Home News ಡಾ.ಬಿ.ಆರ್.ಅಂಬೇಡ್ಕರ್ ಜಯಂತ್ಯುತ್ಸವ

ಡಾ.ಬಿ.ಆರ್.ಅಂಬೇಡ್ಕರ್ ಜಯಂತ್ಯುತ್ಸವ

0

ನಗರದ ಸಿದ್ಧಾರ್ಥನಗರದ ಬಹುಜನ ವಿದ್ಯಾರ್ಥಿ ಸಂಘ ಮತ್ತು ಭಾರತೀಯ ರೆಡ್ಕ್ರಾಸ್ ಸಂಸ್ಥೆ ಡಾ.ಬಿ.ಆರ್.ಅಂಬೇಡ್ಕರ್ ಅವರ 125 ನೇ ಜಯಂತಿಯ ಅಂಗವಾಗಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರವನ್ನು ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಗುರುವಾರ ಆಯೋಜಿಸಿದ್ದರು.
‘ಡಾ.ಬಿ.ಆರ್.ಅಂಬೇಡ್ಕರ್ ಅವರ ಸಮಾಜಮುಖಿ ಆಶಯವನ್ನು ಪಾಲಿಸಲು ನಾವು ರಕ್ತದಾನ ಶಿಬಿರವನ್ನು ನಡೆಸುತ್ತಿದ್ದೇವೆ. ಯುವಜನರು ಹಾಗೂ ವಿದ್ಯಾರ್ಥಿಗಳಿಗೆ ಅಂಬೇಡ್ಕರ್ ಅವರ ವಿಚಾರವನ್ನು ತಿಳಿಸುವ ಕೆಲಸ ಆಗಬೇಕಿದೆ. ಆದರ್ಶ ಮತ್ತು ಗುರಿಯಿಲ್ಲದ ಜೀವನ ನಿರರ್ಥಕ’ ಎಂದು ಬಹುಜನ ವಿದ್ಯಾರ್ಥಿ ಸಂಘದ ತಾಲ್ಲೂಕು ಅಧ್ಯಕ್ಷ ಎಸ್.ನರೇಶ್ ಬಾಬು ತಿಳಿಸಿದರು.
ಭಾರತೀಯ ರೆಡ್ಕ್ರಾಸ್ ಸಂಸ್ಥೆಯ ಗುರುರಾಜರಾವ್, ಬಹುಜನ ವಿದ್ಯಾರ್ಥಿ ಸಂಘದ ಮೂರ್ತಿ, ಸುಂದರರಾಜ್, ಮಂಜುನಾಥ್, ರವಿ, ಮಣಿ, ಮುನಿಯಪ್ಪ, ಆನಂದ, ಮುರಳಿ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.
ನೂಲು ಬಿಚ್ಚಾಣಿಕೆದಾರರ ಆಚರಣೆ
15apr2ಪರಿಶಿಷ್ಠ ಜಾತಿ ಮತ್ತು ಪರಿಶಿಷ್ಠ ಪಂಗಡಗಳ ನೂಲು ಬಿಚ್ಚಾಣಿಕೆದಾರರ ಕೈಗಾರಿಕಾ ಸಹಕಾರ ಸಂಘದ ವತಿಯಿಂದ ಡಾ.ಬಿ.ಆರ್.ಅಂಬೇಡ್ಕರ್ ಅವರ ಜಯಂತ್ಯುತ್ಸವವನ್ನು ಪೂಜಮ್ಮ ದೇವಸ್ಥಾನದ ಬಳಿಯ ಕಚೇರಿಯಲ್ಲಿ ಆಚರಿಸಲಾಯಿತು.
ಪರಿಶಿಷ್ಠ ಜಾತಿ ಮತ್ತು ಪರಿಶಿಷ್ಠ ಪಂಗಡಗಳ ನೂಲು ಬಿಚ್ಚಾಣಿಕೆದಾರರ ಕೈಗಾರಿಕಾ ಸಹಕಾರ ಸಂಘದ ಅಧ್ಯಕ್ಷ ನರಸಿಂಹಪ್ಪ, ಉಪಾಧ್ಯಕ್ಷ ಮುನಿಕೃಷ್ಣಪ್ಪ, ಅಜ್ಜಪ್ಪ, ರೀಲರ್ ಅನ್ವರ್ಸಾಬ್, ಕ.ರ.ವೇ ಅಧ್ಯಕ್ಷ ವೆಂಕಟರೋಣಪ್ಪ ಮತ್ತಿತರರು ಹಾಜರದ್ದರು.

error: Content is protected !!