20.8 C
Sidlaghatta
Saturday, October 11, 2025

ನ್ಯಾಯಾಲಯದ ಕಲಾಪದಿಂದ ಹೊರಗುಳಿದ ವಕೀಲರು

- Advertisement -
- Advertisement -

ಜೆಎನ್ಯು ವಿದ್ಯಾರ್ಥಿಗಳ ವಿರುದ್ಧ ಕೇಂದ್ರ ಸರ್ಕಾರ ಸೂಕ್ತ ರೀತಿಯ ಕಾನೂನು ಕ್ರಮವನ್ನು ಕೈಗೊಳ್ಳಬೇಕೆಂದು ಒತ್ತಾಯಿಸಿ ತಾಲ್ಲೂಕು ವಕೀಲರ ಸಂಘದ ಸದಸ್ಯರು ನ್ಯಾಯಾಲಯದ ಕಲಾಪದಿಂದ ಹೊರಗುಳಿದ ಘಟನೆ ಸೋಮವಾರ ನಡೆಯಿತು.
ನಮ್ಮ ದೇಶದ ವಿರುದ್ಧ ಘೋಷಣೆಗಳನ್ನು ಕೂಗಿದ ಜೆಎನ್ಯು ವಿದ್ಯಾರ್ಥಿಗಳ ಮೇಲೆ ಸೂಕ್ತ ರೀತಿಯಲ್ಲಿ ಕ್ರಮ ಕೈಗೊಳ್ಳದೆ ಕೇಂದ್ರ ಸರ್ಕಾರ ಮೃದು ಧೋರಣೆಯನ್ನು ಅನುಸರಿಸುತ್ತಿದೆ. ಭಯೋತ್ಪಾದಕರ ಮೇಲೆ ಕಾನೂನು ಕ್ರಮ ಕೈಗೊಳ್ಳಲು ತಾಲ್ಲೂಕು ವಕೀಲರ ಸಂಘ ಬೆಂಬಲಿಸುತ್ತಿದೆ. ಈ ರೀತಿಯ ಘಟನೆಗಳು ಮರುಕಳಿಸದಂತೆ ತಕ್ಷಣ ಕ್ರಮ ಕೈಗೊಳ್ಳಬೇಕೆಂದು ವಕೀಲರು ಒತ್ತಾಯಿಸಿದರು.
ವಕೀಲರಾದ ಈ.ನಾರಾಯಣಪ್ಪ, ಡಿ.ಅಶ್ವತ್ಥನಾರಾಯಣ, ರವೀಂದ್ರನಾಥ್, ವಿ.ಸುಬ್ರಮಣ್ಯಪ್ಪ, ಎ.ನಾರಾಯಣಸ್ವಾಮಿ, ಮಂಜುನಾಥ್, ವೇಣುಗೋಪಾಲ, ಶ್ರೀನಿವಾಸ್, ಭಾಸ್ಕರ, ಚಂದ್ರಶೇಖರ್, ರಾಘವೇಂದ್ರ, ಬಾಬು, ಕೆಂಪೇಗೌಡ, ವೆಂಕಟೇಶ, ಮುನಿಶಾಮಗೌಡ, ಲಕ್ಷ್ಮಿ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!