Home News ನೇತಾಜಿ ಸುಭಾಷ್ ಚಂದ್ರ ಬೋಸ್ ಜನ್ಮದಿನಾಚರಣೆ

ನೇತಾಜಿ ಸುಭಾಷ್ ಚಂದ್ರ ಬೋಸ್ ಜನ್ಮದಿನಾಚರಣೆ

0

ಬ್ರಿಟಿಷರ ವಸಾಹತುಶಾಹಿ ಆಡಳಿತದಿಂದ ಭಾರತಕ್ಕೆ ಮುಕ್ತಿ ಸಿಗಲು ನೇತಾಜಿಯವರು ಹೋರಾಡಲು ಪ್ರಮುಖ ಪಾತ್ರ ವಹಿಸಿದ್ದರು. ಅತ್ಯಂತ ಬುದ್ಧಿಶಾಲಿಗಳಾಗಿದ್ದ ನೇತಾಜಿಯವರು ದೇಶದ ಜನರ ಹಿತಾಸಕ್ತಿ ಬಯಸಿ, ಇಡೀ ಸಮಾಜದ ಬಡಬಗ್ಗರು ಮತ್ತು ದೀನದಲಿತರ ಏಳಿಗೆಗಾಗಿ ಶ್ರಮಿಸಿದ್ದರು ಎಂದು ಗ್ರಾಮ ಪಂಚಾಯಿತಿ ಸದಸ್ಯ ಎ.ಎಂ.ತ್ಯಾಗರಾಜ್ ತಿಳಿಸಿದರು.
ತಾಲ್ಲೂಕಿನ ಅಪ್ಪೇಗೌಡನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗುರುವಾರ ನಡೆದ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ೧೨೨ನೇ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಬ್ರಿಟೀಷರ ಆಳ್ವಿಕೆಯಲ್ಲಿದ ದೇಶವನ್ನು ಉಳಿಸಿಕೊಳ್ಳಲು ದೇಶಪ್ರೇಮದ ಜಾಗೃತಿಯ ಕಿಚ್ಚಿನೊಂದಿಗೆ ಮನೆಗೊಬ್ಬ ಯುವಕರನ್ನು ಸ್ವಾತಂತ್ರ್ಯ ಹೋರಾಟದ ಪರಿಕಲ್ಪನೆಯ ಮೂಲಕ ಕರೆತಂದು ಭಾರತೀಯ ಭೂಸೇನೆಯನ್ನು ಸ್ಥಾಪಿಸಿದ ಮಹಾನ್ ವ್ಯಕ್ತಿ ಸುಭಾಷ್ ಚಂದ್ರ ಬೋಸ್ ಎಂದು ಅವರು ಸ್ಮರಿಸಿದರು.
ವಿದ್ಯಾರ್ಥಿಗಳಾದ ತಿಲಕ್, ಕಿಶೋರ್ ಕುಮಾರ್, ರಂಜನ್, ದಿಲೀಪ್, ಪುನೀತ್ ರಾಜ್, ಮೋಹಿತ್ ಕುಮಾರ್, ರಕ್ಷಿತ್ ಕುಮಾರ್ ನೇತಾಜಿ ಕುರಿತಂತೆ ಮಾತನಾಡಿದರು.
ಮುಖ್ಯ ಶಿಕ್ಷಕಿ ಎಂ.ವಿ.ವೆಂಕಟರತ್ನಮ್ಮ, ಶಿಕ್ಷಕರಾದ ಎಸ್.ಚಾಂದ್ ಪಾಷಮ್ ಅಶೋಕ್, ಭಾರತಿ, ಸಿಬ್ಬಂದಿ ವೆಂಕಟಮ್ಮ ಹಾಜರಿದ್ದರು.

error: Content is protected !!