ದೇವರಮಳ್ಳೂರು ಗ್ರಾಮದಲ್ಲಿ ಶನಿವಾರ ಮಳ್ಳೂರಾಂಭ ದೇವಿಯ ರಥೋತ್ಸವ

- Advertisement -
- Advertisement -

ತಾಲ್ಲೂಕಿನ ದೇವರಮಳ್ಳೂರು ಗ್ರಾಮದಲ್ಲಿ ಶನಿವಾರ ಮಳ್ಳೂರಾಂಭ ದೇವಿಯ ರಥೋತ್ಸವವನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು.
ಅತ್ಯಂತ ಪುರಾತನ ದೇವಾಲಯವಾದ ಮಳ್ಳೂರಾಂಭ ದೇವಾಲಯದ ರಥೋತ್ಸವವು ಜಿಲ್ಲೆಯಾದ್ಯಂತ ಪ್ರಸಿದ್ಧವಾಗಿದ್ದು, ಧನುರ್ಮಾಸ ಹುಣ್ಣಿಮೆಯ ವಿಶೇಷವಾಗಿದೆ. ಇಲ್ಲಿ ನಡೆಯುವ ದನಗಳ ಜಾತ್ರೆ ವಿಶೇಷವಾಗಿದ್ದು ನೆರೆರಾಜ್ಯಗಳಿಂದಲೂ ಜನರು ದನಗಳೊಂದಿಗೆ ಆಗಮಿಸುತ್ತಾರೆ.
ವಿವಿಧ ತಾಲ್ಲೂಕುಗಳಿಂದ ಆಗಮಿಸಿದ್ದ ಜನರು ದೇವಿಯ ದರ್ಶನ ಪಡೆದು ಪೂಜೆಯಲ್ಲಿ ಪಾಲ್ಗೊಂಡು ರಥವನ್ನು ಎಳೆದರು. ದೇವರನ್ನು ವಿಶೇಷವಾಗಿ ಅಲಕರಿಸಿದ್ದರು. ಬ್ರಹ್ಮರಥೋತ್ಸವಕ್ಕೆ ರಥವನ್ನು ವಿಶೇಷವಾಗಿ ಅಲಂಕರಿಸಿ ದಾರಿಯುದ್ದಕ್ಕೂ ತಳಿರು ತೋರಣಗಳಿಂದ ಸಿಂಗರಿಸಿದ್ದರು. ಭಕ್ತರಿಗೆ ಅನ್ನಸಂತರ್ಪಣೆ ನಡೆಯಿತು.
ವೀರಗಾಸೆ, ತಮಟೆ ವಾದನ ಆಕರ್ಷಕವಾಗಿತ್ತು. ತಿಂಡಿ ತಿನಿಸುಗಳು, ಆಟಿಕೆಗಳು, ಅಚ್ಚೆ ಹಾಕುವವರು, ದಿನೋಪಯೋಗಿ ವಸ್ತುಗಳು ಸೇರಿದಂತೆ ಬಹುತೇಕ ಅಂಗಡಿಗಳು ತೆರೆದಿದ್ದು ಜನಾಕರ್ಷಕವಾಗಿದ್ದವು.
ಶಾಸಕ ಎಂ.ರಾಜಣ್ಣ ಮತ್ತು ತಹಶೀಲ್ದಾರ್ ಜಿ.ಎ.ನಾರಾಯಣಸ್ವಾಮಿ ರಥೋತ್ಸವಕ್ಕೆ ಚಾಲನೆ ನೀಡಿದರು. ಜಿಲ್ಲಾ ಪಂಚಾಯತಿ ಸದಸ್ಯೆ ಶಿವಲೀಲಾ ರಾಜಣ್ಣ, ರಜಸ್ವ ನಿರೀಕ್ಷಕ ಸುಬ್ರಮಣಿ, ಡಿ.ಎ.ಮಳ್ಳೂರಯ್ಯ, ರೆಡ್ಡಿಸ್ವಾಮಿ, ಛಾಯಾರಮೇಶ್ ಮತ್ತಿತರರು ಪೂಜಾಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Sidlaghatta News Desk
Sidlaghatta News Deskhttp://www.sidlaghatta.com
The editorial desk of Sidlaghatta.com (Namma Shidlaghatta), covering civic affairs, agriculture, silk trade, and local government news for Sidlaghatta taluk, Karnataka.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!