Home News ಜೆಡಿಎಸ್ ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ ಗುಂಪು ಘರ್ಷಣೆ

ಜೆಡಿಎಸ್ ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ ಗುಂಪು ಘರ್ಷಣೆ

0

ತಾಲ್ಲೂಕಿನ ಕೆ.ಮುತ್ತುಗದಹಳ್ಳಿ ಗ್ರಾಮದಲ್ಲಿ ಜಿಲ್ಲಾ ಪಂಚಾಯತಿ ಮತ್ತು ತಾಲ್ಲೂಕು ಪಂಚಾಯತಿ ಚುನಾವಣಾ ಫಲಿತಾಂಶದ ಹಿನ್ನೆಲೆಯಲ್ಲಿ ಮಂಗಳವಾರ ರಾತ್ರಿ ಜೆಡಿಎಸ್ ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ ಗುಂಪು ಘರ್ಷಣೆ ನಡೆದಿದೆ.
ಚೀಮಂಗಲ ಜಿಲ್ಲಾ ಪಂಚಾಯತಿ ಕ್ಷೇತ್ರದಿಂದ ಕೆ.ಮುತ್ತುಗದಹಳ್ಳಿ ಆರ್.ವಿನುತಾ ಶ್ರೀನಿವಾಸ್ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿದ್ದರು ಮತ್ತು ಜೆಡಿಎಸ್ ಪಕ್ಷದಿಂದ ತಾದೂರಿನ ತನುಜಾ ರಘು ಸ್ಪರ್ಧಿಸಿದ್ದರು. ಜೆಡಿಎಸ್ ಗೆದ್ದ ಹಿನ್ನೆಲೆಯಲ್ಲಿ ರಾತ್ರಿ ಸುಮಾರು 10 ಗಂಟೆ ಸಮಯದಲ್ಲಿ ಕೆ.ಮುತ್ತುಗದಹಳ್ಳಿ ಗ್ರಾಮದಲ್ಲಿ ಕಾಂಗ್ರೆಸ್ ಅಭ್ಯರ್ಥಿಯ ಮನೆಯ ಬಳಿ ವಿಜೇತ ಜೆಡಿಎಸ್ ಕಾರ್ಯಕರ್ತರು ಪಟಾಕಿ ಸಿಡಿಸಿದಾಗ ಘರ್ಷಣೆ ನಡೆದಿದೆ.
ಸ್ಥಳಕ್ಕೆ ಪೊಲೀಸರು ಆಗಮಿಸಿ ಲಘು ಲಾಟಿ ಪ್ರಹಾರ ನಡೆಸಿ ಪರಿಸ್ಥಿತಿಯನ್ನು ಹತೋಟಿಗೆ ತಂದಿದ್ದಾರೆ. ಎರಡೂ ಪಕ್ಷಗಳ 20 ಮಂದಿಯ ಮೇಲೆ ಪ್ರಕರಣ ದಾಖಲಿಸಲಾಗಿದೆ.
ಕಾಂಗ್ರೆಸ್ ಕಾರ್ಯಕರ್ತರಾದ ಸುರೇಶ್, ಶ್ರೀನಾಥ್, ಮಂಜುನಾಥ್, ರಾಮಚಂದ್ರ ಮತ್ತು ಜೆಡಿಎಸ್ ಕಾರ್ಯಕರ್ತರಾದ ಕೇಶವ, ವೆಂಕಟೇಶಮೂರ್ತಿ, ಟಿ.ಕೃಷ್ಣಪ್ಪ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

error: Content is protected !!