24.1 C
Sidlaghatta
Monday, October 27, 2025

ದಿಬ್ಬೂರಹಳ್ಳಿಯ ವೆಂಕಟೇಶ್ವರ ಪ್ರೌಢಶಾಲೆಯಲ್ಲಿ ಅಪರಾಧ ತಡೆ ಮಾಸಾಚರಣೆ ಕಾರ್ಯಕ್ರಮ

- Advertisement -
- Advertisement -

ಕಾನೂನನ್ನು ಯಾರು ಗೌರವಿಸಿ, ಜೀವನದಲ್ಲಿ ಅಳವಡಿಸಿಕೊಂಡು ಪಾಲಿಸುತ್ತಾರೋ ಅವರು ನೆಮ್ಮದಿಯ ಜೀವನವನ್ನು ನಡೆಸಲು ಸಾಧ್ಯವಾಗುತ್ತದೆ ಎಂದು ಸರ್ಕಲ್ ಇನ್ಸ್ಪೆಕ್ಟರ್ ಬಿ.ಎಲ್.ಶ್ರೀನಿವಾಸಮೂರ್ತಿ ತಿಳಿಸಿದರು.
ತಾಲ್ಲೂಕಿನ ದಿಬ್ಬೂರಹಳ್ಳಿಯ ವೆಂಕಟೇಶ್ವರ ಪ್ರೌಢಶಾಲೆಯಲ್ಲಿ ಈಚೆಗೆ ಪೊಲೀಸ್ ಇಲಾಖೆಯಿಂದ ಹಮ್ಮಿಕೊಂಡಿದ್ದ ಅಪರಾಧ ತಡೆ ಮಾಸಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಕಾನೂನುಗಳನ್ನು ಇನ್ನೊಬ್ಬರ ಒತ್ತಾಯಕ್ಕಾಗಿ ಆಗಲಿ, ಪೊಲೀಸರಿಗೆ ಭಯ ಪಟ್ಟು ಆಗಲಿ ಪಾಲಿಸುವುದಲ್ಲ. ಅದು ನಿಮ್ಮ ನಮ್ಮ ಒಳ್ಳೆಯದಕ್ಕಾಗಿಯೆ ಕಾನೂನುಗಳಿದ್ದು, ಎಲ್ಲರ ಸುರಕ್ಷತೆಗಾಗಿ ಕಾನೂನನ್ನು ಪಾಲಿಸುವುದು ಸೂಕ್ತ ಎಂದರು.
ವಿಜ್ಞಾನ-ತಂತ್ರಜ್ಞಾನ ಬೆಳೆದಿದ್ದು ಶಾಲಾ ಕಾಲೇಜು ಹಂತದ ಮಕ್ಕಳ ಬೆರಳ ತುದಿಯಲ್ಲೇ ಎಲ್ಲ ಮಾಹಿತಿಗಳೂ ಸಿಗುತ್ತಿದ್ದು, ಇದು ತಮ್ಮ ಜ್ಞಾನದ ಬೆಳವಣಿಗೆಗೆ ಎಷ್ಟು ಸಹಕಾರಿಯೋ ಹಾದಿ ತಪ್ಪಲು ಕೂಡ ಅಷ್ಟೇ ಪರಿಣಾಮಕಾರಿಂಯಾಗಿ ಕಾರಣವಾಗುತ್ತಿದೆ. ವಿಜ್ಞಾನ ತಂತ್ರಜ್ಞಾನವನ್ನು ವಿದ್ಯಾರ್ಜನೆಗೆ ಬಳಸಿಕೊಂಡವರು ಸಮಾಜದಲ್ಲಿ ಉನ್ನತ ಮಟ್ಟಕ್ಕೆ ಏರಿದ್ದರೆ ಅದನ್ನು ದುರ್ಬಳಕೆ ಮಾಡಿಕೊಂಡವರು ತಪ್ಪು ಮಾಡಿ ಕಾನೂನಿನ ಕುಣಿಕೆಗೆ ಸಿಲುಕಿ ನಲಗುತ್ತಿದ್ದಾರೆ ಎಂದು ಹೇಳಿದರು.
ಎಲ್ಲಿಯೆ ಆಗಲಿ ಲೈಂಗಿಕ ದೌರ್ಜನ್ಯಗಳು ನಡೆದ ತಕ್ಷಣ ತಮ್ಮ ಹತ್ತಿರದ ಪೊಲೀಸ್ ಠಾಣೆಗೆ ದೂರು ನೀಡುವ ಕೆಲಸ ಮೊದಲು ಮಾಡಿ. ಇದರಿಂದ ಸಂತ್ರಸ್ಥರಿಗೆ ನ್ಯಾಯ ಸಿಗುವುದರ ಜತೆಗೆ ಆರೋಪಿಗಳನ್ನು ಬಂಧಿಸಿ ಕಾನೂನು ಕ್ರಮ ತೆಗೆದುಕೊಳ್ಳಲು ಸಾಧ್ಯವಾಗುತ್ತದೆ ಎಂದರು.
ದಿಬ್ಬೂರಹಳ್ಳಿ ಪೊಲೀಸ್ ಠಾಣೆಯ ಸಬ್ಇನ್ಸ್ಪೆಕ್ಟರ್ ಜಿ.ಕೆ.ರಾಘವೇಂದ್ರ ಮಾತನಾಡಿ, ೧೮ ವರ್ಷದೊಳಗಿನ ಯಾರೇ ಆಗಲಿ ಅಂಗಡಿಗಳಲ್ಲಿ ಬೀಡಿ ಸಿಗರೇಟ್ ಗುಟ್ಕಾದಂತ ವಸ್ತುಗಳನ್ನು ಮಾರಾಟ ಮಾಡುವುದಾಗಲಿ, ಖರೀಸುವುದಾಗಲಿ ಕಾನೂನು ಪ್ರಕಾರ ತಪ್ಪು. ಯಾರೇ ಅಪರಿಚಿತರು ಕರೆದಾಗ ಹೋಗುವುದು, ಅವರೊಂದಿಗೆ ವ್ಯವಹರಿಸುವುದು ತಪ್ಪು. ಎಟಿಎಂ ಬಳಕೆಯನ್ನು ತಿಳಿದುಕೊಳ್ಳುವುದು ಅಗತ್ಯ ಎಂದು ತಿಳಿಸಿದರು.
ಶಾಲೆಯ ಮುಖ್ಯ ಶಿಕ್ಷಕ ಡಿ.ಸಿ.ಗೋಪಿನಾಥ್, ಸಹಶಿಕ್ಷಕರಾದ ಟಿ.ವಿ.ಚಂದ್ರಶೇಖರ್, ಜಯರಾಂ. ತುಳಸಿಮಾತಾ, ಪುಷ್ಪಾವತಿ, ರಾಧ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!