ದ್ವೇಷ ರಾಜಕಾರಣ ಮಾಡುವುದು ಎಷ್ಟು ಸರಿ?

- Advertisement -
- Advertisement -

ಜಿಲ್ಲಾ ಪಂಚಾಯಿತಿ ಸದಸ್ಯ ಕೆ.ಸಿ.ರಾಜಾಕಾಂತ್ ಅವರು ಅಕ್ರಮ ಆಸ್ತಿ ಸಂಪಾದನೆ ಮಾಡಿದ್ದಾರೆ ಎಂದು ಆರೋಪ ಮಾಡಿರುವುದರ ಜೊತೆಗೆ ಅವರ ವೈಯಕ್ತಿಕ ವಿಚಾರದ ಬಗ್ಗೆ ಮಾತನಾಡಿರುವ ಕೆ.ಪಿ.ಸಿ.ಸಿ,ಸದಸ್ಯ ಎಸ್.ಪಿ. ಶ್ರೀನಿವಾಸ್ ಅವರು ದಾಖಲೆಗಳನ್ನು ಬಿಡುಗಡೆ ಮಾಡದಿದ್ದರೆ ಉಗ್ರವಾದ ಹೋರಾಟ ಮಾಡುತ್ತೇವೆ ಎಂದು ದಲಿತ ಸಂಘರ್ಷ ಸಮಿತಿ ಪದಾಧಿಕಾರಿಗಳು ಹೇಳಿದರು.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಸಂಚಾಲ ಎಸ್.ಜಿ.ನಾರಾಯಣಸ್ವಾಮಿ ಮಾತನಾಡಿ, ಕೆ.ಪಿ.ಸಿ.ಸಿ.ಸದಸ್ಯರಾಗಿರುವ ಎಸ್.ಪಿ.ಶ್ರೀನಿವಾಸ್ ಅವರು, ಅಕ್ರಮ ಮರಳು ದಂಧೆಯಲ್ಲಿ ತೊಡಗಿದ್ದಾರೆ. ಶಾಸಕರ ಹೆಸರೇಳಿಕೊಂಡು ಎಲ್ಲಾ ಕಚೇರಿಗಳಲ್ಲಿ ಮಾಮೂಲಿ ವಸೂಲಿ ಮಾಡುತ್ತಿದ್ದಾರೆ.
ಹಾಲಿ ಶಾಸಕ ಹಾಗೂ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಪಿ.ಎನ್.ಕೇಶವರೆಡ್ಡಿ ಅವರ ಕೈ ಗೊಂಬೆಯಾಗಿ ಕೆಲಸ ಮಾಡುತ್ತಿದ್ದು, 20 ವರ್ಷಗಳಿಂದ ನಿರಂತರವಾಗಿ ಬಡವರ ಪರವಾಗಿ ಹೋರಾಟಗಳನ್ನು ಮಾಡಿಕೊಂಡು ಬರುತ್ತಿರುವ ರಾಜಾಕಾಂತ್ ಅವರ ಮೇಲೆ ಇಲ್ಲಸಲ್ಲದ ಆರೋಪಗಳನ್ನು ಮಾಡಿದ್ದಾರೆ.
ಒಬ್ಬ ಜಿಲ್ಲಾ ಪಂಚಾಯಿತಿ ಸದಸ್ಯರಾಗಿ ಕಾಂಗ್ರೆಸ್ ಸದಸ್ಯರೇ ಸಾಮಾನ್ಯ ಸಭೆಗಳಲ್ಲಿ ಭಾಗವಹಿಸುತ್ತಿಲ್ಲ, ಈ ಕುರಿತು ನೀವೇನು ಕ್ರಮ ಕೈಗೊಂಡಿದ್ದೀರಿ ಎಂದು ಅಧ್ಯಕ್ಷರನ್ನು ಕೇಳಿದ ಮಾತ್ರಕ್ಕೆ ಈ ರೀತಿಯಾಗಿ ದ್ವೇಷ ರಾಜಕಾರಣ ಮಾಡುವುದು ಎಷ್ಟು ಸರಿ ಎಂದು ಪ್ರಶ್ನಿಸಿದರು.
