ತಾಲ್ಲೂಕು ಕಚೇರಿಗೆ ಸಾರ್ವಜನಿಕರು ಅಲೆದಾಡಬಾರದು. ತಮ್ಮ ಕಷ್ಟಗಳನ್ನು ಪರಿಹರಿಸಿಕೊಳ್ಳಲು ಬರುವ ಜನರಿಗೆ ಆದಷ್ಟು ಬೇಗ ಪರಿಹಾರೋಪಾಯಗಳನ್ನು ಒದಗಿಸಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ನೂತನ ತಹಶೀಲ್ದಾರ್ ಎಸ್.ಅಜಿತ್ ಕುಮಾರ್ ರೈ ತಿಳಿಸಿದರು.
ನಗರದ ತಾಲ್ಲೂಕು ಕಚೇರಿಯಲ್ಲಿ ನೂತನವಾಗಿ ಅಧಿಕಾರ ವಹಿಸಿಕೊಂಡು ಕಾರ್ಯಾರಂಭ ಆರಂಭಿಸಿರುವ ತಹಶೀಲ್ದಾರ್ ಅವರನ್ನು ಬುಧವಾರ ತಾಲ್ಲೂಕು ಸರ್ಕಾರಿ ನೌಕರರ ಸಂಘದ ಸದಸ್ಯರು ಮತ್ತು ಯೂನಿಟಿ ಸಿಲ್ಸಿಲಾ ಫೌಂಡೇಷನ್ ವತಿಯಿಂದ ಗೌರವ ಸ್ವೀಕರಿಸಿ ಅವರು ಮಾತನಾಡಿದರು.
ತಾಲ್ಲೂಕು ಕಚೇರಿಯಲ್ಲಿ ಕೆಲಸ ವಿಳಂಬವಾಗಬಾರದೆಂದು ತಾಲ್ಲೂಕು ಅಧಿಕಾರಿಗಳ ಸಭೆಯಲ್ಲಿ ತಿಳಿಸಿದ್ದೇನೆ. ನಗರದಲ್ಲಿ ಕಾಡುತ್ತಿರುವ ನೈರ್ಮಲ್ಯೀಕರಣ ಮತ್ತು ಕಸ ವಿಲೇವರಿಯ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ತಾಲ್ಲೂಕು ಕಚೇರಿಯ ಮುಂಭಾಗದಲ್ಲಿ ವಾಹನಗಳ ನಿಲುಗಡೆಯಿಂದಾಗಿ ಆಗುತ್ತಿರುವ ಟ್ರಾಫಿಕ್ ಸಮಸ್ಯೆ ಬಗೆ ಹರಿಸಲು ಪೊಲೀಸರಿಗೆ ಹೇಳಿದ್ದೇನೆ. ಮರಳು ಗಣಿಗಾಣಿಕೆ ಸೇರಿದಂತೆ ತಾಲ್ಲೂಕಿನ ವಿವಿಧ ಸಮಸ್ಯೆಗಳನ್ನು ಪರಿಹರಿಸಲು ಶ್ರಮಿಸುವುದಾಗಿ ತಿಳಿಸಿದರು.
ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಕೇಶವಮೂರ್ತಿ, ಕಾರ್ಯದರ್ಶಿ ಅಕ್ಕಲರೆಡ್ಡಿ, ಮಾಜಿ ಅಧ್ಯಕ್ಷ ಗುರುರಾಜರಾವ್, ಯೂನಿಟಿ ನಿಲ್ಸಿಲಾ ಫೌಂಡೇಷನ್ನ ಮಹಮ್ಮದ್ ಅಸದ್, ಅಕ್ರಮ್, ಇಮ್ತಿಯಾಜ್ಪಾಷ ಮತ್ತಿತರರು ಹಾಜರಿದ್ದರು.
- Advertisement -
- Advertisement -
- Advertisement -
- Advertisement -