ಗ್ರಾಮೀಣ ಪ್ರತಿಭೆಗಳನ್ನು ಬೆಳಕಿಗೆ ತರುವ ಕೆಲಸವನ್ನು ಮಾಡಬೇಕು ಎಂದು ಗ್ರಾಮ ಪಂಚಾಯ್ತಿ ಮಾಜಿ ಅಧ್ಯಕ್ಷೆ ರಮಾ ತಿಳಿಸಿದರು.
ತಾಲ್ಲೂಕಿನ ಚಿಕ್ಕದಿಬ್ಬೂರಹಳ್ಳಿಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಈಚೆಗೆ ಜಿಲ್ಲಾಮಟ್ಟದ ಯೋಗಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ವಿಭಾಗಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿನಿ ನಿತ್ಯಶ್ರೀ ಯನ್ನು ಪುರಸ್ಕರಿಸಿ ಅವರು ಮಾತನಾಡಿದರು.
ರಾಜ್ಯ, ರಾಷ್ಟ್ರಮಟ್ಟದ ಪ್ರತಿಭೆಗಳನ್ನು ಬೆಳೆಸಬೇಕು. ಅಗತ್ಯ ಮಾರ್ಗದರ್ಶನ ನೀಡಿ ಪ್ರೋತ್ಸಾಹಿಸಬೇಕು ಎಂದರು.
ಎಸ್.ಡಿ.ಎಂ.ಸಿ ಅಧ್ಯಕ್ಷ ಡಿ.ಆರ್.ಶ್ರೀನಿವಾಸ್ ಮಾತನಾಡಿ, ನಮ್ಮ ಶಾಲೆಯ ಮಕ್ಕಳು ಶಾಲೆ ಮತ್ತು ಗ್ರಾಮಕ್ಕೆ ಕೀರ್ತಿ ತರಬೇಕು ಎಂದರು.
ಗ್ರಾಮ ಪಂಚಾಯ್ತಿ ಸದಸ್ಯೆ ನಾರಾಯಣಮ್ಮ, ಮುಖ್ಯ ಶಿಕ್ಷಕ ಪ್ರಕಾಶ್, ಯೋಗಶಿಕ್ಷಕ ವೆಂಕಟರೆಡ್ಡಿ, ಗೋಪಾಲಕೃಷ್ಣ ಹಾಜರಿದ್ದರು.
- Advertisement -
- Advertisement -
For Daily Updates
WhatsApp 'HI' to 7406303366
- Advertisement -
- Advertisement -







