Home News ನಿಧನ ವಾರ್ತೆ – ಮೇಲೂರಿನ ನಿವೃತ್ತ ಶಿಕ್ಷಕರಾದ ಬಿ.ಮುನೇಗೌಡ

ನಿಧನ ವಾರ್ತೆ – ಮೇಲೂರಿನ ನಿವೃತ್ತ ಶಿಕ್ಷಕರಾದ ಬಿ.ಮುನೇಗೌಡ

0

ಮೇಲೂರಿನ ನಿವೃತ್ತ ಶಿಕ್ಷಕರಾದ ಬಿ.ಮುನೇಗೌಡ(೬೯) ಹೃದಯಾಘಾತದಿಂದ ಶನಿವಾರ ಮೃತಪಟ್ಟಿದ್ದಾರೆ. ಮೃತರು ಇಬ್ಬರು ಹೆಣ್ಣು ಮಕ್ಕಳು ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
ಎದೆ ನೋವು ಕಾಣಿಸಿಕೊಂಡಿದ್ದು ಬೆಂಗಳೂರಿನ ಖಾಸಗಿ ಆಸ್ಪತ್ರೆಯೊಂದಕ್ಕೆ ದಾಖಲಿಸಿದ್ದು ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮೇಲೂರಿನ ಅವರ ಜಮೀನಿನಲ್ಲಿ ಶನಿವಾರ ಸಂಜೆ ಅಂತಿಮ ಸಂಸ್ಕಾರ ನೆರವೇರಿಸಲಾಯಿತು.
ಮಾಜಿ ಸಚಿವರೂ, ಕೆಪಿಸಿಸಿ ಉಪಾಧ್ಯಕ್ಷ ವಿ.ಮುನಿಯಪ್ಪ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಪ್ರಕಾಶ್, ಶಿಕ್ಷಕರ ಸಂಘದ ಅಧ್ಯಕ್ಷ ಬಿ.ವಿ.ಶ್ರೀರಾಮಯ್ಯ, ಗೌರವಾಧ್ಯಕ್ಷ ಚೀಮಂಗಲ ಮುನಿರಾಜು, ಮೇಲೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಜಮುನಾಧಮೇಂಧ್ರ, ಮಾಜಿ ಅಧ್ಯಕ್ಷ ಕೆ.ಮಂಜುನಾಥ್, ಸೂರ್ಯನರಾಯಣಗೌಡ ಮತ್ತಿತರರು ಮೃತರ ಅಂತಿಮ ದರ್ಶನ ಪಡೆದರು.

error: Content is protected !!