ಮಾಜಿ ತಾಲ್ಲೂಕು ಪಂಚಾಯತಿ ಸದಸ್ಯ, ಬಶೆಟ್ಟಹಳ್ಳಿ ಹೋಬಳಿಯ ರಾಮಲಿಂಗೇಶ್ವರ ದೇವಾಲಯದ ಕನ್ವೀನರ್ ಹಾಗೂ ಅಬಕಾರಿ ಗುತ್ತಿಗೆದಾರ ಡಿ.ಎಂ.ಶ್ರೀನಿವಾಸರೆಡ್ಡಿ(53) ಶುಕ್ರವಾರ ನಿಧನರಾಗಿದ್ದಾರೆ. ಜಾಂಡೀಸ್ನಿಂದಾಗಿ ಅನಾರೋಗ್ಯದಿಂದಿದ್ದ ಅವರಿಗೆ ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಸ್ಪಂದಿಸದೆ ಶುಕ್ರವಾರ ಮೃತಪಟ್ಟಿದ್ದಾರೆ. ಪತ್ನಿ ಮಾಜಿ ಜಿಲ್ಲಾ ಪಂಚಾಯತಿ ಸದಸ್ಯೆ ಎಂ.ಸುನೀತಾ, ಓರ್ವ ಪುತ್ರಿ ಹಾಗೂ ಅಪಾರ ಬಂಧು ಮಿತ್ರರನ್ನು ಅವರು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆಯನ್ನು ತಾಲ್ಲೂಕಿನ ದ್ಯಾವರಹಳ್ಳಿಯಲ್ಲಿನ ಅವರ ತೋಟದಲ್ಲಿ ಶನಿವಾರ ಬೆಳಿಗ್ಗೆ 10 ಗಂಟೆಗೆ ನಡೆಸಲಾಗುವುದೆಂದು ಕುಟುಂಬವರ್ಗದವರು ತಿಳಿಸಿದ್ದಾರೆ.
- Advertisement -
- Advertisement -