16.1 C
Sidlaghatta
Saturday, December 20, 2025

ಛಲದಿಂದ ಸಾಧನೆ ಮಾಡಿ

- Advertisement -
- Advertisement -

ವಿದ್ಯಾರ್ಥಿ ಜೀವನದಲ್ಲಿ ಕ್ರೀಡೆಗೆ ಹೆಚ್ಚಿನ ಪ್ರಾಮುಖ್ಯತೆ ನೀಡುವ ಮೂಲಕ ಕ್ರೀಡಾಪಟುಗಳು ಛಲದಿಂದ ಸಾಧನೆ ಮಾಡಿದಾಗ ಮಾತ್ರ ಗುರಿಯ ಯಶಸ್ಸು ಮುಟ್ಟಲು ಸಾಧ್ಯ ಎಂದು ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಎನ್.ಆನಂದ್ ಹೇಳಿದರು.
ನಗರದ ನೆಹರೂ ಕ್ರೀಡಾಂಗಣದಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆಯಿಂದ ನಡೆದ ತಾಲ್ಲೂಕು ಮಟ್ಟದ ಕ್ರೀಡಾಕೂಟದಲ್ಲಿ ವಿಜೇತರಾದ ಕಾಲೇಜು ವಿದ್ಯಾರ್ಥಿಗಳಿಗೆ ಗುರುವಾರ ಪ್ರಮಾಣಪತ್ರ ಹಾಗೂ ಬಹುಮಾನ ವಿತರಿಸಿ ಅವರು ಮಾತನಾಡಿದರು.
ಕ್ರೀಡೆ ಮನುಷ್ಯನ ಆರೋಗ್ಯ ವೃದ್ಧಿಗೆ ಸಹಕಾರಿಯಾಗಿದ್ದು ವಿದ್ಯಾರ್ಥಿಗಳು ಕ್ರೀಡೆಗಳಲ್ಲಿ ಸೋಲು ಗೆಲುವನ್ನು ಸಮನಾಗಿ ಸ್ವೀಕರಿಸಿದಾಗ ಮಾತ್ರ ಸ್ಪರ್ಧೆಗೆ ಮಹತ್ವ ಬರುತ್ತದೆ. ಹಾಗಾಗಿ ಕ್ರೀಡೆಗಳಲ್ಲಿ ಇನ್ನಷ್ಟು ಉತ್ತಮ ಅಭ್ಯಾಸವನ್ನು ಮುಂದುವರೆಸುವಂತೆ ವಿದ್ಯಾರ್ಥಿಗಳಿಗೆ ಸೂಚಿಸಿದರು.
ನಗರದ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳು ವಿವಿಧ ಕ್ರೀಡೆಗಳಲ್ಲಿ ಭಾಗವಹಿಸಿ ಬಾಲಕರ ಹಾಗೂ ಬಾಲಕಿಯರ ವಾಲೀಬಾಲ್ ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದು ವಿಜೇತ ವಿದ್ಯಾರ್ಥಿಗಳನ್ನು ಕಾಲೇಜು ಪ್ರಾಂಶುಪಾಲರು ಸೇರಿದಂತೆ ಆಡಳಿತ ಮಂಡಳಿ ಸದಸ್ಯರು ಅಭಿನಂದಿಸಿದರು.
ಕಾಲೇಜಿನ ಕ್ರೀಡಾ ಕಾರ್ಯದರ್ಶಿ ಎಚ್.ವಿ.ಶಿವಾರೆಡ್ಡಿ, ಉಪನ್ಯಾಸಕರಾದ ಕೆ.ಚಿತ್ತಯ್ಯ, ಡಿ.ಲಕ್ಷ್ಮಯ್ಯ, ಸಿ.ವೆಂಕಟಶಿವಾರೆಡ್ಡಿ, ಶಿವಶಂಕರ್, ದೀಪಕ್, ಎಚ್.ಸಿ.ಮುನಿರಾಜು, ಎ.ಲೋಕೇಶ್, ಮಂಗಳಗೌರಿ, ರಾಜ್ಯ ಪರಿಷತ್ ಸದಸ್ಯರಾದ ಕೆ.ಎನ್.ಸುಬ್ಬಾರೆಡ್ಡಿ, ರಮಾ, ಸಾವಿತ್ರಮ್ಮ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.

For Daily Updates

WhatsApp 'HI' to 7406303366

Subscribe to ನಮ್ಮ ಶಿಡ್ಲಘಟ್ಟ Newspaper

Launching Soon! Register for your Free Newspaper Copy Today.

- Advertisement -

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!