27.1 C
Sidlaghatta
Thursday, November 13, 2025

ಚೌಡಸಂದ್ರ ಗ್ರಾಮದಲ್ಲಿ ಹನುಮಜಯಂತಿ ಆಚರಣೆ

- Advertisement -
- Advertisement -

ತಾಲ್ಲೂಕಿನ ಚೌಡಸಂದ್ರ ಗ್ರಾಮದ ಆಂಜನೇಯಸ್ವಾಮಿ ದೇವಾಲಯದಲ್ಲಿ ಸೋಮವಾರ ಹನುಮಜಯಂತಿಯನ್ನು ಶ್ರದ್ಧಾಭಕ್ತಿಯಿಂದ ವಿಶೇಷವಾಗಿ ಆಚರಿಸಲಾಯಿತು.
ಸೀತಾರಾಮ ಲಕ್ಷ್ಮಣ ಸಮೇತ ಆಂಜನೇಯಸ್ವಾಮಿಯ ನೂತನ ಉತ್ಸವ ಮೂರ್ತಿಯ ಕಲ್ಯಾಣೋತ್ಸವ ಹಾಗೂ 28 ನೇ ವಾರ್ಷಿಕೋತ್ಸವದ ಪ್ರಯುಕ್ತ ದೇವಾಲಯದಲ್ಲಿ ವಿಶೇಷ ಅಲಂಕಾರ, ಪೂಜಾ ಮಹೋತ್ಸವದೊಂದಿಗೆ ಭಕ್ತಿಗೀತೆ, ಭಾವಗೀತೆ, ಭೋಜನ ವ್ಯವಸ್ಥೆಯನ್ನು ಮಾಡಲಾಗಿತ್ತು.

ಶಿಡ್ಲಘಟ್ಟ ತಾಲ್ಲೂಕಿನ ಚೌಡಸಂದ್ರ ಗ್ರಾಮದ ಆಂಜನೇಯಸ್ವಾಮಿ ದೇವಾಲಯದಲ್ಲಿ ಸೋಮವಾರ ಹನುಮಜಯಂತಿ ಪ್ರಯುಕ್ತ ಭಜನೆ, ಭಕ್ತಿಗಾಯನವನ್ನು ಆಯೋಜಿಸಲಾಗಿತ್ತು.
ಶಿಡ್ಲಘಟ್ಟ ತಾಲ್ಲೂಕಿನ ಚೌಡಸಂದ್ರ ಗ್ರಾಮದ ಆಂಜನೇಯಸ್ವಾಮಿ ದೇವಾಲಯದಲ್ಲಿ ಸೋಮವಾರ ಹನುಮಜಯಂತಿ ಪ್ರಯುಕ್ತ ಭಜನೆ, ಭಕ್ತಿಗಾಯನವನ್ನು ಆಯೋಜಿಸಲಾಗಿತ್ತು.

ಭಾನುವಾರ ರಾತ್ರಿ ಗ್ರಾಮದಲ್ಲಿ ಉತ್ಸವ ಮೂರ್ತಿಯ ಮೆರವಣಿಗೆಯನ್ನು ಮಾಡಲಾಯಿತು. ಹೂವಿನ ಪಲ್ಲಕ್ಕಿಯ ಉತ್ಸವಕ್ಕೆ ನೂರಾರು ಮಂದಿ ಸಾಕ್ಷಿಯಾದರು. ದೇವಾಲಯವನ್ನು ಹಾಗೂ ಗ್ರಾಮದ ಪ್ರಮುಖ ರಸ್ತೆಗಳನ್ನೆಲ್ಲಾ ವಿದ್ಯುತ್‌ ದೀಪಗಳಿಂದ ಅಲಂಕರಿಸಲಾಗಿತ್ತು.
ದೇವರನ್ನು ಮತ್ತು ದೇವಾಲಯವನ್ನು ವಿವಿಧ ಹೂಗಳಿಂದ ಅಲಂಕರಿಸಲಾಗಿತ್ತು. ಹನುಮಜಯಂತಿಯ ಪ್ರಯುಕ್ತ ಗ್ರಾಮದಲ್ಲಿ ಜಾತ್ರೆಯ ವಾತಾವರಣ ಮೂಡಿದ್ದು, ಸಾವಿರಾರು ಭಕ್ತರು ವಿವಿಧ ತಾಲ್ಲೂಕು ಜಿಲ್ಲೆಗಳಿಂದ ಆಗಮಿಸಿ ದೇವರ ಪೂಜೆಯಲ್ಲಿ ಪಾಲ್ಗೊಂಡರು. ತಿಂಡಿ ತಿನಿಸುಗಳು, ಆಟಿಕೆಗಳು, ಮುಂತಾದ ವಿವಿಧ ರೀತಿಯ ಅಂಗಡಿಗಳು ತರೆಯಲಾಗಿತ್ತು. ಆಗಮಿಸಿದ ಭಕ್ತರಿಗೆಲ್ಲಾ ದೇವಾಲಯದ ಸಮಿತಿ ವತಿಯಿಂದ ಭೋಜನ ವ್ಯವಸ್ಥೆಯನ್ನು ಮಾಡಿದ್ದರು.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!