ತಾಲ್ಲೂಕಿನ ಜೆಡಿಎಸ್ ಮುಖಂಡರಾದ ತರಬಳ್ಳಿ ಭಾಸ್ಕರರೆಡ್ಡಿ ಮತ್ತು ದೊಣ್ಣಹಳ್ಳಿ ರಾಮಣ್ಣ ಅವರ ನೇತೃತ್ವದಲ್ಲಿ ಸುಮಾರು 18 ಮಂದಿ ಬಿ.ಜೆ.ಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ ಎಂದು ಬಿ.ಜೆ.ಪಿ ತಾಲ್ಲೂಕು ಘಟಕದ ಅಧ್ಯಕ್ಷ ಸುರೇಂದ್ರಗೌಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈಚೆಗೆ ಬೆಂಗಳೂರಿನ ಬಿ.ಜೆ.ಪಿ ಕಾರ್ಯಾಲಯದಲ್ಲಿ ಬಿ.ಜೆ.ಪಿ ರಾಜ್ಯಾಧ್ಯಕ್ಷ ಯಡಯೂರಪ್ಪ, ಜಿಲ್ಲಾಧ್ಯಕ್ಷ ಎನ್.ಎಂ.ರವಿನಾರಾಯಣರೆಡ್ಡಿ ಮತ್ತು ಉಸ್ತುವಾರಿ ರವೀಂದ್ರ ಅವರ ಸಮ್ಮುಖದಲ್ಲಿ ಈ ಸೇರ್ಪಡೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಬಿ.ಜೆ.ಪಿ ತಾಲ್ಲೂಕು ಮುಖಂಡರಾದ ಶ್ರೀರಾಮರೆಡ್ಡಿ, ಸುರೇಶ್, ನಂದೀಶ್, ಲೋಕೇಶ್ಗೌಡ, ದಾಮೋದರ್, ಅರಿಕೆರೆ ಮುನಿರಾಜು, ಸುಜಾತಮ್ಮ, ಮಂಜುಳಮ್ಮ, ರತ್ನಮ್ಮ, ಶಿವಕುಮಾರಗೌಡ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು ಎಂದು ತಿಳಿಸಿದ್ದಾರೆ.
- Advertisement -
- Advertisement -
For Daily Updates
WhatsApp 'HI' to 7406303366
- Advertisement -
- Advertisement -