ದಲಿತ ಸಂಘರ್ಷ ಸಮಿತಿಯ ಸದಸ್ಯರ ಧರಣಿ

- Advertisement -
- Advertisement -

ಪಟ್ಟಣದ ತಾಲ್ಲೂಕು ಕಚೇರಿಯ ಮುಂದೆ ಸೋಮವಾರ ದಲಿತರ ವಿವಿಧ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ದಲಿತ ಸಂಘರ್ಷ ಸಮಿತಿಯ ಸದಸ್ಯರು ಧರಣಿಯನ್ನು ನಡೆಸಿದರು.
ತಾಲ್ಲೂಕಿನಾದ್ಯಂತ ಎಲ್ಲಾ ಅರ್ಹ ಫಲಾನುಭವಿಗಳಿಗೆ ಪಡಿತರ ಚೀಟಿ ವಿತರಿಸಬೇಕು. ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯಲ್ಲಿ ನಡೆಯುತ್ತಿರುವ ಅಕ್ರಮಗಳನ್ನು ತಡೆಯಬೇಕು. ತಾಲ್ಲೂಕಿನಾದ್ಯಂತ ಎಲ್ಲಾ ದಲಿತರ ಸ್ಮಶಾನಗಳನ್ನು ಗುರುತಿಸಿ ಬೇಲಿ ನಿರ್ಮಿಸಿಕೊಡಬೇಕು. ತಾಲ್ಲೂಕಿನಾದ್ಯಂತ ನಡೆಯುತ್ತಿರುವ ಅಕ್ರಮ ಮದ್ಯ ಮಾರಾಟ ಮತ್ತು ಮರಳು ಮಾಫಿಯಾವನ್ನು ನಿಯಂತ್ರಿಸಬೇಕು. ದಲಿತರ ಮೇಲೆ ನಡೆಯುತ್ತಿರುವ ದೌರ್ಜನ್ಯವನ್ನು ತಡೆಯಬೇಕು, ಮುಂತಾದ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಈ ಸಂದರ್ಭದಲ್ಲಿ ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ದಲಿತ ಸಂಘರ್ಷ ಸಮಿತಿಯ ಮುಖಂಡ ಮುನಯ್ಯ,‘ಸುಮಾರು ವರ್ಷಗಳಿಂದಲೂ ದಲಿತರ ನ್ಯಾಯಬದ್ಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಹಲವಾರು ರೀತಿಯ ಹೋರಾಟ, ಪ್ರತಿಭಟನೆ, ಧರಣಿ ಕಾರ್ಯಕ್ರಮಗಳನ್ನು ಮಾಡುತ್ತಿದ್ದರೂ ಸಂಬಂಧಪಟ್ಟ ಅಧಿಕಾರಿಗಳು ಸ್ಪಂದಿಸುತ್ತಿಲ್ಲ. ಇಂದಲ್ಲ ನಾಳೆ ನ್ಯಾಯ ಸಿಗಬಹುದು ಎಂಬ ಆಶಾಭಾವದಿಂದ ಹೋರಾಟಗಳನ್ನು ಮಾಡಿಕೊಂಡು ಬರುತ್ತಿದ್ದೇವೆ. ತಹಶೀಲ್ದಾರರು ದಲಿತರ ನ್ಯಾಯಬದ್ಧ ಹಾಗೂ ಕಾನೂನುಬದ್ಧ ಬೇಡಿಕೆಗಳನ್ನು ಈಡೇರಿಸುವಲ್ಲಿ ಸಂಪೂರ್ಣ ವಿಫಲರಾಗಿದ್ದಾರೆ’ ಎಂದು ಆರೋಪಿಸಿದರು.
ದಲಿತ ಸಂಘರ್ಷ ಸಮಿತಿಯ ತಾಲ್ಲೂಕು ಸಂಚಾಲಕ ಎನ್.ಎ.ವೆಂಕಟೇಶ್, ಸಂಘಟನಾ ಸಂಚಾಲಕ ಟಿ.ಎ.ಚಲಪತಿ, ಸಿ.ಎಂ.ಲಕ್ಷ್ಮೀನಾರಾಯಣ, ವೆಂಕಟೇಶ್, ನರಸಿಂಹಪ್ಪ, ಮಟ್ಟಿನಾರಾಯಣಸ್ವಾಮಿಡಿ. ಎಂ.ವೆಂಕಟೇಶ್, ಲಕ್ಕೇನಹಳ್ಳಿ ವೆಮಕಟೇಶ್, ಲಕ್ಷ್ಮಣ್ ಮತ್ತಿತರರು ಧರಣಿಯಲ್ಲಿ ಪಾಲ್ಗೊಂಡಿದ್ದರು.

Sidlaghatta News Desk
Sidlaghatta News Deskhttp://www.sidlaghatta.com
The editorial desk of Sidlaghatta.com (Namma Shidlaghatta), covering civic affairs, agriculture, silk trade, and local government news for Sidlaghatta taluk, Karnataka.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!