21.1 C
Sidlaghatta
Tuesday, October 28, 2025

ಗ್ರಾಮೀಣ ಭಾಗದ ಬಾಲ ಪ್ರತಿಭೆಗಳಿಗೆ ಪ್ರೋತ್ಸಾಹದ ಅಗತ್ಯವಿದೆ

- Advertisement -
- Advertisement -

ಗ್ರಾಮೀಣ ಭಾಗದ ಬಾಲ ಪ್ರತಿಭೆಗಳನ್ನು ಪ್ರೋತ್ಸಾಹಿಸುವ ವೇದಿಕೆಗಳ ಅವಶ್ಯಕತೆಯಿದೆ. ಎಳೆಯ ವಯಸ್ಸಿನಲ್ಲಿಯೇ ಮಕ್ಕಳ ಅಭಿರುಚಿ, ಆಸಕ್ತಿಗಳಿಗೆ ನೀರೆರೆಯುವ ಕೆಲಸ ಆಗಬೇಕಿದೆ ಎಂದು ಗ್ರಾಮ ಪಂಚಾಯತಿ ಅಧ್ಯಕ್ಷೆ ಜಮುನಾ ಧರ್ಮೇಂದ್ರ ಹೇಳಿದರು.
ತಾಲ್ಲೂಕಿನ ಮೇಲೂರು ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಆವರಣದಲ್ಲಿ ಮಂಗಳವಾರ ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಆಯೋಜನೆ ಮಾಡಲಾಗಿದ್ದ ಚಿಗುರು ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿ ಅವರು ಮಾತನಾಡಿದರು.
ನಾಡಿನ ಸಂಸ್ಕೃತಿ, ಕಲೆ, ಪರಂಪರೆಯನ್ನು ಪರಿಚಯ ಮಾಡುವ ಕೆಲಸಗಳು ಶಾಲಾ ಮಟ್ಟದಲ್ಲಿ ನಡೆಯಬೇಕು. ಸಣ್ಣ ವಯಸ್ಸಿನಲ್ಲಿಯೇ ಮಕ್ಕಳನ್ನು ಪ್ರೋತ್ಸಾಹ ಮಾಡುವ ಮೂಲಕ ಅವರಲ್ಲಿರುವ ಉತ್ತಮವಾದ ಪ್ರತಿಭೆಗಳನ್ನು ಗುರ್ತಿಸಬೇಕು. ಕಲೆಯ ಮೂಲಕ ದೇಶಕ್ಕೆ ಉತ್ತಮವಾದ ಕೀರ್ತಿಯನ್ನು ತರುವ ನಿಟ್ಟಿನಲ್ಲಿ ಮಕ್ಕಳನ್ನು ಪ್ರೋತ್ಸಾಹಿಸಬೇಕು ಎಂದರು.
ಗ್ರಾಮ ಪಂಚಾಯತಿ ಸದಸ್ಯ ಆರ್.ಎ.ಉಮೇಶ್ ಮಾತನಾಡಿ, ಮಕ್ಕಳಲ್ಲಿ ಅಪಾರವಾದ ಪ್ರತಿಭೆಗಳಿವೆ, ಆದರೆ ಆರ್ಥಿಕವಾದ ಸಮಸ್ಯೆಗಳಿಂದಾಗಿ ಮಕ್ಕಳು ಅವನ್ನು ವ್ಯಕ್ತಪಡಿಸಲು ಸಾಧ್ಯವಾಗುತ್ತಿಲ್ಲ. ಕೆಲವು ಖಾಸಗಿ ವಾಹಿನಿಗಳ ಮೂಲಕ ತಮ್ಮ ಪ್ರತಿಭೆಗಳನ್ನು ಹೊರಪಡಿಸುವಂತಹ ಮಕ್ಕಳು ಶ್ರೀಮಂತ ಕುಟುಂಬಗಳಿಂದ ಬರುವುದರಿಂದ ಬಡವರು, ಮಧ್ಯಮ ವರ್ಗದ ಮಕ್ಕಳು ಅವಕಾಶಗಳಿಂದ ವಂಚಿತರಾಗುತ್ತಿದ್ದಾರೆ. ಇಂತಹ ಮಕ್ಕಳಲ್ಲಿರುವ ಪ್ರತಿಭೆಗಳನ್ನು ಗುರ್ತಿಸಿ ಪ್ರೋತ್ಸಾಹಿಸಲು ಅಗತ್ಯವಾಗಿರುವ ಸಹಕಾರ ನೀಡಬೇಕಿದೆ ಎಂದರು.
ಕಾರ್ಯಕ್ರಮದಲ್ಲಿ ಕರ್ನಾಟಕ ಶಾಸ್ತ್ರೀಯ ಸಂಗೀತ, ಕರ್ನಾಟಕ ಹಿಂದೂಸ್ಥಾನಿ ಗಾಯನ, ಸುಗಮ ಸಂಗೀತ, ಜನಪದಗೀತೆಗಳ ಗಾಯನ, ಶಾಸ್ತ್ರೀಯ ಭರತನಾಟ್ಯ, ಸಮೂಹ ನೃತ್ಯ ರೂಪಕ, ಏಕಪಾತ್ರಾಭಿನಯ, ನಾಟಕ, ಮುಂತಾದ ಕಾರ್ಯಕ್ರಮಗಳನ್ನು ಪ್ರದರ್ಶನವನ್ನು ಮಕ್ಕಳು ಪ್ರದರ್ಶಿಸಿದರು.
ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಉಪನಿರ್ದೇಶಕ ಬಿ.ಎಸ್.ವೆಂಕಟಾಚಲಪತಿ, ಮುಖ್ಯ ಶಿಕ್ಷಕಿ ಮಂಗಳಗೌರಮ್ಮ, ಸಾಹಿತಿ ಸುಭಾನ್ಪ್ರಿಯಾ, ಎಸ್.ಡಿ.ಎಂ.ಸಿ. ಅಧ್ಯಕ್ಷ ಜನಾರ್ಧನ್, ಶ್ರೀನಿವಾಸ್, ಧರ್ಮೇಂದ್ರ, ಸುಧೀರ್, ರೂಪಶ್ರೀಅರವಿಂದ್, ಕಲಾವಿದ ಕೋಲಾರ್ರಮೇಶ್, ಸೋ.ಸು.ನಾಗೇಂದ್ರ, ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!