33.1 C
Sidlaghatta
Thursday, March 28, 2024

ದೇವರಮಳ್ಳೂರು ಗ್ರಾಮದಲ್ಲಿ ಕೃಷಿ ವಸ್ತು ಪ್ರದರ್ಶನ

- Advertisement -
- Advertisement -

ತಾಲ್ಲೂಕಿನ ದೇವರಮಳ್ಳೂರು ಗ್ರಾಮದಲ್ಲಿ ಸೋಮವಾರ ಚಿಂತಾಮಣಿ ರೇಷ್ಮೆ ಕೃಷಿ ಮಹಾವಿದ್ಯಾಲಯ ಹಾಗೂ ಬೆಂಗಳೂರಿನ ಕೃಷಿ ವಿಶ್ವವಿದ್ಯಾಲಯದ ವತಿಯಿಂದ ಕೃಷಿ ವಸ್ತು ಪ್ರದರ್ಶನವನ್ನು ಏರ್ಪಡಿಸಲಾಗಿತ್ತು.
ರೇಷ್ಮೆ ಕೃಷಿ ಮಹಾವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿರುವ ಅಂತಿಮ ವರ್ಷದ ಬಿ.ಎಸ್ಸಿ(ಕೃಷಿ ಮತ್ತು ರೇಷ್ಮೆ ಕೃಷಿ) ವಿದ್ಯಾರ್ಥಿಗಳಿಂದ ಗ್ರಾಮೀಣ ಕೃಷಿ ಕಾರ್ಯಾನುಭವ ಕಾರ್ಯಕ್ರಮದ ಅಡಿಯಲ್ಲಿ ಕೃಷಿ ವಸ್ತು ಪ್ರದರ್ಶನವನ್ನು ಏರ್ಪಡಿಸಲಾಗಿತ್ತು. ಈ ವಸ್ತು ಪ್ರದರ್ಶನದಲ್ಲಿ ಕೃಷಿಗೆ ಸಂಬಂಧಪಟ್ಟ ಹಲವು ಉಪಯುಕ್ತ ವಸ್ತುಗಳನ್ನು ಪ್ರದರ್ಶಿಸುವುದರ ಜೊತೆಗೆ ಆಧುನಿಕ ಕೃಷಿ ಮಾಹಿತಿಯನ್ನು ರೇಷ್ಮೆ ಕೃಷಿ ಕಾಲೇಜಿನ ಪ್ರಾಧ್ಯಾಪಕರು ಹಾಗೂ ವಿವಿಧ ಇಲಾಖೆಯ ವಿಷಯ ತಜ್ಞರು ನೀಡಿದರು.

ಶಿಡ್ಲಘಟ್ಟ ತಾಲ್ಲೂಕಿನ ದೇವರಮಳ್ಳೂರು ಗ್ರಾಮದಲ್ಲಿ ಸೋಮವಾರ ಚಿಂತಾಮಣಿ ರೇಷ್ಮೆ ಕೃಷಿ ಮಹಾವಿದ್ಯಾಲಯ ಹಾಗೂ ಬೆಂಗಳೂರಿನ ಕೃಷಿ ವಿಶ್ವವಿದ್ಯಾಲಯದ ವತಿಯಿಂದ ಕೃಷಿ ವಸ್ತು ಪ್ರದರ್ಶನವನ್ನು ಏರ್ಪಡಿಸಲಾಗಿತ್ತು.
ಶಿಡ್ಲಘಟ್ಟ ತಾಲ್ಲೂಕಿನ ದೇವರಮಳ್ಳೂರು ಗ್ರಾಮದಲ್ಲಿ ಸೋಮವಾರ ಚಿಂತಾಮಣಿ ರೇಷ್ಮೆ ಕೃಷಿ ಮಹಾವಿದ್ಯಾಲಯ ಹಾಗೂ ಬೆಂಗಳೂರಿನ ಕೃಷಿ ವಿಶ್ವವಿದ್ಯಾಲಯದ ವತಿಯಿಂದ ಕೃಷಿ ವಸ್ತು ಪ್ರದರ್ಶನವನ್ನು ಏರ್ಪಡಿಸಲಾಗಿತ್ತು.

