ತೊಟ್ಲಗಾನಹಳ್ಳಿ ಗ್ರಾಮದಲ್ಲಿ ನಡೆದ ಟೆನ್ನಿಸ್‌ ಬಾಲ್‌ ಕ್ರಿಕೆಟ್‌ ಟೂರ್‍ನಮೆಂಟ್‌ ನಲ್ಲಿ ವಿಜೇತರಾದ ಎಚ್‌.ಕ್ರಾಸ್‌ ತಂಡ

- Advertisement -
- Advertisement -

ತಾಲ್ಲೂಕಿನ ಭಕ್ತರಹಳ್ಳಿ ಗ್ರಾಮ ಪಂಚಾಯಿತಿಯ ತೊಟ್ಲಗಾನಹಳ್ಳಿ ಗ್ರಾಮದಲ್ಲಿ ಡಾ.ರಾಜ್‌ಕುಮಾರ್‌ ಅಭಿಮಾನಿಗಳ ಸಂಘದ ವತಿಯಿಂದ ಅದೇ ಗ್ರಾಮದ ಶಾಲಾ ಶಿಕ್ಷಕರಾಗಿದ್ದ ಮೇಲೂರಿನ ದಿ.ಧರ್ಮಪ್ರಕಾಶ್‌ ಅವರ ಜ್ಞಾಪಕಾರ್ಥ ಟೆನ್ನಿಸ್‌ ಬಾಲ್‌ ಕ್ರಿಕೆಟ್‌ ಟೂರ್‍ನಮೆಂಟ್‌ ಮೂರು ದಿನಗಳ ಕಾಲ ಆಯೋಜಿಸಲಾಗಿತ್ತು.
ಸೋಮವಾರ ಮುಕ್ತಾಯಗೊಂಡ ಕ್ರಿಕೆಟ್‌ ಟೂರ್‍ನಮೆಂಟ್‌ನಲ್ಲಿ ಪ್ರಥಮ ಬಹುಮಾನ 10 ಸಾವಿರ ರೂಪಾಯಿ ಮತ್ತು ಟ್ರೋಫಿಯನ್ನು ಎಚ್‌.ಕ್ರಾಸ್‌ ತಂಡ ಪಡೆದುಕೊಂಡಿತು. ದ್ವಿತೀಯ ಬಹುಮಾನ 5 ಸಾವಿರ ರೂಪಾಯಿ ಮತ್ತು ಟ್ರೋಫಿಯನ್ನು ತೊಟ್ಲಗಾನಹಳ್ಳಿ ಗ್ರಾಮದ ಡಾ.ರಾಜ್‌ಕುಮಾರ್‌ ತಂಡ ಪಡೆಯಿತು.
ಬಹುಮಾನ ವಿತರಣಾ ಸಮಾರಂಭದಲ್ಲಿ ಭಕ್ತರಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಗೋಪಾಲಗೌಡ, ಲೋಕೇಶ್‌ ಗೌಡ, ಮಂಜುನಾಥ್‌, ರಮೇಶ್‌, ಕನಕರಾಜು, ಮುನಿರಾಜು ಮತ್ತಿತರರು ಹಾಜರಿದ್ದರು.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!