26.3 C
Sidlaghatta
Tuesday, July 1, 2025

ಚಿಕಿತ್ಸೆ ದುಬಾರಿಯಾಗಿದೆ, ಉಚಿತ ಶಿಬಿರವನ್ನು ಸದ್ಭಳಕೆ ಮಾಡಿಕೊಳ್ಳಿ

- Advertisement -
- Advertisement -

ಆರೋಗ್ಯ ಸಂಬಂಧಿಸಿದ ತಪಾಸಣೆ ಮತ್ತು ಚಿಕಿತ್ಸೆ ದುಬಾರಿಯಾಗಿರುವಾಗ ನುರಿತ ತಜ್ಞರು ಉಚಿತವಾಗಿ ಆರೋಗ್ಯ ತಪಾಸಣಾ ಶಿಬಿರವನ್ನು ನಡೆಸುತ್ತಿದ್ದಾರೆ. ಸಾರ್ವಜನಿಕರು ಇದರ ಸದುಪಯೋಗಪಡಿಸಿಕೊಳ್ಳಬೇಕು ಎಂದು ಬಿಜೆಪಿ ನಗರ ಘಟಕದ ಅಧ್ಯಕ್ಷ ಬಿ.ಸಿ.ನಂದೀಶ್ ತಿಳಿಸಿದರು.
ನಗರದ ಅರಳೇಪೇಟೆಯ ಬಸವೇಶ್ವರಸ್ವಾಮಿ ದೇವಾಲಯದ ಆವರಣದಲ್ಲಿ ಭಾನುವಾರ ತಾಲ್ಲೂಕು ಬಿಜೆಪಿ ಘಟಕ ಹಾಗೂ ಬೆಂಗಳೂರು ಸ್ಪೆಷಲಿಸ್ಟ್ ಆಸ್ಪತ್ರೆಯ ಸಹಯೋಗದಲ್ಲಿ ಅಟಲ್ ಬಿಹಾರಿ ವಾಜಪೇಯಿರವರ ಜನ್ಮ ದಿನದ ಪ್ರಯುಕ್ತ ಉಚಿತ ಆರೋಗ್ಯ ಶಿಬಿರವನ್ನು ಉದ್ಘಾಟನೆ ಮಾಡಿ ಅವರು ಮಾತನಾಡಿದರು.

ರೋಗಿಗಳನ್ನು ಪರೀಕ್ಷಿಸುತ್ತಿರುವ ವೈದ್ಯರು
ರೋಗಿಗಳನ್ನು ಪರೀಕ್ಷಿಸುತ್ತಿರುವ ವೈದ್ಯರು

ಬೆಂಗಳೂರಿನ ಸ್ಪೆಷಲಿಸ್ಟ್ ಆಸ್ಪತ್ರೆಯ ನುರಿತ ಫಿಸಿಷಿಯನ್, ಹೃದ್ರೋಗ ತಜ್ಞರು, ಮೂಳೆ ಮತ್ತು ಕೀಲು ತಜ್ಞರು, ನರರೋಗ ತಜ್ಞರು, ಸ್ತ್ರೀ ಮತ್ತು ಪ್ರಸೂತಿ ತಜ್ಞರು ಸೇರಿದಂತೆ ನುರಿತ ತಜ್ಞ ವೈದ್ಯರು ಆಗಮಿಸಿದ್ದಾರೆ. ಈ ಅವಕಾಶವನ್ನು ಬಳಸಿಕೊಳ್ಳುವಂತೆ ಹೇಳಿದರು.
ಈ ಸಂದರ್ಭದಲ್ಲಿ ಆಶಾಕಿರಣ ಅಂಧ ಮಕ್ಕಳ ಶಾಲೆಯ ವಿದ್ಯಾರ್ಥಿಗಳಿಗೆ ಭೋಜನ ವ್ಯವಸ್ಥೆಯನ್ನು ಮಾಡಿದ್ದು, ಉಚಿತವಾಗಿ ಆರೋಗ್ಯ ತಪಾಸಣೆಯನ್ನು ಮಾಡಲಾಯಿತು. ಉಲ್ಲೂರು ಪೇಟೆ, ಮಾರುತಿ ನಗರ ಮತ್ತು ಗಾಂಧಿನಗರದ ಯುವಕರು ಸ್ವಯಂ ಸೇವಕರಾಗಿ ಕೆಲಸ ಮಾಡಿದರು.
ಬೆಂಗಳೂರಿನ ಸ್ಪೆಷಲಿಸ್ಟ್ ಆಸ್ಪತ್ರೆಯ ಮುಖ್ಯಸ್ಥ ಪ್ರಶಾಂತ್, ಹೃದಯ ತಜ್ಞ ಡಾ. ಅಬ್ದುಲ್, ನರರೋಗ ತಜ್ಞ ಡಾ.ವಿವೇಕಾನಂದ, ಮಧುಮೇಹ ತಜ್ಞ ಡಾ. ಆದಿತ್ಯ ಚೌಟಿ, ಸ್ತ್ರೀ ಮತ್ತು ಪ್ರಸೂತಿ ತಜ್ಞೆ ಡಾ. ಲಕ್ಷ್ಮೀ, ಮಧು, ರಾಮಯ್ಯ, ವರ್ಷ, ಅರುಣ್ ಕುಮಾರ್, ಬಿಜೆಪಿ ತಾಲ್ಲೂಕು ಅಧ್ಯಕ್ಷ ಸುರೇಂದ್ರ ಗೌಡ, ಜಿಲ್ಲಾ ಉಪಧ್ಯಕ್ಷ ದಾಮೋದರ್, ಜಿಲ್ಲಾ ಕಾರ್ಯದರ್ಶಿ ಲೋಕೇಶ್ಗೌಡ, ಕೆಂಪರೆಡ್ಡಿ, ಮಂಜುಳಮ್ಮ, ಸುಜಾತಮ್ಮ, ನಾಗರತ್ನಮ್ಮ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
This site is protected by reCAPTCHA and the Google Privacy Policy and Terms of Service apply.

The reCAPTCHA verification period has expired. Please reload the page.
Captcha verification failed!
CAPTCHA user score failed. Please contact us!
error: Content is protected !!