ನಗರದ ಕಾಳಿಕಾಂಬ ಕಮಠೇಶ್ವರಸ್ವಾಮಿ ದೇವಾಲಯದಲ್ಲಿ ಭಾನುವಾರ ಶ್ರೀ ಮಾರುತಿ ಸಂಗೀತ ಅಕಾಡೆಮಿ ವತಿಯಿಂದ ಪುರಂದರಸಾಸರು, ತ್ಯಾಗರಾಜ ಸ್ವಾಮಿ, ಕನಕದಾಸರು, ಯೋಗಿ ನಾರೇಯಣ ಯತೀಂದ್ರರು ಹಾಗೂ ವಾಗ್ಗೇಯಕಾರರ ಆರಾಧನ ಸಂಗೀತ ಮಹೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಸಂಗೀತ ಮಹೋತ್ಸವಕ್ಕೆ ವಿವಿಧ ಕಡೆಯಿಂದ ಆಗಮಿಸಿದ್ದ ವಿದ್ವಾಂಸರು ಹಾಗೂ ಮಕ್ಕಳಿಂದ ದಿನಪೂರ್ತಿ ವಿಶೇಷ ಸಂಗೀತ ಗಾಯನಗಳನ್ನು ಹಮ್ಮಿಕೊಳ್ಳಲಾಗಿತ್ತು.
ಮಾರುತಿ ಸಂಗೀತ ಅಕಾಡೆಮಿ ಅಧ್ಯಕ್ಷ ಸೋಮಶೇಖರ್, ಸಂಗೀತ ಶಿಕ್ಷಕಿ ಮಂಜುಳ, ಪಿಟೀಲು ವಿದ್ವಾನ್ ಜಗದೀಶ್ ಕುಮಾರ್, ಮೃದಂಗ ವಾದಕ ಅಶ್ಥಥನಾರಾಯಣಚಾರ್ ಮತ್ತು ಸಂಗೀತ ಕಲಾಭಿಮಾನಿಗಳು ಹಾಜರಿದ್ದರು.