ದಾಸ ಸಾಹಿತ್ಯ ಪರಿಷತ್ತು ಮತ್ತು ಶ್ರೀ ಯೋಗಿ ನಾರೇಯಣ ಮಠದದ ಸಂಯುಕ್ತ ಆಶ್ರಯದಲ್ಲಿ ಶಿಡ್ಲಘಟ್ಟ ತಾಲ್ಲೂಕು ದಾಸ ಸಾಹಿತ್ಯ ಪರಿಷತ್ತಿನ ನಗರ ಘಟಕ, ಮಹಿಳಾ ಘಟಕ, ಪ್ರಚಾರ ಘಟಕ ಹಾಗೂ ಹೋಬಳಿ ಘಟಕಗಳ ಉದ್ಟಾಟನಾ ಕಾರ್ಯಕ್ರಮವನ್ನು ನಗರದ ಅಶೋಕ ರಸ್ತೆಯ ವೇಣುಗೋಪಾಲಸ್ವಾಮಿ ದೇವಾಲಯದಲ್ಲಿ -ಶನಿವಾರ ನಡೆಯಲಿದೆ ಎಂದು ಜಿಲ್ಲಾ ದಾಸ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಯರಮರೆಡ್ಡಿಹಳ್ಳಿ ವೆಂಕಟರವಣಪ್ಪ ತಿಳಿಸಿದ್ದಾರೆ.
ಕಾರ್ಯಕ್ರಮದ ಉದ್ಘಾಟನೆಯನ್ನು ಕೈವಾರ ಕ್ಷೇತ್ರದ ಧರ್ಮಾಧಿಕಾರಿಗಳಾದ ಡಾ.ಎಂ.ಆರ್.ಜಯರಾಮ್ ಅವರು ನೆರವೇರಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕೈವಾರ ಶ್ರೀ ಯೋಗಿನಾರೇಯಣ ಮಠದ ಉಪಾಧ್ಯಕ್ಷ ಜೆ.ವಿಭಾಕರರೆಡ್ಡಿ, ಕರ್ನಾಟಕ ಸಂಗೀತ ಮತ್ತು ನೃತ್ಯ ಅಕಾಡೆಮಿ ಸದಸ್ಯ ಬಾಲಕೃಷ್ಣ ಭಾಗವತರ್ ಭಾಗವಹಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಿಡ್ಲಘಟ್ಟ ತಾಲ್ಲೂಕು ಗೌರವಾಧ್ಯಕ್ಷ ಡಾ.ಡಿ.ಟಿ.ಸತ್ಯನಾರಾಯಣರಾವ್ ಅವರು ವಹಿಸಲಿದ್ದಾರೆ.
- Advertisement -
- Advertisement -
- Advertisement -