ತಾಲ್ಲೂಕಿನ ಕುಂದಲಗುರ್ಕಿ ಗ್ರಾಮದಲ್ಲಿ ಶನಿವಾರ ಬಯಲಾಂಜನೇಯಸ್ವಾಮಿ ದೇವಾಲಯದಲ್ಲಿ ದೀಪೋತ್ಸವ ಮತ್ತು ಅನ್ನಸಂತರ್ಪಣೆಯನ್ನು ಆಯೋಜಿಸಲಾಗಿತ್ತು.
ಸತ್ತಮುತ್ತಲಿನ ಗ್ರಾಮಗಳಿಂದ ಮಹಿಳೆಯರು ತಂಬಿಟ್ಟು ದೀಪಗಳನ್ನು ಮೆರವಣಿಗೆಯಲ್ಲಿ ತಂದು ದೇವರಿಗೆ ಬೆಳಗಿದರು. ದೇವರಿಗೆ ಬೆಳಿಗ್ಗೆಯಿಂದ ವಿಶೇಷ ಪೂಜೆಯನ್ನು ಆಯೋಜಿಸಲಾಗಿತ್ತು.
ವಿವಿಧ ಗ್ರಾಮಗಳಿಂದ ಆಗಮಿಸಿದ್ದ ನೂರಾರು ಮಂದಿ ಭಕ್ತರಿಗೆ ಅನ್ನಸಂತರ್ಪಣೆಯನ್ನು ಆಯೋಜಿಸಲಾಗಿತ್ತು.
ಪೂಜಾ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಶಾಸಕ ಎಂ.ರಾಜಣ್ಣ ಮಾತನಾಡಿ, ‘ಈ ಪುರಾತನ ದೇವಾಲಯಕ್ಕೆ ಆಗಮಿಸಲು ಇತ್ತೀಚೆಗಷ್ಟೆ ನರೇಗಾ ಯೋಜನೆಯಲ್ಲಿ ರಸ್ತೆಯನ್ನು ಮಾಡಲಾಗಿದೆ. ಮುಂದಿನ ದಿನಗಳಲ್ಲಿ ದೇವಾಲಯದ ಅಭಿವೃದ್ಧಿಯನ್ನು ಮಾಡಲಾಗುವುದು. ಮಳೆ ಬೆಳೆ ಚೆನ್ನಾಗಿ ಆಗಲೆಂದು ಮಹಿಳೆಯರು ದೀಪೋತ್ಸವ ನಡೆಸಿದ್ದಾರೆ. ಪ್ರಕೃತಿಯ ನೆರವಿದ್ದಾಗ ಮಾತ್ರ ರೈತರು ಉತ್ತಮ ಬೆಳೆಯಲು ಸಾಧ್ಯ‘ ಎಂದು ಹೇಳಿದರು.
ಜಿಲ್ಲಾ ಪಂಚಾಯಿತಿ ಸದಸ್ಯೆ ಶಿವಲೀಲಾ ರಾಜಣ್ಣ, ಬಂಕ್ ಮುನಿಯಪ್ಪ, ಕೆ.ಎಂ.ವೆಂಕಟೇಶ್, ಜಿ.ಟಿ.ನಾರಾಯಣಸ್ವಾಮಿ, ಮುನಿಯಪ್ಪ, ನಂಜಪ್ಪ, ನಾರಾಯಣಪ್ಪ, ಆರ್.ವಿ.ನಾಗರಾಜ್, ಕೆ.ಎಸ್.ವೀರಣ್ಣ, ವೆಂಕಟೇಶ್, ಅರುಣ್ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.
- Advertisement -
- Advertisement -
For Daily Updates
WhatsApp 'HI' to 7406303366
- Advertisement -
- Advertisement -