ಜಿಲ್ಲಾ ಕಾಂಗ್ರೆಸ್ನ ನೂತನ ಅಧ್ಯಕ್ಷರಾಗಿ ಶಿಡ್ಲಘಟ್ಟದ ಮಾಜಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮುನಿಕೃಷ್ಣಪ್ಪ ಆಯ್ಕೆ

- Advertisement -
- Advertisement -

ಚಿಕ್ಕಬಳ್ಳಾಪುರ ಜಿಲ್ಲಾ ಕಾಂಗ್ರೆಸ್ನ ನೂತನ ಅಧ್ಯಕ್ಷರಾಗಿ ಶಿಡ್ಲಘಟ್ಟದ ಮಾಜಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮುನಿಕೃಷ್ಣಪ್ಪ (ನಂದಾ ಮುನಿಕೃಷ್ಣಪ್ಪ) ಆಯ್ಕೆಯಾಗಿದ್ದಾರೆ.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿದ್ದ ಆಂಜಿನಪ್ಪನವರ ರಾಜೀನಾಮೆಯಿಂದ ಬಹಳಷ್ಟು ದಿನಗಳಿಂದಲೂ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನ ಖಾಲಿಯಾಗಿಯೆ ಉಳಿದಿತ್ತು.
ಕಳೆದ ಜನವರಿ ೧೩ ರಂದು ಹಂಗಾಮಿ ಅಧ್ಯಕ್ಷರಾಗಿ ಮಾಜಿ ಕೋಲಾರ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ವಿ.ಸುಭ್ರಮಣಿ ಅವರನ್ನು ಕೆ.ಪಿ.ಸಿ.ಸಿ.ಅಧ್ಯಕ್ಷ ಜಿ.ಪರಮೇಶ್ವರ್ ಅವರು ಆಯ್ಕೆ ಮಾಡಿ ಆದೇಶ ಹೊರಡಿಸಿದ್ದರಾದರೂ ಕಾರಣಾಂತರಗಳಿಂದ ಅವರ ಆಯ್ಕೆಯನ್ನು ರದ್ದುಗೊಳಿಸಲಾಗಿತ್ತು.
ಇದೀಗ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿರುವ ಮುನಿಕೃಷ್ಣಪ್ಪ ೧೯೫೭ ರಲ್ಲಿ ಅಂದಿನ ಸಂಯುಕ್ತರಂಗ (ಸೈಕಲ್ ಗುರುತು) ಪಕ್ಷದ ಸಾಮಾನ್ಯ ಕಾರ್ಯಕರ್ತರಾಗಿ ರಾಜಕೀಯ ಪ್ರವೇಶ ಮಾಡಿದರಾದರೂ ೧೯೭೨ ರಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡು ಈವರೆಗೂ ಕಾಂಗ್ರೆಸ್ ಪಕ್ಷದಲ್ಲಿ ವಿವಿಧ ಸ್ಥಾನಮಾನಗಳನ್ನು ಅಲಂಕರಿಸಿದ್ದಾರೆ.
೧೯೭೯ ರಲ್ಲಿ ಮೊದಲ ಭಾರಿಗೆ ಶಿಡ್ಲಘಟ್ಟ ಪುರಸಭೆಯ ಸದಸ್ಯರಾಗಿ ಆಯ್ಕೆಯಾಗುವುದರೊಂದಿಗೆ ೧೯೮೩ ರಲ್ಲಿ ಟೌನ್ ಎಸ್.ಎಫ್.ಸಿ.ಎಸ್ನ ಅಧ್ಯಕ್ಷರಾಗಿ, ೧೯೮೯ ಮತ್ತು ೧೯೯೨ ರಲ್ಲಿ ಪುನಃ ಪುರಸಭೆ ಸದಸ್ಯರಾಗಿ, ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ.
ನಗರದ ಪಿಎಲ್ಡಿ ಬ್ಯಾಂಕಿನ ನಿರ್ದೇಶಕರಾಗಿ ಮೂರು ಭಾರಿ ಆಯ್ಕೆಯಾಗಿದ್ದ ಇವರು ಒಂದು ಭಾರಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ.
ಕೇಂದ್ರ ರೈಲ್ವೆ ಸಲಹಾ ಸಮಿತಿ ಸದಸ್ಯರಾಗಿ ಸೇವೆ ಸಲ್ಲಿಸಿರುವ ಇವರು ಸತತವಾಗಿ ೨೦ ವರ್ಷಗಳ ಕಾಲ ಶಿಡ್ಲಘಟ್ಟ ತಾಲ್ಲೂಕು ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷರಾಗಿದ್ದು ಈಗ ಚಿಕ್ಕಬಳ್ಳಾಪುರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

Sidlaghatta News Desk
Sidlaghatta News Deskhttp://www.sidlaghatta.com
The editorial desk of Sidlaghatta.com (Namma Shidlaghatta), covering civic affairs, agriculture, silk trade, and local government news for Sidlaghatta taluk, Karnataka.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!