24.2 C
Sidlaghatta
Saturday, October 11, 2025

ಪಠ್ಯೇತರ ಚಟುವಟಿಕೆಯಿಂದ ಮಕ್ಕಳ ಬೌದ್ಧಿಕ ವಿಕಸನ

- Advertisement -
- Advertisement -

ಪಠ್ಯದ ಜತೆಗೆ ಪಠ್ಯೇತರ ಚಟುವಟಿಕೆಯಿಂದ ಮಕ್ಕಳ ಬೌದ್ಧಿಕ ವಿಕಸನವಾಗುತ್ತಿದ್ದು ಈ ನಿಟ್ಟಿನಲ್ಲಿ ಮಕ್ಕಳ ಪ್ರತಿಭೆ ಅನಾವರಣಕ್ಕೆ ಪ್ರತಿಭಾ ಕಾರಂಜಿ ಸೂಕ್ತ ವೇದಿಕೆ ಎಂದು ಜಿಲ್ಲಾ ಪಂಚಾಯತಿ ಸದಸ್ಯೆ ಶಿವಲೀಲಾ ರಾಜಣ್ಣ ತಿಳಿಸಿದರು.
ತಾಲ್ಲೂಕಿನ ಪಲಿಚೇರ್ಲು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬುಧವಾರ ನಡೆದ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಉದ್ಘಾಟಿಸಿ ಅವರು ಮಾತನಾಡಿದರು.
ಶೈಕ್ಷಣಿಕ ವಿಚಾರಗಳನ್ನು ಹೊರತು ಪಡಿಸಿ ಕೂಡ ವಿದ್ಯಾರ್ಥಿಗಳಲ್ಲಿ ಸಾಕಷ್ಟು ಇತರೆ ಪ್ರತಿಭೆ ಅಡಗಿರುತ್ತದೆ. ಅಂಕಗಳ ಕಡಿಮೆ ಬಂದಾಗ ಪೋಷಕರು ಮಕ್ಕಳನ್ನು ದಂಡಿಸುತ್ತಾರೆ, ಇದು ಸರಿಯಲ್ಲ. ಮಕ್ಕಳಲ್ಲಿನ ಸುಪ್ತ ಪ್ರತಿಭೆ ಗುರುತಿಸಿ, ಪ್ರತಿಭಾ ಕಾರಂಜಿಯಂತಹ ವೇದಿಕೆಯಲ್ಲಿ ಪ್ರದರ್ಶಿಸಲು ಪೋಷಕರು ಸಹಕರಿಸಬೇಕು ಮತ್ತು ಗ್ರಾಮೀಣ ಭಾಗದ ಶಿಕ್ಷಕರು ವಿದ್ಯಾರ್ಥಿಗಳ ಸುಪ್ತ ಪ್ರತಿಭೆ ಬೆಳಕಿಗೆ ತರಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ವಿವಿಧ ವೇಷಭೂಷಣಗಳೊಂದಿಗೆ, ಹಲವಾರು ಗೀತ ಗಾಯನಗಳೊಂದಿಗೆ, ಜಾನಪದ ನೃತ್ಯ ರೂಪಕಗಳೊಂದಿಗೆ ಹಬ್ಬದ ವಾತವರಣವನ್ನು ಸ್ವಲ್ಪ ಸಮಯ ಸೃಷ್ಟಿಸಿದರು.
ಶಾಲಾ ಮುಖ್ಯ ಶಿಕ್ಷಕಿ ವಿ.ಪದ್ಮಾ, ಸಿ.ಆರ್.ಪಿ. ಚೌಡರೆಡ್ಡಿ, ಎಸ್ಡಿಎಂಸಿ ಅಧ್ಯಕ್ಷ ದ್ಯಾವಪ್ಪ, ಗ್ರಾಮ ಪಂಚಾಯತಿ ಅಧ್ಯಕ್ಷ ಗೋಪಿ, ಉಪಾಧ್ಯಕ್ಷೆ ಮಮತಾ, ಸೋಮಶೇಖರ್ರೆಡ್ಡಿ, ಟಿ.ಎಂ.ದೇವರಾಜ್, ರಾಮಚಂದ್ರ, ಲಕ್ಷ್ಮೀದೇವಮ್ಮ, ಉಲ್ಲಾಸಮ್ಮ, ಭಾಗ್ಯಮ್ಮ, ಬಸವರಾಜು, ನವೀನ್, ಶಿಕ್ಷಕರಾದ ರವಿ, ಬಾಬು ಮತ್ತಿತರರು ಕಾರ್ಯಕ್ರಮದಲ್ಲಿ ಹಾಜರಿದ್ದರು.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!