ಗಮ ಪಂಚಾಯತಿ ಸದಸ್ಯ ರಮೇಶ್, ಮುನಿನಾರಾಯಣಪ್ಪ, ಮಾರುತಿ, ಮುರಳಿ, ಮುನಿರಾಜು ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.

For Daily Updates

WhatsApp 'HI' to 7406303366

Subscribe to ನಮ್ಮ ಶಿಡ್ಲಘಟ್ಟ Newspaper

Launching Soon! Register for your Free Newspaper Copy Today.

- Advertisement -

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!