21.1 C
Sidlaghatta
Thursday, January 15, 2026

ನಗದು ರಹಿತ ವ್ಯವಹಾರವನ್ನು ರೂಢಿಸಿಕೊಳ್ಳಬೇಕು

- Advertisement -
- Advertisement -

ವಿದೇಶಗಳಲ್ಲಿ ಜನಪ್ರಿಯವಾಗಿರುವ ನಗದು ರಹಿತ ವ್ಯವಹಾರವನ್ನು ದೇಶದಲ್ಲಿ ಯಶಸ್ವಿಗೊಳಿಸಿಬೇಕೆಂದು ಪ್ರಗತಿ ಕೃಷ್ಣ ಗ್ರಾಮೀಣ ಬ್ಯಾಂಕಿನ ವ್ಯವಸ್ಥಾಪಕ ಬಸವರಾಜ್ ಕರೆ ನೀಡಿದರು.
ತಾಲ್ಲೂಕಿನ ಬೂದಾಳ ಗೇಟ್ ಬಳಿಯಿರುವ ಗರುಡಾದ್ರಿ(ರಾಯಲ್) ಶಾಲೆಯ ೪ನೇ ವಾರ್ಷಿಕೋತ್ಸವ ವಿದ್ಯಾತರಂಗ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಮಾತನಾಡಿದರು.
ವಿದೇಶಗಳಲ್ಲಿ ಇಂಟರ್‌ನೆಟ್ ಬ್ಯಾಂಕಿಂಗ್ ವ್ಯವಸ್ಥೆಗಳನ್ನು ಅಳವಡಿಸಿಕೊಂಡು ಅಲ್ಲಿನ ನಾಗರಿಕರು ನಗದು ರಹಿತ ವ್ಯವಹಾರ ನಡೆಸಿ ಯಶಸ್ವಿಯಾಗಿದ್ದಾರೆ. ಹಾಗೆಯೇ ನಮ್ಮ ದೇಶದಲ್ಲಿ ಸಹ ಪ್ರತಿಯೊಬ್ಬ ನಾಗರಿಕರು ಬ್ಯಾಂಕಿನಲ್ಲಿ ಖಾತೆಯನ್ನು ತೆರೆದು ವ್ಯವಹರಿಸುವ ಮೂಲಕ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಕ್ಯಾಷಲೆಸ್ ಕನಸು ನನಸು ಮಾಡಬೇಕೆಂದರು.
ಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿ ಪರೀಕ್ಷೆಗಳಲ್ಲಿ ಹೆಚ್ಚು ಅಂಕಗಳಿಸಬೇಕೆಂದು ವಿದ್ಯಾರ್ಥಿಗಳ ಮೇಲೆ ಪೋಷಕರು ಒತ್ತಡ ಹೇರುವ ಕೆಲಸವನ್ನು ಮಾಡಬಾರದೆಂದು ಮನವಿ ಮಾಡಿದ ಅವರು ವಿದ್ಯಾರ್ಥಿಗಳಿಗೆ ಮುಕ್ತ ವಾತಾವರಣದಲ್ಲಿ ಕಲಿಕೆಗೆ ಅವಕಾಶ ಕಲ್ಪಿಸಬೇಕೆಂದರು.
ವಿದ್ಯಾರ್ಥಿಗಳು ಜೀವನದಲ್ಲಿ ಶಿಸ್ತು ರೂಡಿಸಿಕೊಂಡು ಶ್ರದ್ದೆಯಿಂದ ವ್ಯಾಸಂಗ ಮಾಡಿ ಸಮಾಜದಲ್ಲಿ ಉತ್ತಮ ನಾಗರಿಕರಾಗಿ ಉನ್ನತಸ್ಥಾನಗಳನ್ನು ಅಲಂಕರಿಸಬೇಕೆಂದರು.
ಇದೇ ಸಂದರ್ಭದಲ್ಲಿ ಶಾಲಾ ಆಡಳಿತ ಮಂಡಳಿಯ ಚಂದ್ರಮೋಹನ್ ಹಾಗೂ ಪ್ರಾಂಶುಪಾಲ ಮಂಜುನಾಥ್ ಹಾಗೂ ಶಿಕ್ಷಕರು ಡಿಜಿಟಲ್ ಇಂಡಿಯಾ ಪರಿಕಲ್ಪನೆಯೊಂದಿಗೆ ಇಂಟರ್‌ನೆಟ್ ಬ್ಯಾಂಕಿಂಗ್ ವ್ಯವಸ್ಥೆ ಹಾಗೂ ಕ್ಯಾಷಲೆಸ್ ಕುರಿತು ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸಿದರು.
ಶಾಲಾ ಮಕ್ಕಳಿಂದ ಆಕರ್ಷಕ ಸಾಂಸ್ಕೃತಿಕ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಅಬ್ಲೂಡು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಕೆ.ಎಸ್.ಕನಕಪ್ರಸಾದ್, ಗರುಡಾದ್ರಿ ಶಿಕ್ಷಣ ಟ್ರಸ್ಟ್‌ನ ಅಧ್ಯಕ್ಷ ಎಂ.ಎಸ್.ಮಹೇಶ್, ಕಾರ್ಯದರ್ಶಿ ಹೆಚ್.ಮಂಜುನಾಥ್, ಟ್ರಸ್ಟಿಗಳಾದ ರವೀಂದ್ರ, ಜಿ.ಆರ್.ಮಂಜುನಾಥ್, ವಿ.ಎಂ.ಶಿವಕುಮಾರ್ ಹಾಗೂ ಶಿಕ್ಷಕರು, ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಮತ್ತು ಪೋಷಕರು ಉಪಸ್ಥಿತರಿದ್ದರು.

For Daily Updates

WhatsApp 'HI' to 7406303366

Subscribe to ನಮ್ಮ ಶಿಡ್ಲಘಟ್ಟ Newspaper

Launching Soon! Register for your Free Newspaper Copy Today.

- Advertisement -

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!