22.1 C
Sidlaghatta
Monday, October 27, 2025

ದಿ.ಡಿ.ಕೆ.ರವಿ ಅವರ ಪುಣ್ಯತಿಥಿ ಅಂಗವಾಗಿ ಶಾಲಾ ಮಕ್ಕಳಿಗೆ ಲೇಖನ ಸಾಮಗ್ರಿ ವಿತರಣೆ

- Advertisement -
- Advertisement -

ಉತ್ತಮ ಶಿಕ್ಷಣ ನೀಡಿದರಷ್ಟೆ ಸಾಲದು ಒಳ್ಳೆಯ ಸಂಸ್ಕಾರವನ್ನೂ ಸಹ ನಮ್ಮ ಮಕ್ಕಳಲ್ಲಿ ಬೆಳೆಸಬೇಕಿದೆ ಎಂದು ಜಿಲ್ಲಾ ಪಂಚಾಯತಿ ಸದಸ್ಯ ಎಸ್.ಎಂ.ನಾರಾಯಣಸ್ವಾಮಿ ತಿಳಿಸಿದರು.
ತಾಲ್ಲೂಕಿನ ಚೀಮಂಗಲ ಗ್ರಾಮದ ಸಂತೆ ಮೈದಾನದಲ್ಲಿ ಈಚೆಗೆ ಸ್ವಾಮಿ ವಿವೇಕಾನಂದ ಅಂಗವಿಕಲರ ಕ್ಷೇಮಾಭಿವೃದ್ದಿ ಸಂಘ ಹಾಗೂ ಚೀಮಂಗಲ ಗ್ರಾಮ ಪಂಚಾಯತಿ ವ್ಯಾಪ್ತಿಯ ಗ್ರಾಮಸ್ಥರ ಆಶ್ರಯದಲ್ಲಿ ದಿ.ಡಿ.ಕೆ.ರವಿ ಅವರ ಪುಣ್ಯತಿಥಿ ಅಂಗವಾಗಿ ಶಾಲಾ ಮಕ್ಕಳಿಗೆ ಪುಸ್ತಕ, ಪರೀಕ್ಷಾ ಸಾಮಗ್ರಿ, ಬಡವರಿಗೆ ವಸ್ತ್ರ ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಎಸ್ಸೆಸ್ಸೆಲ್ಸಿ ಪರೀಕ್ಷೆ ಎದುರಿಸಲಿರುವ ೮೦ ವಿದ್ಯಾರ್ಥಿಗಳಿಗೆ ಲೇಖನಿ ಸಾಮಗ್ರಿಗಳನ್ನು ತಾಲೂಕು ಪಂಚಾಯತಿ ಮಾಜಿ ಸದಸ್ಯ ಜಿ.ಮುನಿರಾಜು ಕೊಡುಗೆಯಾಗಿ ನೀಡಿದರೆ, ೨೦೧೩–-೧೪ನೇ ಸಾಲಿನಲ್ಲಿ ಎಸ್ಸೆಸ್ಸೆಲ್ಸಿಯಲ್ಲಿ ಅತಿ ಹೆಚ್ಚು ಅಂಕಗಳಿಸಿ ಪಂಚಾಯತಿ ವ್ಯಾಪ್ತಿಯ ಮೂವರಿಗೆ ತಲಾ ೧೦೦೦ ರೂ.ನಗದು ಬಹುಮಾನವನ್ನು ಬೆಂಗಳೂರಿನ ನರಸಿಂಹಯ್ಯನವರು ನೀಡಿದರು.
೬ ಮಂದಿ ಬಡವರಿಗೆ ವಸ್ತ್ರಗಳನ್ನು ಹಾಗೂ ಇಬ್ಬರು ಅಂಗವಿಕಲರಿಗೆ ಗಾಲಿಖುರ್ಚಿಗಳನ್ನು ಬೆಂಗಳೂರಿನ ವಿಜಯಕುಮಾರಿರವರು ನೀಡಿದರೆ, ೧೦೦೦ ಮಂದಿಗೆ ಚೀಮಂಗಲ ಗ್ರಾಮಸ್ಥರಿಂದ ಸಮೂಹಿಕ ಅನ್ನಸಂತರ್ಪಣೆಯನ್ನು ನಡೆಸಿಕೊಟ್ಟರು. ಬಸವೇಗೌಡರ ಕುಟುಂಬದವರು ನೆರೆದಿದ್ದ ಎಲ್ಲರಿಗೂ ಪಾನಕ, ಮಜ್ಜಿಗೆ ಹೆಸರು ಬೇಳೆಯ ಸೇವೆಯನ್ನು ಒದಗಿಸಿದರು.
ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಅರಿಕೆರೆ ಮುನಿರಾಜು, ರೈತ ಸಂಘ ಹಾಗೂ ಹಸಿರು ಸೇನೆಯ ಜಿಲ್ಲಾಧ್ಯಕ್ಷ ಭಕ್ತರಹಳ್ಳಿ ಬೈರೇಗೌಡ, ತಾಲ್ಲೂಕು ಅಧ್ಯಕ್ಷ ಮಂಜುನಾಥ್, ಎಸ್.ವಿ.ನಾಗರಾಜ್ರಾವ್, ವಾಣಿಜ್ಯ ಇಲಾಖೆಯ ನರಸಿಂಹಯ್ಯ, ಮುಖ್ಯ ಶಿಕ್ಷಕ ಸಿ.ಎಂ.ಮುನಿರಾಜು, ಶಿವಶಂಕರ್, ಸಮಾಜ ಸೇವಕಿ ಬೆಂಗಳೂರಿನ ವಿಜಯಕುಮಾರಿ, ಸ್ವಾಮಿ ವಿವೇಕಾನಂದ ಅಂಗವಿಕಲರ ಕ್ಷೇಮಾಭಿವೃದ್ದಿ ಸಂಘದ ಲಕ್ಷ್ಮೀನಾರಾಯಣ, ಡಿ.ನಾರಾಯಣಸ್ವಾಮಿ, ಗ್ರಾಮ ಪಂಚಾಯತಿ ಸದಸ್ಯೆ ಶೋಭ, ಸಿ.ಕೆ.ಮಂಜುನಾಥ, ಬಿ.ಮುನಿವೆಂಕಟಪ್ಪ, ಮೋಹನ್, ಆದರ್ಶ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!