Home News ಜಿಲ್ಲಾ ಬಾಂಬ್ ಪತ್ತೆ ದಳ ಹಾಗೂ ಶ್ವಾನದಳದಿಂದ ಶೋಧ ಕಾರ್ಯ

ಜಿಲ್ಲಾ ಬಾಂಬ್ ಪತ್ತೆ ದಳ ಹಾಗೂ ಶ್ವಾನದಳದಿಂದ ಶೋಧ ಕಾರ್ಯ

0

ರಾಜ್ಯಾದ್ಯಂತ ಹೈಅಲರ್ಟ್ ಘೋಷಿಸಿರುವ ಹಿನ್ನಲೆಯಲ್ಲಿ ಶನಿವಾರ ನಗರದ ಸಾರ್ವಜನಿಕ ಪ್ರದೇಶಗಳಾದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ಸೇರಿದಂತೆ ರೈಲ್ವೇ ನಿಲ್ದಾಣ, ರೇಷ್ಮೆ ಗೂಡು ಮಾರುಕಟ್ಟೆಯಲ್ಲಿ ಜಿಲ್ಲಾ ಬಾಂಬ್ ಪತ್ತೆ ದಳ ಹಾಗೂ ಶ್ವಾನದಳದ ಅಧಿಕಾರಿಗಳು ಪರಿಶೀಲನೆ ನಡೆಸಿದರು.
ಉಗ್ರರದಾಳಿಯ ಎಚ್ಚರಿಕೆಯನ್ನು ಕೇಂದ್ರ ಗುಪ್ತಚರ ಇಲಾಖೆ ನೀಡಿರುವ ಹಿನ್ನಲೆಯಲ್ಲಿ ಜಿಲ್ಲೆಯಾದ್ಯಂತ ಬಾಂಬ್ ಪತ್ತೆ ದಳ ಹಾಗೂ ಶ್ವಾನದಳದ ಅಧಿಕಾರಿಗಳಿಂದ ಶೋಧ ಕಾರ್ಯಾಚರಣೆ ನಡೆಸುವ ಮೂಲಕ ಬಿಗಿ ಭದ್ರತೆಗೆ ಪೊಲೀಸ್ ಇಲಾಖೆ ಕ್ರಮ ವಹಿಸಿದೆ.
ಜಿಲ್ಲಾ ಬಾಂಬ್ ಪತ್ತೆ ದಳದ ಎಎಸ್ಸೈ ಮಂಜುನಾಥ್ ಮಾತನಾಡಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಆದೇಶದ ಮೇರೆಗೆ ಜನನಿಬಿಡ ಪ್ರದೇಶಗಳಾದ ಬಸ್ ನಿಲ್ದಾಣ, ರೈಲ್ವೇ ನಿಲ್ದಾಣಗಳಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಶೋಧ ಕಾರ್ಯ ಕೈಗೊಂಡಿದ್ದೇವೆ, ಎಂದು ಹೇಳಿ, ಸಾರ್ವಜನಿಕರು ಯಾವುದೇ ಆತಂಕಕ್ಕೆ ಒಳಗಾಗದಂತೆ ಅವರು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಶ್ವಾನದಳದ ಅಧಿಕಾರಿ ಮಿಲ್ಲರ್ ಫಿಲಿಪ್ಸ್, ಸಿಬ್ಬಂದಿ ದಯಾನಂದ್, ಶಿವಕುಮಾರ್, ಪೊಲೀಸ್ ಪೇದೆಗಳಾದ ರಾಜಗೋಪಾಲ್, ರೆಡ್ಡಪ್ಪ ಹಾಜರಿದ್ದರು.

error: Content is protected !!
Exit mobile version