ಕಳೆದ ಮೂರು ತಿಂಗಳಿನಿಂದ ದೇವರಮಳ್ಳೂರು ಗ್ರಾಮದಲ್ಲಿ ಬೀಡುಬಿಟ್ಟು ಸ್ಥಳೀಯ ಬೆಳೆಗಳು, ರೈತರ ಸಮಸ್ಯೆಗಳು, ಮಳೆ, ಭೂಮಿ, ಕೃಷಿ ಪದ್ಧತಿಗಳ ಬಗ್ಗೆ ಅಧ್ಯಯನ ಮಾಡಿ ಗ್ರಾಮೀಣ ಅನುಭವ ಪಡೆದು ರೈತರೊಂದಿಗೆ ಸಂವಾದಿಸಿದ್ದ ಅಂತಿಮ ವರ್ಷದ ಬಿ.ಎಸ್ಸಿ(ಕೃಷಿ ಮತ್ತು ರೇಷ್ಮೆ ಕೃಷಿ) ವಿದ್ಯಾರ್ಥಿಗಳು ರೈತರಿಗೆ ಉಪಯುಕ್ತವಾಗುವ ರೀತಿಯಲ್ಲಿ ಕೃಷಿ ವಸ್ತು ಪ್ರದರ್ಶನವನ್ನು ಏರ್ಪಡಿಸಿರುವುದಾಗಿ ಪ್ರಾಧ್ಯಾಪಕರೊಬ್ಬರು ತಿಳಿಸಿದರು.
ಕೃಷಿ, ತೋಟಗಾರಿಕೆ, ರೇಷ್ಮೆಕೃಷಿ, ಪಶುವೈದ್ಯ ತಜ್ಞರು, ಮೀನುಗಾರಿಕೆ, ಸಾಮಾಜಿಕ ಅರಣ್ಯ ಇಲಾಖೆ ಅಧಿಕಾರಿಗಳು ಭಾಗವಹಿಸಿದ್ದರು.
ಸಮಗ್ರ ಪೋಷಕಾಂಶಗಳ ನಿರ್ವಹಣೆ, ಕಾಂಪೋಸ್ಟ್ ಗೊಬ್ಬರ ತಯಾರಿಕೆ, ಸಾವಯವ ಕೃಷಿ, ಎರೆಹುಳು ಗೊಬ್ಬರ, ಸಮಗ್ರ ಕೃಷಿ ಪದ್ಧತಿಗಳು, ಮಣ್ಣಿನ ಆರೋಗ್ಯ, ಸಮಗ್ರ ರೋಗಗಳ ನಿರ್ವಹಣೆ, ಹಿಪ್ಪುನೇರಳೆ ಬೇಸಾಯ, ಜೈವಿಕ ಇಂಧನ, ರೇಷ್ಮೆ ಹುಳು ಸಾಕಾಣಿಕೆ, ಮಾವಿನ ಮತ್ತು ಗೋಡಂಬಿ ಬೇಸಾಯ ಕ್ರಮಗಳು, ಹೈನುಗಾರಿಕೆ ಕುರಿತಂತೆ ಮಾಹಿತಿ ತಿಳಿಸುವ ವಸ್ತುಪ್ರದರ್ಶನದ ಮಳಿಗೆಗಳಿದ್ದವು. ಅಜೊಲ್ಲಾ ಬಗ್ಗೆ ಅರಿವು, ಉತ್ತಮ ರಾಸುಗಳ ಪ್ರದರ್ಶನ, ವಿಜ್ಞಾನಿಗಳು ಮತ್ತು ರೈತರಿಂದ ವಿಚಾರ ವಿನಿಮಯ ವಿಶೇಷವಾಗಿತ್ತು.
ದೇವರಮಳ್ಳೂರು ಹಾಗೂ ಸುತ್ತಮುತ್ತಲಿನ ಗ್ರಾಮಗಳಿಂದ ನೂರಾರು ರೈತರು ಭಾಗವಹಿಸಿದ್ದರು.
ಚಿಂತಾಮಣಿ ರೇಷ್ಮೆ ಕೃಷಿ ಮಹಾವಿದ್ಯಾಲಯದ ಡಾ.ಕೆ.ಜಗದೀಶ್ವರ, ಜಿಲ್ಲಾ ಪಂಚಾಯತಿ ಸದಸ್ಯ ಎಸ್.ಎಂ.ನಾರಾಯಣಸ್ವಾಮಿ, ಗ್ರಾಮ ಪಂಚಾಯತಿ ಅಧ್ಯಕ್ಷೆ ನಳಿನಮ್ಮ ಮಂಜುನಾಥ್, ಪ್ರಾಧ್ಯಾಪಕರಾದ ಡಾ.ಗೋಪಿನಾಯ್ಕ, ಡಾ.ವಿಜಯೇಂದ್ರ, ಡಾ.ಡಿ.ವಿ.ನವೀನ್, ಡಾ.ಎಂ.ವಿ.ಶ್ರೀನಿವಾಸರೆಡ್ಡಿ, ಡಾ.ಸಿ.ನಾರಾಯಣಸ್ವಾಮಿ, ಡಾ.ಆರ್.ಎನ್.ಲಕ್ಷ್ಮೀಪತಿ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.

Subscribe to ನಮ್ಮ ಶಿಡ್ಲಘಟ್ಟ Newspaper

Launching Soon! Register for your Free Newspaper Copy Today.

- Advertisement -

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
This site is protected by reCAPTCHA and the Google Privacy Policy and Terms of Service apply.

The reCAPTCHA verification period has expired. Please reload the page.
Captcha verification failed!
CAPTCHA user score failed. Please contact us!
error: Content is protected !!