ದಶಮಾನೋತ್ಸವ ಕಾರ್ಯಕ್ರಮಗಳನ್ನು ಅದ್ದೂರಿಯಾಗಿ ಆಚರಿಸಲಾಗುವುದು

- Advertisement -
- Advertisement -

ಜಿಲ್ಲೆಯ ದಶಮಾನೋತ್ಸವ ಕಾರ್ಯಕ್ರಮ ಹಾಗೂ ವಿವಿಧ ಜಯಂತ್ಯುತ್ಸವ ಕಾರ್ಯಕ್ರಮಗಳಲ್ಲಿ ಎಲ್ಲಾ ಇಲಾಖೆಗಳ ಅಧಿಕಾರಿಗಳು ಹಾಜರಿರಬೇಕೆಂದು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಣಾಧಿಕಾರಿ ವೆಂಕಟೇಶ್ ತಿಳಿಸಿದರು.
ನಗರದ ತಾಲ್ಲೂಕು ಸಭಾಂಗಣದಲ್ಲಿ ಶಿವಯೋಗಿ ಸಿದ್ಧರಾಮೇಶ್ವರ ಜಯಂತಿ, ಮಹಾಯೋಗಿ ವೇಮನ ಜಯಂತಿ, ನಿಜಶರಣ ಅಂಬಿಗರ ಚೌಡಯ್ಯ ಜಯಂತಿ, ತಾಲ್ಲೂಕಿನಲ್ಲಿ ನಡೆಯಲಿರುವ ಜಿಲ್ಲಾ ದಶಮಾನೋತ್ಸವ ಸಂಭ್ರಮ ಆಚರಣೆ ಹಾಗೂ ಗಣರಾಜೋತ್ಸವ ದಿನಾಚರಣೆಗಳ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.
ದಶಮಾನೋತ್ಸವ ಕಾರ್ಯಕ್ರಮಗಳನ್ನು ಅದ್ದೂರಿಯಾಗಿ ಆಚರಣೆ ಮಾಡಲು ಜಿಲ್ಲಾಡಳಿತದಿಂದ ಆದೇಶ ಬಂದಿದ್ದು, ತಾಲ್ಲೂಕಿನ ಸಾದಲಿ ಹೋಬಳಿ, ಜಂಗಮಕೋಟೆ ಹೋಬಳಿ, ಬಶೆಟ್ಟಹಳ್ಳಿ ಹೋಬಳಿ ಮತ್ತು ನಗರದಲ್ಲಿ ಬೇರೆ ಬೇರೆಯಾಗಿ ದಶಮಾನೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮದಲ್ಲಿ ಪುರುಷರಿಗೆ ಮತ್ತು ಮಹಿಳೆಯರಿಗೆ ಗ್ರಾಮೀಣ ಕ್ರೀಡೆಗಳನ್ನು ಹಮ್ಮಿಕೊಂಡಿದ್ದು, ಗೆದ್ದವರಿಗೆ ಪ್ರಶಸ್ತಿ ಪುರಸ್ಕಾರ ಮಾಡಲಾಗುವುದು. ಇಲಾಖಾವಾರು ಅಧಿಕಾರಿಗಳು ತಾವು ವಹಿಸಿಕೊಂಡ ಜಬಾಬ್ದಾರಿಯನ್ನು ತಪ್ಪದೆ ನಿರ್ವಹಿಸಬೇಕೆಂದು ತಿಳಿಸಿದರು.
ದಶಮಾನೋತ್ಸವದ ಪ್ರಯುಕ್ತ ಜನವರಿ 22 ರಂದು ನೆಹರೂ ಕ್ರೀಡಾಂಗಣದಲ್ಲಿ ಕಾರ್ಯಕ್ರಮ ನಡೆಸಲಾಗುವುದು. ವಸ್ತು ಪ್ರದರ್ಶನ, ಅನೇಕ ಸಾಂಸೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಕಾರ್ಯಕ್ರಮಕ್ಕೆ ಸಾವಿರಾರು ಸಂಖ್ಯೆಯಲ್ಲಿ ನಾಗರಿಕರು ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ತಿಳಿಸಿದರು.
ಜನವರಿ ೨೬ರಂದು ನಡೆಯುವ ಗಣರಾಜೋತ್ಸವ ದಿನಾಚರಣೆಗೆ ರೈತ ಸಂಘಟನೆಗಳು, ವಿವಿಧ ಸಂಘಟನೆಗಳ ಪದಾಧಿಕಾರಿಗಳ ಸಲಹೆಗಳನ್ನು ತೆಗೆದುಕೊಂಡು ಕಾರ್ಯಕ್ರದಲ್ಲಿ ಅಳವಡಿಸಲು ಸೂಚಿಸಲಾಯಿತು.
ನಗರದ ತಾಲ್ಲೂಕು ಸಭಾಂಗಣದಲ್ಲಿ ಜನವರಿ ೧೫ ರಂದು ಶಿವಯೋಗಿ ಸಿದ್ದರಾಮೇಶ್ವರ ಜಯಂತಿ, ಜನವರಿ ೧9 ರಂದು ಮಹಾಯೋಗಿ ವೇಮನ ಜಯಂತಿ, ಜನವರಿ ೨೧ ರಂದು ನಿಜಶರಣ ಅಂಬಿಗರ ಚೌಡಯ್ಯ ಜಯಂತಿ ಅಚರಣೆ ಮಾಡಲಾಗುತ್ತಿದ್ದು, ಆಯಾ ಜಯಂತಿಗೆ ಸಂಬಂಧಪಟ್ಟಂತೆ, ಅಯಾ ಜನಾಂಗದ ಮುಖಂಡರ ಸಲಹೆ ಸೂಚನೆಗಳನ್ನು ತೆಗೆದುಕೊಳ್ಳಲಾಯಿತು.
ನಗರಸಭಾ ಆಯುಕ್ತ ಚಲಪತಿ, ಕ್ಷೇತ್ರ ಶಿಕ್ಷಣಾಧಿಕಾರಿ ಚಂದ್ರಶೇಖರ್ ಬಾಬು, ಪ್ರಭಾರಿ ತಹಶೀಲ್ದಾರ್ ಮಮತಾಕುಮಾರಿ, ಗ್ರೇಡ್ ೨ ತಹಶೀಲ್ದಾರ್ ಮುನಿಕೃಷ್ಣಪ್ಪ. ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಕೇಶವರೆಡ್ಡಿ, ರೈತ ಮುಖಂಡರು, ಸಂಘ ಸಂಸ್ಥೆಗಳ ಸದಸ್ಯರು ಮುಖಂಡರು, ಜನಾಂಗದ ಮುಖಂಡರು ಸಭೆಯಲ್ಲಿ ಹಾಜರಿದ್ದರು.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!