Home News ತಾಲ್ಲೂಕು ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಕ್ರೀಡಾಕೂಟ

ತಾಲ್ಲೂಕು ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಕ್ರೀಡಾಕೂಟ

0

ನಗರದ ನೆಹರೂ ಕ್ರೀಡಾಂಗಣದಲ್ಲಿ ಶುಕ್ರವಾರ ೨೦೧೯ – ೨೦ನೇ ಸಾಲಿನ ತಾಲ್ಲೂಕು ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಕ್ರೀಡಾಕೂಟವನ್ನು ಉದ್ಘಾಟಿಸಿ ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ಶ್ರೀನಿವಾಸ್ ಮಾತನಾಡಿದರು.
ದೈಹಿಕ ಮತ್ತು ಮಾನಸಿಕ ನೆಮ್ಮದಿಗೆ ಕ್ರೀಡೆ ಅವಶ್ಯಕ. ಕೇವಲ ಬಹುಮಾನ ಗೆಲ್ಲಲು ಅಲ್ಲ, ಕ್ರೀಡಾ ಮನೋಭಾವ ಮೂಡಿಸಲು ಈ ಕ್ರೀಡಾಕೂಟ ನಡೆಸಲಾಗುತ್ತಿದೆ ಎಂದು ಅವರು ತಿಳಿಸಿದರು.
ಮನುಷ್ಯನ ಜೀವನದಲ್ಲಿ ದೈಹಿಕ ಆರೋಗ್ಯ ಮುಖ್ಯ. ದೈಹಿಕವಾಗಿ ಆರೋಗ್ಯವಂತನಾದ ವ್ಯಕ್ತಿ ಜೀವನದಲ್ಲಿ ಯಾವುದೇ ಗುರಿ ಸಾಧಿಸಬಲ್ಲ. ಇದಕ್ಕೆ ಮುಖ್ಯವಾಗಿ ಕ್ರೀಡೆ, ವ್ಯಾಯಾಮ, ಯೋಗ ಪ್ರಮುಖ ಪಾತ್ರ ವಹಿಸುತ್ತದೆ ಎಂದರು.
ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ವತಿಯಿಂದ ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ಶ್ರೀನಿವಾಸ್, ಶಿಕ್ಷಣ ಸಂಯೋಜಕ ಭಾಸ್ಕರ್ ಗೌಡ, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಆಂಜನೇಯ, ಬಿ.ಆರ್.ಸಿ ಸಮನ್ವಯಾಧಿಕಾರಿ ತ್ಯಾಗರಾಜು, ಸರ್ಕಾರಿ ನೌಕರರ ಸಂಘದ ತಾಲ್ಲೂಕು ಅಧ್ಯಕ್ಷ ಸುಬ್ಬಾರೆಡ್ಡಿ, ನಿವೃತ್ತ ದೈಹಿಕ ಶಿಕ್ಷಕರಾದ ಶ್ರೀನಿವಾಸ್, ಅಶ್ವತ್ಥನಾರಾಯಣ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಸಿ.ಎಂ.ಮುನಿರಾಜು, ತಾಲ್ಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಎಚ್.ಪುಟ್ಟಪ್ಪ, ಶಿಕ್ಷಕ ಎಚ್.ವೆಂಕಟೇಶ್ ಅವರನ್ನು ಸನ್ಮಾನಿಸಲಾಯಿತು.
ತಾಲ್ಲೂಕಿನ ವಿವಿಧ ಶಾಲೆಗಳ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ವಿದ್ಯಾರ್ಥಿಗಳು ಕ್ರೀಡಾಕೂಟದಲ್ಲಿ ಉತ್ಸಾಹದಿಂದ ಭಾಗವಹಿಸಿದ್ದರು.
ದೈಹಿಕ ಶಿಕ್ಷಣ ಪರಿವೀಕ್ಷಕ ಎಚ್.ಎಂ.ರಂಗನಾಥ್, ಅಗಜಾನನಮೂರ್ತಿ ಹಾಜರಿದ್ದರು.

error: Content is protected !!