24.2 C
Sidlaghatta
Saturday, October 11, 2025

ಗ್ರಾಮ ಪಂಚಾಯತಿಯ ಅಧ್ಯಕ್ಷರು ಪಕ್ಷಪಾತ ಧೋರಣೆ ಅನುಸರಿಸುತ್ತಿದ್ದಾರೆ

- Advertisement -
- Advertisement -

ಗ್ರಾಮ ಪಂಚಾಯತಿ ಅಧ್ಯಕ್ಷರು ಪಕ್ಷಪಾತ ಧೋರಣೆ ಅನುಸರಿಸುತ್ತಿದ್ದಾರೆ ಎಂದು ಆರೋಪಿಸಿ ಗ್ರಾಮ ಪಂಚಾಯತಿ ಸದಸ್ಯರೂ ಸೇರಿದಂತೆ ಕಾಂಗ್ರೆಸ್ ಕಾರ್ಯಕರ್ತರು ಗ್ರಾಮ ಪಂಚಾಯತಿ ಕಾರ್ಯಾಲಯದ ಮುಂಭಾಗದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.
ತಾಲ್ಲೂಕಿನ ದೊಡ್ಡತೇಕಹಳ್ಳಿ ಗ್ರಾಮ ಪಂಚಾಯತಿಯ ಅಧ್ಯಕ್ಷರಾದ ಮುದ್ದುಲಕ್ಷ್ಮಮ್ಮ ಗುಮ್ಮರೆಡ್ಡಿ ಜೆಡಿಎಸ್ ಪಕ್ಷದವರಾಗಿದ್ದು ಕಾಂಗ್ರೆಸ್ ಪಕ್ಷದಿಂದ ಆಯ್ಕೆಯಾಗಿರುವ ಯಾವುದೇ ಸದಸ್ಯರ ಮಾತಿಗೆ ಬೆಲೆ ಕೊಡುವುದಿಲ್ಲ ಹಾಗೂ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ನರೇಗಾ ಯೋಜನೆಯಲ್ಲಿ ಕೆಲಸ ಮಾಡಿದರೂ ಹಣ ಮಂಜೂರಾತಿಗೆ ಸಹಿ ಹಾಕುತ್ತಿಲ್ಲ. ಕೇಳಿದರೆ, ನಿಮ್ಮ ಕೈಲಾಗಿದ್ದು ಮಾಡಿಕೊಳ್ಳಿ ನಾನು ನಿಮಗೆ ಸಹಿ ಹಾಕುವುದಿಲ್ಲ ಎಂದು ದಾಖಲೆಗಳನ್ನು ಎಸೆಯುತ್ತಾರೆ ಎಂದು ಆರೋಪಿಸಿದರು.
ಗ್ರಾಮ ಪಂಚಾಯತಿ ವ್ಯಾಪ್ತಿಯ ಚಿಕ್ಕತೇಕಹಳ್ಳಿ ಗ್ರಾಮದ ನಾರಾಯಣಸ್ವಾಮಿ ಎಂಬ ವ್ಯಕ್ತಿಗೆ ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲಿ ದನದ ಕೊಟ್ಟಿಗೆ ನಿರ್ಮಿಸಲು ಗ್ರಾಮ ಸಭೆಯಲ್ಲಿ ಹೆಸರು ಆಯ್ಕೆ ಮಾಡಲಾಗಿತ್ತು. ಇದಕ್ಕೆ ಸಂಬಂದಿಸಿದಂತೆ ನಮೂನೆ ೬ ರ ಅರ್ಜಿಯನ್ನು ಭರ್ತಿಮಾಡಿ ನಿರ್ಮಾಣಕ್ಕೆ ಅಗತ್ಯವಾದ ಎಲ್ಲಾ ದಾಖಲೆಗಳನ್ನು ಗ್ರಾಮ ಪಂಚಾಯತಿಗೆ ಸಲ್ಲಿಸಿದ್ದರೂ ಕೂಡ ಹಣ ಮಂಜೂರಾತಿಗೆ ಸಹಿ ಮಾಡದೇ ಗ್ರಾಮ ಪಂಚಾಯತಿ ಅಧ್ಯಕ್ಷರು ಪಕ್ಷಪಾತ ಧೋರಣೆ ಅನುಸರಿಸುತ್ತಿದ್ದಾರೆ ಎಂದು ಪ್ರತಿಭಟನಾ ನಿರತರು ಆರೋಪಿಸಿ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಶಾಂತಮ್ಮರಿಗೆ ಮನವಿ ಪತ್ರ ಸಲ್ಲಿಸಿದರು.
ಈ ಸಂಧರ್ಭದಲ್ಲಿ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ಹಾಗೂ ಹಾಲಿ ಸದಸ್ಯ ಟಿ.ಎಸ್.ಗೋಪಾಲರೆಡ್ಡಿ, ಸದಸ್ಯರಾದ ಗೊರಮಿಲ್ಲಹಳ್ಳಿ ವೆಂಕಟೇಶಪ್ಪ, ಲಕ್ಷ್ಮಮ್ಮ, ಪದ್ಮನಾರಾಯಣಸ್ವಾಮಿ, ಪಾಪಮ್ಮ ಪಿಳ್ಳಪ್ಪ, ಮುಖಂಡರಾದ ಕೆಂಪರೆಡ್ಡಿ, ಮಂಜುನಾಥ, ಕೃಷ್ಣಪ್ಪ, ಪ್ರದೀಪ್ ಮತ್ತಿತರರು ಹಾಜರಿದ್ದರು.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!