ನಗರದ ಕಾಳಿಕಾಂಬ ಕಮಠೇಶ್ವರ ಸಮುದಾಯ ಭವನದಲ್ಲಿ ಸೋಮವಾರ ನಡೆದ ನಾಲ್ಕನೇ ವರ್ಷದ ಶ್ರೀ ವಿಶ್ವಕರ್ಮ ಜಯಂತಿ ಮಹೋತ್ಸವದಲ್ಲಿ ಶಾಸಕ ವಿ.ಮುನಿಯಪ್ಪ ಮಾತನಾಡಿದರು.
ಶೈಕ್ಷಣಿಕ ಮತ್ತು ಆರ್ಥಿಕವಾಗಿ ವಿಶ್ವಕರ್ಮ ಜನಾಂಗದ ಅಭಿವೃದ್ಧಿಗೆ ಸರ್ಕಾರದ ಸೌಲಭ್ಯಗಳನ್ನು ಕೊಡಿಸುವಲ್ಲಿ ಸಹಕರಿಸುವುದಾಗಿ ಅವರು ತಿಳಿಸಿದರು.
ವಿಶೇಷ ಕುಸುರಿ ಕೌಶಲ ಹೊಂದಿರುವ ವಿಶ್ವಕರ್ಮ ಜನಾಂಗವು ವಿಶ್ವ ಮಾನ್ಯತೆ ಪಡೆದಿದೆ. ವಿಶ್ವಕರ್ಮ ಸಮುದಾಯವು ಚಿನ್ನಬೆಳ್ಳಿ ಕೆಲಸ, ಮರಗೆಲಸ, ಕಬ್ಬಿಣದ ಕೆಲಸ, ಶಿಲ್ಪಕಲೆ ಸೇರಿದಂತೆ ಪಂಚ ಕಸುಬುಗಳನ್ನು ಮಾಡುವ ಮೂಲಕ ಸಮಾಜಕ್ಕೆ ಅಪಾರ ಕೊಡುಗೆ ನೀಡಿದೆ ಎಂದರು.
ನಿವೃತ್ತ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಣಾಧಿಕಾರಿ ವೀರಬ್ರಹ್ಮಾಚಾರಿ ಮಾತನಾಡಿ, ದೇಶದಲ್ಲಿ ಸಾಮಾಜಿಕ ನ್ಯಾಯವಿಲ್ಲದಿದ್ದರೆ ಭಾರತ ದೇಶ ಪ್ರಗತಿ ಸಾಧಿಸಲು ಸಾಧ್ಯವಾಗುತ್ತಿರಲಿಲ್ಲ, ವಿಶ್ವಕರ್ಮ ಎನ್ನುವುದು ಜಾತಿಯಲ್ಲ. ಇದೊಂದು ಸಂಸ್ಕೃತಿ, ಪಾರಂಪರಿಕ ಸಂಸ್ಕೃತಿಯುಳ್ಳ ಪಂಚ ಕಸಬುಗಳು ದೇಶಕ್ಕೆ ತನ್ನದೇ ಆದ ಕೊಡುಗೆ ನೀಡಿದ್ದೇವೆ. ಆದರೂ ಎಲ್ಲಾ ರಂಗದಲ್ಲೂ ಹಿಂದೆ ಉಳಿದಿದ್ದೇವೆ. ವಿಶ್ವಕರ್ಮ ಸಂಸ್ಕೃತಿಯನ್ನು ಉಳಿಸಿ ಬೆಳೆಸಲು ಎಲ್ಲರೂ ಪ್ರಾಮಾಣಿಕವಾಗಿ ಶ್ರಮಿಸಬೇಕು ಎಂದರು.
ಪತ್ರಕರ್ತ ರೂಪಸಿ ರಮೇಶ್ ವಿಶ್ವಕರ್ಮ ಜನಾಂಗದ ಬಗ್ಗೆ ಮಾತನಾಡಿದರು.
ವಿಶ್ವಕರ್ಮ ಕ್ಷೇಮಾಭಿವೃದ್ಧಿ ಸಂಘದ ತಾಲ್ಲೂಕು ಅಧ್ಯಕ್ಷ ಅಮರನಾರಾಯಣಾಚಾರಿ, ಗೌರವಾಧ್ಯಕ್ಷ ಕೆ.ಎನ್.ಜನಾರ್ಧನಮೂರ್ತಿ, ಮುನಿರತ್ನಾಚಾರಿ, ಈಶ್ವರಾಚಾರಿ, ಜಗದೀಶ್, ಕೃಷ್ಣಾಚಾರಿ, ಶ್ರೀನಿವಾಸ್, ವೆಂಕಟಸ್ವಾಮಿರೆಡ್ಡಿ ಹಾಜರಿದ್ದರು.
- Advertisement -
- Advertisement -
- Advertisement -