23.1 C
Sidlaghatta
Wednesday, October 29, 2025

ದೇಶ ಸುತ್ತುವ ಮೂಲಕ ಜ್ಞಾನ ಸಂಪಾದಿಸಿ

- Advertisement -
- Advertisement -

ದೇಶ ಸುತ್ತು ಕೋಶ ಓದು ಎನ್ನುವುದು ನಮ್ಮ ನಾಡಿನ ಹಿರಿಯರು ರೂಪಿಸಿದ ನಾಣ್ಣುಡಿ. ಈ ಮಾತು ನಮ್ಮ ದೇಶದ ಭವ್ಯ ಪರಂಪರೆಯನ್ನು ಸೂಚಿಸುತ್ತದೆ. ದೇಶ ಸುತ್ತುವುದು ಎಂದರೆ ಪ್ರವಾಸ ಮಾಡುವುದು. ಆ ಮೂಲಕ ಜ್ಞಾನ ಸಂಪಾದಿಸುವುದಾಗಿದೆ ಎಂದು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ರಘುನಾಥರೆಡ್ಡಿ ತಿಳಿಸಿದರು.
ನಗರದ ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ಶುಕ್ರವಾರ ತಾಲ್ಲೂಕಿನ ಒಟ್ಟು ೨೦೦ ಪ್ರೌಢಶಾಲೆ ವಿದ್ಯಾರ್ಥಿಗಳ ಕರ್ನಾಟಕ ದರ್ಶನ ಪ್ರವಾಸಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಪ್ರೌಢಶಾಲೆ ವಿದ್ಯಾರ್ಥಿಗಳು ಪ್ರವಾಸವನ್ನು ಒಂದು ಅಧ್ಯಯನವನ್ನಾಗಿ ಪರಿಗಣಿಸಿ ತಾವು ನೋಡುವ ಐತಿಹಾಸಿಕ ಹಾಗು ಪ್ರೇಕ್ಷಣೀಯ ಸ್ಥಳಗಳ ಬಗ್ಗೆ ಮಾಹಿತಿ ಸಂಗ್ರಹಿಸಿ ತಮ್ಮ ವಿದ್ಯಾರ್ಥಿ ಜೀವನವನ್ನು ಇನ್ನಷ್ಟು ಸಾರ್ಥಕ ಪಡಿಸಿಕೊಳ್ಳಬೇಕು. ಸರ್ಕಾರಿ ಶಾಲೆಯಲ್ಲಿ ಓದುವಂತಹ ವಿದ್ಯಾರ್ಥಿಗಳಿಗೆ ಕರ್ನಾಟಕದ ಐತಿಹಾಸಿಕ ಹಾಗೂ ಪ್ರೇಕ್ಷಣೀಯ ಸ್ಥಳಗಳನ್ನು ನೋಡುವ ಅವಕಾಶವನ್ನು ಸರ್ಕಾರ ಕಲ್ಪಿಸಿದ್ದು ವಿದ್ಯಾರ್ಥಿಗಳು ಪ್ರವಾಸದ ಸದುಪಯೋಗ ಪಡೆದುಕೊಳ್ಳಬೇಕು ಎಂದರು.
ಉತ್ತರಕರ್ನಾಟಕದ ಹಂಪಿ, ಆಲಮಟ್ಟಿ, ಬಾದಾಮಿ, ಐಹೊಳೆ, ಪಟ್ಟದಕಲ್ಲು, ಕೂಡಲಸಂಗಮ, ಚಿತ್ರದುರ್ಗ, ವಿಜಯಪುರ ಸೇರಿದಂತೆ ವಿವಿಧ ಪ್ರೇಕ್ಷಣೀಯ ಸ್ಥಳಗಳಿಗೆ ತಾಲ್ಲೂಕಿನಿಂದ ಕರ್ನಾಟಕ ದರ್ಶನ ಪ್ರವಾಸಕ್ಕೆ ಈ ಬಾರಿ ೨೦೦ ಮಂದಿ ವಿದ್ಯಾರ್ಥಿಗಳು ಆಯ್ಕೆಯಾಗಿದ್ದು ೧೦೦ ಬಾಲಕರು ಸೇರಿದಂತೆ ೧೦೦ ಬಾಲಕಿಯರು ಪ್ರವಾಸ ಹೊರಟರು.
ಈ ಸಂದರ್ಭದಲ್ಲಿ ಶಿಕ್ಷಕರಾದ ಲಕ್ಷ್ಮಿನರಸೇಗೌಡ, ವೆಂಕಟರೆಡ್ಡಿ, ವಿಠ್ಠಲ್, ಗಣೇಶ್, ಮೂರ್ತಿ, ಪೊನ್ನಮ್ಮ, ವಿದ್ಯಾ, ಬೃಂದ, ಸುಮಾ ಮತ್ತಿತರರು ಹಾಜರಿದ್ದರು.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!