23.1 C
Sidlaghatta
Monday, October 27, 2025

ಚೀಮಂಗಲ ಗ್ರಾಮದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

- Advertisement -
- Advertisement -

ತಾಲ್ಲೂಕಿನ ಚೀಮಂಗಲ ಗ್ರಾಮದಲ್ಲಿ ಶನಿವಾರ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು. ರಾಜ್ಯೋತ್ಸವದ ಪ್ರಯುಕ್ತ ಸ್ವಯಂಪ್ರೇರಿತ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿತ್ತು.
ಭಾರತೀಯ ರೆಡ್ ಕ್ರಾಸ್ ಸೊಸೈಟಿ ಮತ್ತು ಚೀಮಂಗಲ ಗ್ರಾಮ ಪಂಚಾಯತಿ ಹಾಗೂ ಗ್ರಾಮದ ಕನ್ನಡ ರಾಜ್ಯೋತ್ಸವ ಆಚರಣೆ ಸಮಿತಿ ಸಹಯೋಗದಲ್ಲಿ ನಡೆಸಿದ ರಕ್ತದಾನ ಶಿಬಿರದಲ್ಲಿ 62 ಯೂನಿಟ್ ರಕ್ತವನ್ನು ಸಂಗ್ರಹಿಸಲಾಯಿತು.
ತಹಶೀಲ್ದಾರ್ ಜಿ.ಎ. ನಾರಾಯಣಸ್ವಾಮಿ ಧ್ವಜಾರೋಹಣ ನಡೆಸಿ ರಾಜ್ಯೋತ್ಸವದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಭಾರತೀಯ ರೆಡ್ ಕ್ರಾಸ್ ಸೊಸೈಟಿ ಯವರು ಕನ್ನಡ ರಾಜ್ಯೋತ್ಸವದಂತಹ ಸಮಾರಂಭಗಳಲ್ಲಿ ಸ್ವಯಂಪ್ರೇರಿತ ರಕ್ತದಾನ ಶಿಬಿರಗಳಂತಹ ಸಾಮಾಜಿಕ ಕಳಕಳಿಯುಳ್ಳ ಕೆಲಸಗಳನ್ನು ಮಾಡುತ್ತಿರುವುದು ಪ್ರೇರಣಾದಾಯಕ. ಕನ್ನಡವು ಈಗ ಹೆಚ್ಚು ಪ್ರಚಲಿತದಲ್ಲಿರುವುದು ಗ್ರಾಮಗಳಲ್ಲೇ ಹಾಗೂ ಗ್ರಾಮಸ್ಥರಿಂದ ನೀಡಿದ ರಕ್ತವು ಹಲವರ ಜೀವರಕ್ಷಕ ಎಂದು ತಿಳಿಸಿದರು.
ಶಾಲಾ ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು. ಗ್ರಾಮ ಪಂಚಾಯತಿ ಅದ್ಯಕ್ಷ ಬಿ,ಈಶ್ವರ್, ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅದ್ಯಕ್ಷ ಎನ್.ಕೆ.ಗುರುರಾಜ ರಾವ್, ಕನ್ನಡ ರಾಜ್ಯೋತ್ಸವ ಆಚರಣೆ ಸಮಿತಿ ಅಧ್ಯಕ್ಷ ಮೋಹನ್, ಪಂಚಾಯತಿ ಅಭಿವೃದ್ಧಿ ಅಧಿಕಾರಿ ಮುನಿನಾರಾಯಣಪ್ಪ, ಪ್ರೌಢಶಾಲಾ ಮುಖ್ಯ ಶಿಕ್ಷಕ ಶಿವಶಂಕರ್, ಕಂದಾಯ ನಿರೀಕ್ಷಕ ಕುಮಾರಸ್ವಾಮಿ, ರೆಡ್ ಕ್ರಾಸ್ ಸೊಸೈಟಿಯ ಡಾ.ವಿಕ್ರಮ್, ರವಿ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!