ಸರ್ಕಾರದ ಅನುದಾನಗಳನ್ನು ಸದ್ಭಳಕೆ ಮಾಡಿಕೊಂಡು ಆರ್ಥಿಕವಾಗಿ ಸಬಲರಾಗಿ ಎಂದು ಶಾಸಕ ಎಂ.ರಾಜಣ್ಣ ತಿಳಿಸಿದರು.
ನಗರದಲ್ಲಿ ಶಾಸಕ ರಾಜಣ್ಣ ಅವರು ತಮ್ಮ ಮನೆಯ ಆವರಣದಲ್ಲಿ ಗುರುವಾರ ಅಂಬೇಡ್ಕರ್ ಅಭಿವೃದ್ಧಿ ನಿಗಮದಿಂದ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದ ಜನರಿಗೆ ಚೆಕ್ ವಿತರಣೆ ಮಾಡಿ ಮಾತನಾಡಿದರು.
ಸರ್ಕಾರ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡವರಿಗೆ ಅನೇಕ ರೀತಿಯ ಯೋಜನೆಗಳನ್ನು ಜಾರಿ ಮಾಡಿದ್ದು ಅವರಿಗೆ ಕೊಡುವ ಅನುದಾನದಲ್ಲಿ ಶೇ.50 ರಷ್ಟು ಸಹಾಯಧನ ನೀಡುತ್ತಿದ್ದು, ಉಳಿದ ಹಣವನ್ನು ಬ್ಯಾಂಕ್ ವತಿಯಿಂದ ಸಾಲ ನೀಡಲಾಗುತ್ತಿದೆ. ಸಾಲವನ್ನು ಮರುಪಾವತಿ ಮಾಡಿ ಬೇರೆಯವರಿಗೆ ಸಾಲ ನೀಡಲು ಸಹಕರಿಸಿ ಎಂದು ತಿಳಿಸಿದರು.
ಅಮಲಾ ಎಂಬುವವರಿಗೆ ರೇಷ್ಮೆ ಬಿಚ್ಚಣಿಕೆ ಉದ್ಯಮಕ್ಕೆ ೫ ಲಕ್ಷ, ಮಧು ಎಂಬುವವರಿಗೆ ರೇಷ್ಮೆ ಬಿಚ್ಚಣಿಕೆ ಉದ್ಯಮಕ್ಕೆ ೫ ಲಕ್ಷ, ನಾರಾಯಣಸ್ವಾಮಿ ಎಂಬುವವರಿಗೆ ಸೀಮೆ ಹಸುವಿಗೆ ೧ ಲಕ್ಷ ಚೆಕ್ ವಿತರಣೆ ಈ ಸಂದರ್ಭದಲ್ಲಿ ಮಾಡಲಾಯಿತು.
ಈ ಸಂದರ್ಭದಲ್ಲಿ ಅಂಬೇಡ್ಕರ್ ಅಭಿವೃದ್ಧಿ ನಿಗಮದ ಅಧಿಕಾರಿ ರಾಜಶೇಖರ್, ಪಲಾನುಭವಿಗಳು ಹಾಜರಿದ್ದರು.
- Advertisement -
- Advertisement -
- Advertisement -