16.1 C
Sidlaghatta
Monday, December 29, 2025

ಜನರು ಮತ್ತೊಂದು ಅವಕಾಶವನ್ನು ನೀಡಿ ಆಶೀರ್ವದಿಸಬೇಕು – ಎಂ.ರಾಜಣ್ಣ

- Advertisement -
- Advertisement -

ತಾಲ್ಲೂಕಿನ ಮಳಮಾಚನಹಳ್ಳಿ ಸೇರಿದಂತೆ ಚೀಮಂಗಲ, ತುಮ್ಮನಹಳ್ಳಿ ಗ್ರಾಮಗಳಲ್ಲಿ ಬುಧವಾರ ಚುನಾವಣೆ ಪ್ರಚಾರ ನಡೆಸಿ ಪಕ್ಷೇತರ ಅಭ್ಯರ್ಥಿ ಎಂ.ರಾಜಣ್ಣ ಮಾತನಾಡಿದರು.
ಕಳೆದ ಬಾರಿ ಜೆಡಿಎಸ್ ನಿಂದ ಸ್ಪರ್ಧಿಸಿ ಶಾಸಕನಾದ ನಂತರ ಕ್ಷೇತ್ರದಲ್ಲಿ ಬಹಳಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದೇನೆ. ಇಷ್ಟಾದರೂ ಪಕ್ಷದ ವರಿಷ್ಠರು ನಮಗೆ ಅನ್ಯಾಯ ಮಾಡಿ ಬೇರೊಬ್ಬರಿಗೆ ಟಿಕೆಟ್ ನೀಡಿದ್ದಾರೆ. ಹಾಗಾಗಿ ಈ ಬಾರಿಯ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದು ಜನರು ಮತ್ತೊಂದು ಅವಕಾಶವನ್ನು ನೀಡಿ ಆಶೀರ್ವದಿಸಬೇಕು ಎಂದು ಅವರು ಹೇಳಿದರು.
ಕಳೆದ ಐದು ವರ್ಷಗಳ ಅವಧಿಯಲ್ಲಿ ಕ್ಷೇತ್ರದ ಶಾಸಕನಾಗಿ ಕೈಗೊಂಡ ಅಭಿವೃದ್ಧಿ ಕಾರ್ಯಗಳನ್ನು ಮುಂದಿಟ್ಟುಕೊಂಡು ಈ ಬಾರಿಯ ಚುನಾವಣೆಯಲ್ಲಿ ಮತ್ತೊಂದು ಅವಕಾಶ ನೀಡುವಂತೆ ಜನರ ಬಳಿ ಬಂದಿದ್ದೇನೆ ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಸದಸ್ಯ ಡಾ.ಎ.ಎನ್.ಜಯರಾಮರೆಡ್ಡಿ, ಚೀಮಂಗಲ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ನಾರಾಯಣಸ್ವಾಮಿ, ಮುಖಂಡರಾದ ಕೆ.ಮಂಜುನಾಥ್, ಪ್ರಭಾಕರ್, ಮೋಹನ್, ಬಸವರಾಜ್, ಶಣ್ಮುಗಪ್ಪ ಹಾಜರಿದ್ದರು.

For Daily Updates

WhatsApp 'HI' to 7406303366

Subscribe to ನಮ್ಮ ಶಿಡ್ಲಘಟ್ಟ Newspaper

Launching Soon! Register for your Free Newspaper Copy Today.

- Advertisement -

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!