ಜುಲೈ ೩೧ ರಂದು ನಾಡಪ್ರಭು ಕೆಂಪೇಗೌಡರ ಜಯಂತ್ಯುತ್ಸವ ಕಾರ್ಯಕ್ರಮವನ್ನು ರಾಜ್ಯ ಸರ್ಕಾರದ ನಿರ್ದೇಶನದಂತೆ ತಾಲ್ಲೂಕು ಆಡಳಿತದ ವತಿಯಿಂದ ಆಚರಣೆ ಮಾಡಲಾಗುವುದು ಎಂದು ತಹಶೀಲ್ದಾರ್ ಅಜಿತ್ ಕುಮಾರ್ ರೈ ತಿಳಿಸಿದರು.
ನಗರದ ತಾಲ್ಲೂಕು ಕಚೇರಿಯ ಸಭಾಂಗಣದಲ್ಲಿ ಬುಧವಾರ ತಹಶೀಲ್ದಾರ್ ಅಜಿತ್ ಕುಮಾರ್ ರೈ ಅವರ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಒಕ್ಕಲಿಗ ಸಮುದಾಯದ ಮುಖಂಡರುಗಳು, ತಾಲ್ಲೂಕು ಮಟ್ಟದ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ ಅವರು ಮಾತನಾಡಿದರು.
ಜೂನ್ ೨೭ ರಂದು ಒಕ್ಕಲಿಗ ಸಂಘದ ನಿದೇರ್ಶನದಂತೆ ರಾಜ್ಯಾದ್ಯಂತ ಕೆಂಪೇಗೌಡರ ಜಯಂತಿ ಕಾರ್ಯಕ್ರಮವನ್ನು ಅದ್ದೂರಿಯಾಗಿ ಆಚರಣೆ ಮಾಡಲಾಗಿದೆ. ಸರ್ಕಾರದ ಆದೇಶ ಬರುವುದು ತಡವಾಯಿತು. ಆಗಸ್ಟ್ ಅಂತ್ಯದೊಳಗೆ ತಾಲ್ಲೂಕು ಆಡಳಿತದ ವತಿಯಿಂದ ಆಚರಣೆ ಮಾಡಲು ನಿರ್ದೇಶನ ಬಂದಿರುವುದರಿಂದ ಜುಲೈ ೩೧ ರಂದು ಸರಳವಾಗಿ ಆಚರಣೆ ಮಾಡುವುದರ ಜತೆಗೆ, ಎಸ್.ಎಸ್.ಎಲ್.ಸಿಯ ೩೪ ಮಂದಿ ವಿದ್ಯಾರ್ಥಿಗಳು, ಪಿ.ಯು.ಸಿ ಯ ೧೫ ಮಂದಿ ವಿದ್ಯಾರ್ಥಿಗಳನ್ನು ಸನ್ಮಾನಿಸಲು ತೀರ್ಮಾನಿಸಲಾಗಿದೆ ಎಂದು ಹೇಳಿದರು.
ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಾಹಕ ಅಧಿಕಾರಿ ವೆಂಕಟೇಶ್, ಕ್ಷೇತ್ರ ಶಿಕ್ಷಣಾಧಿಕಾರಿ ರಘುನಾಥರೆಡ್ಡಿ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಕೇಶವರೆಡ್ಡಿ, ಒಕ್ಕಲಿಗ ಸಂಘದ ಪದಾಧಿಕಾರಿಗಳಾದ ಕೆಂಪರೆಡ್ಡಿ, ನಾರಾಯಣಸ್ವಾಮಿ, ಜೆ.ವಿ.ವೆಂಕಟಸ್ವಾಮಿ, ಸುಬ್ಬಾರೆಡ್ಡಿ, ಸಿ.ಪಿ.ಈ ಕರಗಪ್ಪ, ದೇವರಾಜು, ಎ.ಎಂ.ತ್ಯಾಗರಾಜ್, ಕೃಷ್ಣಪ್ಪ ಹಾಜರಿದ್ದರು.
- Advertisement -
- Advertisement -
For Daily Updates
WhatsApp 'HI' to 7406303366
- Advertisement -
- Advertisement -