20.1 C
Sidlaghatta
Thursday, January 1, 2026

ಜಿ.ಎಸ್.ಟಿ ತೆರಿಗೆ ರದ್ದತಿ ಹಾಗೂ ಪ್ರೋತ್ಸಾಹಧನ ನೀಡುವಂತೆ ಭಾರತೀಯ ಕಿಸಾನ್ ಸಂಘದಿಂದ ಮನವಿ

- Advertisement -
- Advertisement -

ರೈತರಿಗೆ ಪ್ರೋತ್ಸಾಹ ಧನ (ತೆಲಂಗಾಣ ಮಾದರಿಯಂತೆ) ಮತ್ತು ರೈತರ ಕೃಷಿ ಯಂತ್ರೋಪಕರಣಗಳು ಮತ್ತು ಪರಿಕರಗಳಿಗೆ ಜಿ.ಎಸ್.ಟಿ ತೆರಿಗೆ ರದ್ದತಿ ಮಾಡಬೇಕೆಂದು ಮುಖ್ಯಮಂತ್ರಿಗಳಿಗೆ ಜಿಲ್ಲಾಧಿಕಾರಿ ಅನಿರುದ್ಧ್ ಶ್ರವಣ್ ಮೂಲಕ ಭಾರತೀಯ ಕಿಸಾನ್ ಸಂಘದ ಜಿಲ್ಲಾ ಘಟಕದ ಸದಸ್ಯರು ಮನವಿಯನ್ನು ಮಂಗಳವಾರ ಸಲ್ಲಿಸಿದರು.
ರಾಜ್ಯ ಸರ್ಕಾರ ರೈತರಿಗೆ ಒಂದು ಎಕರೆಗೆ ಕನಿಷ್ಟ ಹತ್ತು ಸಾವಿರ ರೂಗಳ ಪ್ರೋತ್ಸಾಹ ಧನವನ್ನು ನೇರವಾಗಿ ರೈತರ ಖಾತೆಗಳಿಗೆ ನೀಡಿದರೆ, ತಾತ್ಕಾಲಿಕವಾಗಿ ಜೀವನ ನಿರ್ವಹಣೆಗೆ ಅನುಕೂಲವಾಗುವುದು. ಇದನ್ನು ಶೀಘ್ರವಾಗಿ ಮಾಡಬೇಕು.
ರೈತರು ಆಹಾರ ಉತ್ಪಾದನೆಯನ್ನು ಎಲ್ಲಾ ಜನರ ಒಳಿತಿಗಾಗಿ ಮಾಡುವುದರಿಂದ ಅವರು ಬಳಸುವ ಕೃಷಿ ಯಂತ್ರೋಪಕರಣಗಳು ಮತ್ತು ಕೃಷಿ ಪರಿಕರಗಳಿಗೆ ಯಾವುದೇ ತೆರಿಗೆಗಳನ್ನು ವಿಧಿಸದೆ ರಿಯಾಯಿತಿ ನೀತಿಯನ್ನು ರೂಪಿಸಬೇಕೆಂದು ಒತ್ತಾಯಿಸಿ ಮನವಿ ಸಲ್ಲಿಸಿದರು.
ಭಾರತೀಯ ಕಿಸಾನ್ ಸಂಘದ ರಾಜ್ಯ ಉಪಾಧ್ಯಕ್ಷ ಅಗಲಗುರ್ಕಿ ಕೃಷ್ಣಪ್ಪ, ಸದಸ್ಯ ಎಲ್.ಎನ್.ಶಿವಮೂರ್ತಿ, ಜಿಲ್ಲಾ ಘಟಕದ ಕಾರ್ಯದರ್ಶಿ ಬೂದಾಳ ರಾಮಾಂಜಿ, ಶಿಡ್ಲಘಟ್ಟ ತಾಲ್ಲೂಕು ಘಟಕದ ನಾಗಮಂಗಲ ವೆಂಕಟರೆಡ್ಡಿ, ಚಿಂತಾಮಣಿ ತಾಲ್ಲೂಕು ಘಟಕದ ಅಧ್ಯಕ್ಷ ಹೊಸಹಳ್ಳಿ ರವಿರಾಜು, ಜಾತವಾರ ಮುನಿರಾಜು, ಅಗಲಗುರ್ಕಿ ಅಕ್ಷ್ಮಿನಾರಾಯಣಪ್ಪ, ನಾಗಮಂಗಲ ನಾಗೇಶ್, ನಾಗರಾಜು, ಪೆರುಮಾಚನಹಳ್ಳಿ ಕೃಷ್ಣಪ್ಪ ಹಾಜರಿದ್ದರು.

For Daily Updates

WhatsApp 'HI' to 7406303366

Subscribe to ನಮ್ಮ ಶಿಡ್ಲಘಟ್ಟ Newspaper

Launching Soon! Register for your Free Newspaper Copy Today.

- Advertisement -

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!