ತಾಲ್ಲೂಕು ವಿಪ್ರ ಪ್ರತಿಭಾ ಪುರಸ್ಕಾರ ಮತ್ತು ಸೇವಾ ಟ್ರಸ್ಟ್ ವತಿಯಿಂದ ಗುರುವಾರ ಸಂಜೆ ನಗರದ ವೇಣುಗೋಪಾಲಸ್ವಾಮಿ ದೇವಾಲಯದಲ್ಲಿ ಮಾಜಿ ರಾಷ್ಟ್ರಪತಿ ಡಾ.ಅಬ್ದುಲ್ ಕಲಾಂ ಅವರ ಭಾವಚಿತ್ರಕ್ಕೆ ಪುಷ್ಪನಮನವನ್ನು ಸಲ್ಲಿಸಿ ಮೌನಾಚರಣೆಯ ಮೂಲಕ ಶ್ರದ್ಧಾಂಜಲಿಯನ್ನು ಸಲ್ಲಿಸಲಾಯಿತು.
ರಾಷ್ಟ್ರಪತಿ ಡಾ.ಅಬ್ದುಲ್ ಕಲಾಂ ಅವರ ಜೀವನ, ವಿದ್ಯಾಭ್ಯಾಸ, ಸಾಧನೆ, ವಿದ್ಯಾರ್ಥಿಗಳು ಮತ್ತು ಯುವಜನತೆಗೆ ನೀಡಿದ ಪ್ರೇರಣೆ, ಸರಳ ಜೀವನ, ಅವರ ಕನಸುಗಳ ಕುರಿತಂತೆ ವಿಪ್ರ ಪ್ರತಿಭಾ ಪುರಸ್ಕಾರ ಮತ್ತು ಸೇವಾ ಟ್ರಸ್ಟ್ನ ಗೌರವಾಧ್ಯಕ್ಷ ಡಾ.ಡಿ.ಟಿ.ಸತ್ಯನಾರಾಯಣರಾವ್, ಅಧ್ಯಕ್ಷ ಬಿ.ಆರ್.ಅನಂತಕೃಷ್ಣ, ಕಾರ್ಯದರ್ಶಿ ವಿ.ಕೃಷ್ಣ, ಖಜಾಂಚಿ ಶ್ರೀಕಾಂತ್ ಮಾತನಾಡಿದರು.
ಡಿ.ವಿ.ಭಾಸ್ಕರ್, ವಿ.ಮಂದುಸೂದನ್, ಗೋಪಾಲಕೃಷ್ಣ, ಎಸ್.ಡಿ.ಮಂಜುನಾಥ್, ಮಂಜುನಾಥ್, ಹರೀಶ, ಕೆ.ಮಂಜುನಾಥ, ಎಚ್.ವಿ.ನಾಗೇಂದ್ರ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.