ಜಿಲ್ಲಾ ಸಂಚಾಲಕ ಸಿ.ಎಂ.ಮುನಿಯಪ್ಪ ಮಾತನಾಡಿ, ಚಿಕ್ಕಬಳ್ಳಾಪುರ ತಾಲ್ಲೂಕಿನಲ್ಲಿ ದಲಿತರ ದ್ವನಿಯಡಿಗಿಸುವಂತಹ ಹುನ್ನಾರಗಳು ನಡೆಯುತ್ತಿವೆ. ಚಿಕ್ಕಬಳ್ಳಾಪುರ ಉಪವಿಭಾಗಾಧಿಕಾರಿಗಳ ಕಚೇರಿಯಲ್ಲಿ ನಡೆದಿರುವ ಪ್ರಕರಣದ ಕುರಿತು ರಾಜ್ಯ ಸರ್ಕಾರವೇ ಸಾಕ್ಷ್ಯಾಧಾರ ಇಲ್ಲದ ಕಾರಣ, ಪ್ರಕರಣವನ್ನು ವಜಾಗೊಳಿಸಿದೆ. ಈ ಕುರಿತು ಪುನಃ ಪ್ರಸ್ತಾಪಿಸಿರುವ ಅವರಿಗೆ ಕನಿಷ್ಟ ಜ್ಞಾನವಿಲ್ಲ. ದಲಿತ ಮುಖಂಡನೆಂಬ ಕಾರಣಕ್ಕಾಗಿ ಅವರ ತೇಜೋವಧೆಗೆ ಇಳಿದಿರುವ ಶಾಸಕ ಸುಧಾಕರ್, ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಪಿ.ಎನ್.ಕೇಶವರೆಡ್ಡಿ, ಹಾಗೂ ಕೆ.ಪಿ.ಸಿ.ಸಿ.ಸದಸ್ಯ ಎಸ್.ಪಿ.ಶ್ರೀನಿವಾಸ್ ಅವರು ದಾಖಲೆಗಳ ಸಮೇತವಾಗಿ ಬಹಿರಂಗ ಚರ್ಚೆಗೆ ಬರಬೇಕು ಎಂದು ಒತ್ತಾಯಿಸಿದರು.
ತಾಲ್ಲೂಕು ಸಂಚಾಲಕ ಎನ್.ಎ.ವೆಂಕಟೇಶ್ ಮಾತನಾಡಿ, ಸ್ವಪಕ್ಷೀಯ ಸದಸ್ಯರಿಂದ ಬೆಂಬಲ ಪಡೆಯಲು ವಿಫಲವಾಗಿ ಹತಾಶರಾಗಿರುವ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಕೇಶವರೆಡ್ಡಿ ಅವರು, ತಮ್ಮ ಹಿಂಬಾಲಕ ಶ್ರೀನಿವಾಸ್ ಅವರ ಮೂಲಕ ಹೇಳಿಕೆ ಕೊಡುತ್ತಿದ್ದಾರೆ. ಇದು ಖಂಡನೀಯ ಅವರು, ಈ ಕೆಲಸ ಮಾಡುವುದನ್ನು ಬಿಟ್ಟು, ಕ್ಷೇತ್ರದ ಅಭಿವೃದ್ಧಿಯ ಕಡೆಗೆ ಗಮನಹರಿಸಲಿ, ನಾವು ರಾಜ್ಯಾಧ್ಯಂತ ಉಗ್ರವಾದ ಹೋರಾಟ ಮಾಡುವ ಮೂಲಕ ತಾಲ್ಲೂಕು, ಜಿಲ್ಲೆ, ರಾಜ್ಯದಾದ್ಯಂತ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದರು.
ತಾಲ್ಲೂಕು ಸಂಚಾಲಕ ಟಿ.ಎ.ಚಲಪತಿ, ಜಿಲ್ಲಾ ಸಂಚಾಲಕ ಆನಂದ್, ತಿರುಮಳಪ್ಪ, ಲಕ್ಷ್ಮಣ್, ಇದ್ದರು

Sidlaghatta News Desk
Sidlaghatta News Deskhttp://www.sidlaghatta.com
The editorial desk of Sidlaghatta.com (Namma Shidlaghatta), covering civic affairs, agriculture, silk trade, and local government news for Sidlaghatta taluk, Karnataka.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!