24.1 C
Sidlaghatta
Friday, March 29, 2024

ಡಿ.ದೇವರಾಜ ಅರಸು ಅವರು ಅತ್ಯುತ್ತಮ ಕೆಲಸಗಳ ಮೂಲಕ ಜನರ ಮನದಲ್ಲಿ ಚಿರಾಯುವಾಗಿದ್ದಾರೆ

- Advertisement -
- Advertisement -

ಡಿ.ದೇವರಾಜ ಅರಸು ಅವರು ಒಬ್ಬ ದೂರದೃಷ್ಠಿಯುಳ್ಳ ರಾಜಕಾರಣಿಯಾಗಿದ್ದರು. ಉಳುವವರಿಗೆ ಭೂಮಿ, ಜೀತ ಪದ್ಧತಿ ನಿರ್ಮೂಲನೆ, ಮಲ ಹೊರುವ ಪದ್ಧತಿ ನಿಷೇಧ, ಮತ್ತಿತರ ಅತ್ಯುತ್ತಮ ಕೆಲಸಗಳ ಮೂಲಕ ಕನ್ನಡ ನಾಡಿನ ಜನರ ಮನದಲ್ಲಿ ಚಿರಾಯುವಾಗಿದ್ದಾರೆ ಎಂದು ಶಾಸಕ ಎಂ.ರಾಜಣ್ಣ ತಿಳಿಸಿದರು.
ತಾಲ್ಲೂಕು ಕಛೇರಿಯ ಸಭಾಂಗಣದಲ್ಲಿ ಶನಿವಾರ ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯತ್ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಂಯುಕ್ತಾಶ್ರಯದಲ್ಲಿ ನಡೆದ ದಿವಂಗತ ಡಿ.ದೇವರಾಜ ಅರಸು ಅವರ 101ನೇ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ದೇವರಾಜ ಅರಸುರವರ ಜೀವನ ಆದರ್ಶಗಳು ಅನುಕರಣೀಯ. ಅವರು ಬಡವರು, ಹಿಂದುಳಿದ ವರ್ಗದವರು, ದೀನ ದಲಿತರ ಏಳಿಗೆಗಾಗಿ ಶ್ರಮಿಸಿದ ಮಹಾನ್ ನಾಯಕ. ಭೂ ಸುಧಾರಣಾ ಕಾಯ್ದೆ ಮೂಲಕ ಲಕ್ಷಾಂತರ ಕುಟುಂಬಗಳ ಭವಿಷ್ಯ ಬೆಳಗಿದವರು ಎಂದು ಬಣ್ಣಿಸಿದರು.
ತಾಲ್ಲೂಕು ಪಂಚಾಯತಿ ಕಾರ್ಯನಿರ್ವಾಹಣಾಧಿಕಾರಿ ಎಂ. ವೆಂಕಟೇಶ್ ಮಾತನಾಡಿ, ಅರಸು ಅವರು ಈ ದೇಶ ಕಂಡ ಧೀಮಂತ ನಾಯಕರಲ್ಲಿ ಒಬ್ಬರು. ಉಳುವವನೆ ಭೂಮಿಯ ಒಡೆಯನಾಗುವಂತೆ ಮಾಡುವ ಮಹತ್ವದ ಭೂ-ಸುಧಾರಣೆ ಕಾಯ್ದೆಯನ್ನು ಜಾರಿಗೊಳಿಸುವ ಮೂಲಕ ಬಡವರ ಪಾಲಿಗೆ ಆಶಾಕಿರಣವಾದವರು ಎಂದು ಹೇಳಿದರು.
ಅವರ ವ್ಯಕ್ತಿತ್ವದಿಂದಾಗಿ ಅವರು ಅಸ್ತಂಗತರಾದ ಅನೇಕ ವರ್ಷಗಳ ನಂತರವೂ ಅರಸು ಅವರನ್ನು ಇಷ್ಟೊಂದು ಗೌರವಪೂರ್ವಕವಾಗಿ ನೆನಪಿಸಿಕೊಳ್ಳಲಾಗುತ್ತಿದೆ. ರಾಜ್ಯಕ್ಕೆ ಕರ್ನಾಟಕ ಎಂದು ಮರು ನಾಮಕರಣ ಮಾಡಿದ್ದು, ಹಾವನೂರು ಆಯೋಗ ರಚನೆ ಮೂಲಕ ಹಿಂದುಳಿದ ವರ್ಗಕ್ಕೆ ಮೀಸಲಾತಿ ಸೌಕರ್ಯ ಕಲ್ಪಿಸಿದ್ದು. ಜೀತ ವಿಮುಕ್ತಿ, ಮಲ ಹೊರುವ ನಿಷೇಧದ ಮೂಲಕ ಸಫಾಯಿ ಕರ್ಮಚಾರಿ ಆಯೋಗ ರಚನೆಗೆ ಕಾರಣರಾಗಿದ್ದು, ವಿಧವಾ ವೇತನ, ವೃದ್ಧಾಪ್ಯ ವೇತನ ಜಾರಿ, ಸಾವಿರಾರು ಬ್ಯಾಕ್ ಲಾಗ್ ಹುದ್ದೆಗಳ ಭರ್ತಿ,ಅನುದಾನಿತ ಶಾಲಾ ಶಿಕ್ಷಕರಿಗೂ ಸಮಾನ ವೇತನ ಸೌಲಭ್ಯ ಮತ್ತ್ತಿತರ ಅತ್ಯುತ್ತಮ ಕೆಲಸಗಳನ್ನು ಅರಸು ಅವರು ಮಾಡಿಹೋಗಿದ್ದಾರೆ ಎಂದು ವಿವರಿಸಿದರು.
ಈ ಸಂದರ್ಭದಲ್ಲಿ ಬಿ.ಸಿ.ಎಂ ವಸತಿನಿಲಯದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಲ್ಲಿ ಹೆಚ್ಚು ಅಂಕಗಳನ್ನು ಗಳಿಸಿರುವ ವಿದ್ಯಾರ್ಥಿಗಳನ್ನು ಪುರಸ್ಕಾರ ಮಾಡಲಾಯಿತು.
ಜಿಲ್ಲಾ ಪಂಚಾಯತಿ ಉಪಾಧ್ಯಕ್ಷೆ ನಿರ್ಮಲಾಮುನಿರಾಜು, ಜಿಲ್ಲಾ ಪಂಚಾಯತಿ ಸದಸ್ಯರಾದ ಬಂಕ್ ಮುನಿಯಪ್ಪ, ತನುಜಾರಘು, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಮುನಿಕೃಷ್ಣಪ್ಪ, ಗ್ರೇಡ್ ೨ ತಹಶೀಲ್ದಾರ್ ವಾಸುದೇವಮೂರ್ತಿ, ತಾಲ್ಲೂಕು ಪಂಚಾಯತಿ ಉಪಾಧ್ಯಕ್ಷ ಎಚ್,ನರಸಿಂಹಯ್ಯ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಮುನಿಕೃಷ್ಣಪ್ಪ, ಬಿ.ಸಿ.ಎಂ.ಇಲಾಖಾಧಿಕಾರಿ ಶಂಕರ್, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎನ್.ಕೆ.ಗುರುರಾಜ್ರಾವ್ ಮತ್ತಿತರರು ಹಾಜರಿದ್ದರು.

Subscribe to ನಮ್ಮ ಶಿಡ್ಲಘಟ್ಟ Newspaper

Launching Soon! Register for your Free Newspaper Copy Today.

- Advertisement -

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
This site is protected by reCAPTCHA and the Google Privacy Policy and Terms of Service apply.

The reCAPTCHA verification period has expired. Please reload the page.
Captcha verification failed!
CAPTCHA user score failed. Please contact us!
error: Content is protected !!