15.1 C
Sidlaghatta
Monday, December 8, 2025

ಡಿ.ಕೆ.ರವಿ ಸಾವಿನ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ವಿವಿಧ ಸಂಘಟನೆಗಳಿಂದ ಪ್ರತಿಭಟನೆ

- Advertisement -
- Advertisement -

ದಕ್ಷ ಪ್ರಾಮಾಣಿಕ ಅಧಿಕಾರಿ ಡಿ.ಕೆ.ರವಿ ಅವರ ಸಾವಿನ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಆಗ್ರಹಿಸಿ ತಾಲ್ಲೂಕು ವಕೀಲರ ಸಂಘ, ನಾಗರಿಕ ಹಕ್ಕುಗಳ ಸಂರಕ್ಷಣಾ ಸೇವಾ ಸಮಿತಿ ಮತ್ತು ಬಿಜೆಪಿ ಕಾರ್ಯಕರ್ತರು ಗುರುವಾರ ಪ್ರತಿಭಟನೆ ನಡೆಸಿದರು.
ಕೋಲಾರದ ಜಿಲ್ಲಾಧಿಕಾರಿಗಳಾಗಿ ಸಮಾಜದ ಹಿತೈಶಿಯಾಗಿ ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸಿ, ದಕ್ಷ ಅಧಿಕಾರಿಯಾಗಿದ್ದ ಡಿ.ಕೆ.ರವಿ ಅವರ ಸಾವು, ಕೊಲೆಯೋ, ಆತ್ಮಹತ್ಯೆಯೋ ರಾಜ್ಯದ ಜನತೆಗೆ ತಿಳಿಯಬೇಕು. ಈ ಪ್ರಕರಣವನ್ನು ಸಿಬಿಐಗೆ ವಹಿಸಿ ಶೀಘ್ರ ತನಿಖೆ ನಡೆಸಿ ಅಪರಾಧಿಗಳನ್ನು ಶಿಕ್ಷಿಸಬೇಕೆಂದು ಆಗ್ರಹಿಸಿದರು.
ತಾಲ್ಲೂಕು ವಕೀಲರ ಸಂಘದ ಸದಸ್ಯರು ನ್ಯಾಯಾಂಗ ಕಲಾಪವನ್ನು ಬಹಿಷ್ಕರಿಸಿ ಮೆರವಣಿಗೆ ನಡೆಸಿ ತಹಶೀಲ್ದಾರ್ ಜಿ.ಎ.ನಾರಾಯಣಸ್ವಾಮಿ ಅವರಿಗೆ ಮನವಿಯನ್ನು ಸಲ್ಲಿಸಿದರು. ನಾಗರಿಕ ಹಕ್ಕುಗಳ ಸಂರಕ್ಷಣಾ ಸೇವಾ ಸಮಿತಿ ಸದಸ್ಯರು ನಗರದ ಪ್ರಮುಖ ಬೀದಿಗಳಲ್ಲಿ ಘೋಷಣೆ ಕೂಗುತ್ತಾ ಪ್ರತಿಭಟನಾ ಮೆರವಣಿಗೆ ನಡೆಸಿದರು. ಬಿಜೆಪಿ ಕಾರ್ಯಕರ್ತರು ಬಸ್ನಿಲ್ದಾಣದ ಬಳಿ ಮಾನವ ಸರಪಳಿ ನಿರ್ಮಿಸಿ ಡಿ.ಕೆ.ರವಿ ಅವರ ಸಾವಿನ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಆಗ್ರಹಿಸಿ ಪ್ರತಿಭಟಿಸಿದರು.
ತಾಲ್ಲೂಕು ವಕೀಲರ ಸಂಘದ ಅಧ್ಯಕ್ಷ ಎಂ.ಪಾಪಿರೆಡ್ಡಿ, ವಕೀಲರಾದ ಬೈರಾರೆಡ್ಡಿ, ಸುಬ್ರಮಣಿ, ಲೋಕೇಶ್, ಮಂಜುಕಿರಣ್, ಬಿಜೆಪಿ ಪಕ್ಷದ ಸುರೇಂದ್ರಗೌಡ, ಮುನಿರಾಜು, ಶಿವಕುಮಾರಗೌಡ, ಸೋಮನಾಥ್, ಮಂಜುನಾಥ, ರವಿ, ನಂದೀಶ, ದಾಮೋದರ, ರತ್ನಮ್ಮ, ಸುಜಾತಮ್ಮ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.

For Daily Updates

WhatsApp 'HI' to 7406303366

Subscribe to ನಮ್ಮ ಶಿಡ್ಲಘಟ್ಟ Newspaper

Launching Soon! Register for your Free Newspaper Copy Today.

- Advertisement -

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!