ಹಿರಿಯ ಪತ್ರಕರ್ತೆ, ಸಾಹಿತಿ, ವಿಚಾರವಾದಿ ಗೌರಿಲಂಕೇಶ್ ಅವರನ್ನು ಹತ್ಯೆಗೈದಿರುವ ಹಂತಕರನ್ನು ಬಂಧಿಸಬೇಕೆಂದು ಒತ್ತಾಯಿಸಿ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ತಹಶೀಲ್ದಾರರಿಗೆ ಬುಧವಾರ ಮನವಿಯನ್ನು ಸಲ್ಲಿಸಲಾಯಿತು.
ಪತ್ರಕರ್ತರ ಸಂಘದ ಕಚೇರಿಯಿಂದ ಪ್ರತಿಭಟನಾ ಮೆರವಣಿಗೆಯನ್ನು ನಡೆಸಿದ ಪತ್ರಕರ್ತರು ವಿಚಾರಚಂತರು ಹಾಗೂ ಬುದ್ದಿಜೀವಿಗಳ ಹತ್ಯೆಯನ್ನು ಖಂಡಿಸಿ ತಾಲ್ಲೂಕು ಕಚೇರಿಯ ಮುಂದೆ ಪ್ರತಿಭಟಿಸಿದರು.
ಈ ಹಿಂದೆಯೂ ಡಾ. ಎಮ್.ಎಮ್. ಕುಲಬುರ್ಗಿ ಅವರ ಕೊಲೆ ನಡೆದಿತ್ತು. ಮಂಗಳವಾರ ರಾತ್ರಿ ತಮ್ಮ ಮನೆಯ ಮುಂದೆಯೇ ಗೌರಿ ಲಂಕೇಶ್ ಅವರನ್ನು ಕೊಲೆ ಮಾಡಲಾಗಿದೆ. ಇದು ಪ್ರಜಾಪ್ರಭುತ್ವದ ಕಗ್ಗೊಲೆಯಾಗಿದೆ. ಈ ಹತ್ಯೆ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಕತ್ತಲಲ್ಲಿರಿಸುತ್ತದೆ. ಕುಲಬುರ್ಗಿ ಅವರ ಕೊಲೆ ಆರೋಪಿಗಳ ಪತ್ತೆ ಆಗಿಲ್ಲ. ಇದೇ ಮುಂದುವರಿದಲ್ಲಿ ಸರ್ಕಾರದ ಮೇಲೆ ನಂಬಿಕೆ ಹೋಗುತ್ತದೆ. ಈ ಕೊಲೆಯ ತನಿಖೆಯನ್ನು ಸಿಬಿಐ ಗೆ ಒಪ್ಪಿಸುವಂತೆ ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಹಾಗೂ ರಾಜ್ಯಪಾಲರಿಗೆ ತಹಶೀಲ್ದಾರ್ ಅಜಿತ್ ಕುಮಾರ್ ರೈ ಅವರ ಮೂಲಕ ಮನವಿಯನ್ನು ಸಲ್ಲಿಸಲಾಯಿತು.
ತಾಲ್ಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಚೌಡಸಂದ್ರ ಕರಗಪ್ಪ, ಕಾರ್ಯದರ್ಶಿ ಎ.ಶಶಿಕುಮಾರ್, ಡಿ.ಜಿ.ಮಲ್ಲಿಕಾರ್ಜುನ, ಜಗದೀಶ್ ಬಾಬು, ತಮೀಮ್ ಪಾಷ, ರಹಮತ್ತುಲ್ಲ, ಮುನೇಗೌಡ, ಎನ್.ಎಸ್.ವೆಂಕಟೇಶ್, ರಮೇಶ್, ಈಧರೆ ಪ್ರಕಾಶ್, ಮುನೀಂದ್ರ, ವಿಸ್ಡಂ ನಾಗರಾಜ್, ನಾಗಭೂಷಣ, ಮಿಥುನ್ ಹಾಜರಿದ್ದರು.
ಪ್ರಗತಿಪರ ಸಂಘಟನೆಗಳ ಒಕ್ಕೂಟದಿಂದ ಪ್ರತಿಭಟನೆ: ಹಿರಿಯ ಪತ್ರಕರ್ತೆ, ಚಿಂತಕಿ, ಸಾಮಾಜಿಕ ಹೋರಾಟಗಾರ್ತಿ ಗೌರಿ ಲಂಕೇಶ್ ಅವರನ್ನು ಕೊಂಡವರನ್ನು ಬಂಧಿಸುವಂತೆ ಒತ್ತಾಯಿಸಿ ಪ್ರಗತಿಪರ ಸಂಘಟನೆಗಳ ಒಕ್ಕೂಟದ ಸದಸ್ಯರು ಪ್ರತಿಭಟನೆ ನಡೆಸಿ ತಹಶೀಲ್ದಾರರಿಗೆ ಮನವಿ ಸಲ್ಲಿಸಿದರು.
ರಾಜ್ಯದಲ್ಲಿ ವಿಚಾರವಾದಿಗಳ ಮೇಲೆ ನಡೆಯುತ್ತಿರುವ ಹತ್ಯೆಗಳನ್ನು ನಿಯಂತ್ರಿಸಲು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದರು.
ದ.ಸಂ.ಸ ಜಿಲ್ಲಾ ಸಂಘಟನಾ ಸಂಚಾಲಕ ಸಿ.ಎಂ.ಮುನಿಯಪ್ಪ, ತಾಲ್ಲೂಕು ಸಂಘಟನಾ ಸಂಚಾಲಕ ಟಿ.ಎ.ಚಲಪತಿ, ಎನ್.ಎ.ವೆಂಕಟೇಶ್, ಮುನೀಂದ್ರ, ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
- Advertisement -
- Advertisement -
For Daily Updates
WhatsApp 'HI' to 7406303366
- Advertisement -
- Advertisement -







