35.1 C
Sidlaghatta
Friday, March 29, 2024

ತಲಕಾಯಲಬೆಟ್ಟ ಅಭಿವೃದ್ಧಿಪಡಿಸಿ

- Advertisement -
- Advertisement -

ಜಿಲ್ಲೆಯ ಪವಿತ್ರ ಯಾತ್ರಾ ಸ್ಥಳವಾಗಿರುವ ತಲಕಾಯಲಬೆಟ್ಟದ ಅಭಿವೃದ್ಧಿಗಾಗಿ ಗ್ರಾಮ ಪಂಚಾಯತಿಯ ಸದಸ್ಯರು ಪಕ್ಷಭೇದ ಮರೆತು ಶ್ರಮಿಸಬೇಕೆಂದು ಕೆಪಿಸಿಸಿ ಉಪಾಧ್ಯಕ್ಷ ವಿ.ಮುನಿಯಪ್ಪ ತಿಳಿಸಿದರು.
ತಾಲ್ಲೂಕಿನ ತಲಕಾಯಲಬೆಟ್ಟ ಗ್ರಾಮ ಪಂಚಾಯತಿಯ ಕಾರ್ಯಾಲಯವನ್ನು ಶನಿವಾರ ಉದ್ಘಾಟಿಸಿ ಅವರು ಮಾತನಾಡಿದರು. ಹಿಂದುಳಿದ ತಲಕಾಯಲಬೆಟ್ಟದ ಗ್ರಾಮ ಪಂಚಾಯತಿ ಅಭಿವೃದ್ಧಿಗೆ ಸರ್ಕಾರದಿಂದ ದೊರೆಯಬೇಕಾದ ಎಲ್ಲ ಸೌಲಭ್ಯಗಳನ್ನು ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ನರೇಗಾ ಯೋಜನೆಯಡಿ ಗ್ರಾಮೀಣ ಪ್ರದೇಶದಲ್ಲಿ ಮೂಲಭೂತ ಸೌಲಭ್ಯಗಳಾದ ಕುಡಿಯುವ ನೀರು ಪೂರೈಕೆ, ರಸ್ತೆ ಹಾಗೂ ಚರಂಡಿಗಳನ್ನು ನಿರ್ಮಿಸಲು ಆದ್ಯತೆ ನೀಡಿ. ಗ್ರಾಮಸ್ಥರ ಆರೋಗ್ಯವನ್ನು ಸಂರಕ್ಷಣೆ ಮಾಡುವ ಸಲುವಾಗಿ ನೈರ್ಮಲ್ಯ ಕಾಪಾಡಿಕೊಳ್ಳಬೇಕೆಂದು ಹೇಳಿದರು.
ಜಿಲ್ಲಾ ಪಂಚಾಯತಿ ಮಾಜಿ ಸದಸ್ಯ ಎನ್.ಮುನಿಯಪ್ಪ, ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ಗೋಪಾಲ್,ಉಪಾಧ್ಯಕ್ಷ ರವಿ, ತಲಕಾಯಲಬೆಟ್ಟ ಗ್ರಾಮ ಪಂಚಾಯತಿಯ ಅಧ್ಯಕ್ಷ ಶ್ರೀನಿವಾಸ್ರೆಡ್ಡಿ, ಉಪಾಧ್ಯಕ್ಷೆ ಗಾಯಿತ್ರಿ, ಗ್ರಾಮ ಪಂಚಾಯಿತಿಯ ಸದಸ್ಯರಾದ ಮಹಬೂಬ್ ಸಾಬಿ, ಗಂಗಪ್ಪ, ನಾರಾಯಣಪ್ಪ, ರಾಘವೇಂದ್ರ, ಅಶ್ವತ್ಥರೆಡ್ಡಿ, ಗೋಪಾಲ್ಕೃಷ್ಣ, ರಮೇಶ್, ವೆಂಕಟರೆಡ್ಡಿ, ನಾರಾಯಣಸ್ವಾಮಿ, ದೇವರಾಜ್ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.

Subscribe to ನಮ್ಮ ಶಿಡ್ಲಘಟ್ಟ Newspaper

Launching Soon! Register for your Free Newspaper Copy Today.

- Advertisement -

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
This site is protected by reCAPTCHA and the Google Privacy Policy and Terms of Service apply.

The reCAPTCHA verification period has expired. Please reload the page.
Captcha verification failed!
CAPTCHA user score failed. Please contact us!
error: Content is protected !!